Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೊಡ್ಮನೆ ಊಟದ ರುಚಿ ಸವಿದ 'ನಟ ಸಾರ್ವಭೌಮ' ತಂಡ
ಡಾ.ರಾಜ್ ಕುಮಾರ್ ಅನ್ನವನ್ನು ದೇವರು ಎಂದು ನಂಬಿದ್ದರು. ಅವರ ಮನೆಗೆ ಯಾರೇ ಬಂದರು ಊಟ ಮಾಡಿಸದೆ ಕಳುಹಿಸುತ್ತಿರಲಿಲ್ಲ. ಅಂದಹಾಗೆ, ಈಗ ದೊಡ್ಮನೆ ಊಟ ಸವಿದಿರುವವರು 'ನಟ ಸಾರ್ವಭೌಮ' ಚಿತ್ರತಂಡ.
ಪುನೀತ್ ರಾಜ್ ಕುಮಾರ್ ಸದ್ಯ 'ನಟ ಸಾರ್ವಭೌಮ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಈ ಚಿತ್ರದ ನಿರ್ದೇಶಕರ ತಂಡಕ್ಕೆ ಅಪ್ಪು ವಿಶೇಷ ಔತಣವನ್ನು ಏರ್ಪಡಿಸಿದ್ದರು. ಚಿತ್ರದ ನಿರ್ದೇಶಕ ಪವನ್ ಒಡೆಯರ್, ಹಾಸ್ಯ ನಟ ಚಿಕ್ಕಣ್ಣ, ನಿರ್ದೇಶಕ ಕುಮಾರ್ ಹಾಗೂ ನಿರ್ದೇಶಕರ ತಂಡದವರು ಒಟ್ಟಿಗೆ ಊಟ ಮಾಡಿದ್ದಾರೆ.
'ನಟ ಸಾರ್ವಭೌಮ' ರೀಮೇಕ್ ಚಿತ್ರ ಅಲ್ಲ: ಸುಳ್ಳು ಸುದ್ದಿ ನಂಬಬೇಡಿ.!
ಅಪ್ಪು ನಿವಾಸದಲ್ಲಿ ಊಟ ಸವಿದ ವಿಚಾರವನ್ನು ಚಿತ್ರದ ನಿರ್ದೇಶಕ ಪವನ್ ಒಡೆಯರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪುನೀತ್ ಪತ್ನಿ ಅಶ್ವಿನಿ ಅವರ ಕೈ ರುಚಿಯನ್ನು ಹೊಗಳಿದ್ದಾರೆ.
ಅಂದಹಾಗೆ, 'ರಣವಿಕ್ರಮ' ನಂತರ ಮತ್ತೆ ಪುನೀತ್ ರಾಜ್ ಕುಮಾರ್ ಅವರಿಗೆ ಪವನ್ ಒಡೆಯರ್ ಡೈರೆಕ್ಷನ್ ಮಾಡುತ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಈಗಾಗಲೇ ನಡೆಯುತ್ತಿದೆ.