Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್ಗೆ ಬೇಸರ ಮಾಡುವ ಉದ್ದೇಶ ನಮಗಿಲ್ಲ: ನಂದ ಕಿಶೋರ್
ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸುತ್ತಿರುವ ಹೊಸ ಸಿನಿಮಾದ ಮುಹೂರ್ತ ಇಂದು ನೆರವೇರಿದ್ದು ಸಿನಿಮಾಕ್ಕೆ 'ರಾಣಾ' ಎಂದು ಹೆಸರಿಡಲಾಗಿದೆ. ಈ ಸಿನಿಮಾವನ್ನು ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದಾರೆ.
'ರಾಣಾ' ಹೆಸರಿನಲ್ಲಿ ಯಶ್ ಸಿನಿಮಾ ಮಾಡುತ್ತಾರೆಂದು ಈಗಾಗಲೇ ಘೋಷಣೆ ಆಗಿತ್ತು. ಆ ಸಿನಿಮಾವನ್ನು ಹರ್ಷ ನಿರ್ದೇಶನ ಮಾಡುವುದಾಗಿ ನಿಶ್ಚಯವಾಗಿತ್ತು. ಆದರೆ ಈಗ ಅದೇ ಹೆಸರಿನಲ್ಲಿ ಸಿನಿಮಾ ಸೆಟ್ಟೇರಿದೆ.
ಮುಹೂರ್ತದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದ ನಂದ ಕಿಶೋರ್, ''ರಾಣಾ' ಹೆಸರು ನಿರ್ಮಾಪಕ ಕೆ.ಮಂಜು ಅವರ ಬಳಿಯೇ ಇತ್ತು. ಸಿನಿಮಾದ ಕತೆ ಅಂತಿಮವಾದ ಮೇಲೆ ಸೂಕ್ತ ಹೆಸರಿಗಾಗಿ ಹುಡುಕುತ್ತಿದ್ದಾಗ ಕೆ.ಮಂಜು ಅವರ ನಿರ್ಮಾಣ ಸಂಸ್ಥೆಯ ಬಳಿ ಇರುವ ಹೆಸರುಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವುದು ಎಂದಾಯಿತು. ಆಗ ನಮಗೆ ಆಕರ್ಷಕವಾಗಿ ಕಂಡಿದ್ದು 'ರಾಣಾ' ಎಂದರು ನಂದ ಕಿಶೋರ್.
ನಾವು ಮಾಡುತ್ತಿರುವ ಆಕ್ಷನ್ ಥ್ರಿಲ್ಲರ್ ಕತೆಗೆ 'ರಾಣಾ' ಹೆಸರು ಚೆನ್ನಾಗಿ ಒಪ್ಪಿಗೆ ಆಗುತ್ತದೆ ಎಂಬ ಕಾರಣಕ್ಕೆ ನಾವು ಹೆಸರು ಆಯ್ಕೆ ಮಾಡಿದೆವೇ ಹೊರತು ಯಾರಿಗಾದರೂ ಬೇಸರ ಮಾಡಬೇಕು. ಅವರ ಬಳಿಯಿಂದ ಹೆಸರನ್ನು ಎತ್ತಿಕೊಂಡ ಬರಬೇಕು ಎಂಬ ಉದ್ದೇಶ ನಮಗೆ ಇರಲಿಲ್ಲ'' ಎಂದಿದ್ದಾರೆ ನಂದ ಕಿಶೋರ್.
''ಹೊಸ ನಾಯಕರಿಗೆ ಬೇಕಾದಂತಹಾ ಪಬ್ಲಿಸಿಟಿ 'ರಾಣಾ' ಟೈಟಲ್ನಲ್ಲಿ ಇದೆ. 'ರಾಣಾ' ಹೆಸರು ಕೇಳಿದಾಗ ಆ ಹೆಸರು ನಮ್ಮ ನಾಯಕ ಶ್ರೇಯಸ್ಗೆ ಹಾಗೂ ಆತ ಮಾಡುತ್ತಿರುವ ಪಾತ್ರಕ್ಕೆ ಸೂಟ್ ಆಗುತ್ತದೆ ಎನಿಸಿತು ಹಾಗಾಗಿ ಸಿನಿಮಾಕ್ಕೆ ಅದೇ ಹೆಸರಿಟ್ಟಿದ್ದೇವೆ'' ಎಂದಿದ್ದಾರೆ ನಂದ ಕಿಶೋರ್.
Recommended Video
'ರಾಣಾ' ಸಿನಿಮಾದ ಬಗ್ಗೆ ಮಾತನಾಡಿದ ನಂದ ಕಿಶೋರ್, ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ, ದೊಡ್ಡ ಕಥಾ ಹಂದರ ಅಲ್ಲದೇ ಇದ್ದರೂ ಪ್ರಾಮಾಣಿಕ ಪ್ರಯತ್ನ ಮತ್ತು ಒಂದೊಳ್ಳೆ ಮನರಂಜನಾತ್ಮಕ ಸಿನಿಮಾ ಇದಾಗಿರಲಿದೆ'' ಎಂದಿದ್ದಾರೆ.