Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಟಸಾರ್ವಭೌಮ' ಆಡಿಯೋ ಕಾರ್ಯಕ್ರಮಕ್ಕಿಲ್ಲ 'ಐಟಿ' ಭಯ.!
Recommended Video
ನಟ ಪುನೀತ್ ರಾಜ್ ಕುಮಾರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಮನೆ ಐಟಿ ದಾಳಿ ಆಗಿರುವ ಹಿನ್ನಲೆ ಈಗಾಗಲೇ ನಿಗದಿಯಾಗಿರುವ 'ನಟಸಾರ್ವಭೌಮ' ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯುತ್ತಾ ಇಲ್ವಾ ಎಂಬ ಅನುಮಾನ ಶುರುವಾಗಿತ್ತು.
ಜನವರಿ 5ರ ಸಂಜೆ 5.30ಕ್ಕೆ ಹುಬ್ಬಳ್ಳಿಯ ನೆಹರು ಸ್ಟೇಡಿಯಂನಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಶೋನಲ್ಲಿ ಪುನೀತ್ ರಾಜ್ ಕುಮಾರ್, ರಚಿತಾ ರಾಮ್, ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಇನ್ನು ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಸ್ಯಾಂಡಲ್ ವುಡ್ ನ '8' ಶ್ರೀಮಂತ ಮನೆಗಳ ಮೇಲೆ ಐಟಿ ರೈಡ್
ಆದ್ರೆ, ಪುನೀತ್ ಮತ್ತು ರಾಕ್ ಲೈನ್ ಮನೆ ಮೇಲೆ ಆಗಿರುವ ಐಟಿ ದಾಳಿ ಎರಡನೇ ದಿನವೂ ಮುಂದುವರಿದಿದೆ. ಒಂದು ವೇಳೆ ನಾಳೆಯೂ ಪರಿಶೀಲನೆ ಮುಂದುವರಿದರೇ 'ನಟಸಾರ್ವಭೌಮ' ಆಡಿಯೋ ಕಾರ್ಯಕ್ರಮ ನಡೆಯುವುದು ಬಹುತೇಕ ಗೊಂದಲವಾಗಿಯೇ ಇತ್ತು
ನಟಸಾರ್ವಭೌಮ ಆಡಿಯೋ ಶೋನಲ್ಲಿ ಯುವರಾಜ್ ಕುಮಾರ್ ಸರ್ಪ್ರೈಸ್
ಈ ಗೊಂದಲಕ್ಕೆ ಸ್ವತಃ ನಿರ್ದೇಶಕ ಪವನ್ ಒಡೆಯರ್ ಸ್ಪಷ್ಟನೆ ನೀಡಿದ್ದು, ನಾಳೆ ನಿಗದಿಯಾಗಿರುವ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯುತ್ತೆ, ಅದಕ್ಕೆ ಯಾವುದೇ ತೊಂದರೆ ಇಲ್ಲ. ಎಲ್ಲರೂ ಬನ್ನಿ, ಕಾರ್ಯಕ್ರಮವನ್ನ ಯಶಸ್ವಿಗೊಳಿಸೋಣ. ಯಾವ ಗೊಂದಲವೂ ಇಲ್ಲ'' ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ.
ಪವನ್ ಒಡೆಯರ್ ಸ್ಪಷ್ಟನೆ ಕೇಳಿದ್ಮೇಲೂ, ಈ ಅನುಮಾನ ಹಾಗೆ ಇದೆ. ಯಾಕಂದ್ರೆ, ಪುನೀತ್ ಮತ್ತು ರಾಕ್ ಲೈನ್ ಮನೆಯಿಂದ ಐಟಿ ಅಧಿಕಾರಿಗಳು ಹೊರಹೋಗುವವರೆಗೂ ಅಭಿಮಾನಿಗಳಿಗೆ ಈ ಗೊಂದಲ ಇದ್ದೇ ಇರುತ್ತೆ. ಇನ್ನು ಸಂಜೆವರೆಗು ಸಮಯವಿದೆ. ಕಾದುನೋಡೋಣ.