Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಕ್ಷಿಣ ಕಾಶಿಯಲ್ಲಿ ನಡೆಯುತ್ತಿದೆ 'ನಟ ಸಾರ್ವಭೌಮ'ನ ದರ್ಬಾರ್
Recommended Video
ದಕ್ಷಿಣ ಕಾಶಿ ಎಂದೇ ಹೆಸರು ವಾಸಿಯಾಗಿರುವ ಐತಿಹಾಸಿಕ ಕೇಂದ್ರ ಮಹಾಕೂಟದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಟ ಸಾರ್ವಭೌಮ' ಚಿತ್ರೀಕರಣ ಅದ್ದೂರಿಯಾಗಿ ನಡೆಯುತ್ತಿದೆ.
ಮಹಾಕೂಟೇಶ್ವರ ದೇವಾಲಯದ ಪಕ್ಕದಲ್ಲಿಯೇ ಇರುವ ಪುಷ್ಕರಣಿಯಲ್ಲಿ ಬೃಹತ್ ಸೆಟ್ ಹಾಕಿ, ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರದ ಕೈಮಾಕ್ಸ್ ಹಂತದ ಶೂಟಿಂಗ್ ಇದಾಗಿದೆ. ಕಳೆದ ಐದು ದಿನಗಳಿಂದ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣದಲ್ಲಿ ಭಾಗಿಯಾಗಿರುವ ಪುನೀತ್ ರನ್ನು ನೋಡಲು ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ.
ದಸರಾ ಹಬ್ಬಕ್ಕೆ ಪುನೀತ್ ಕಡೆಯಿಂದ ಭರ್ಜರಿ ಗಿಫ್ಟ್.!
ರಾತ್ರಿ 9 ಗಂಟೆಯಿಂದ ಪ್ರಾರಂಭವಾದ ಶೂಟಿಂಗ್ ಬೆಳಗಿನ ಜಾವ 5 ಗಂಟೆಯವರೆಗೆ ಮಾಡಲಾಗುತ್ತಿದೆ. ಈಗಾಗಲೇ ಶೂಟಿಂಗ್ ಮೇಕಿಂಗ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಜೊತೆಗೆ ನಟಿ ರಚಿತಾ ರಾಮ್ ಜೊತೆಗೆ ಕೊನೆಯ ಸೀನ್ ಚಿತ್ರೀಕರಣ ಮಾಡಲಾಗುತ್ತಿದೆ.
ಅಂದಹಾಗೆ, ಪವನ ಒಡೆಯರ್ 'ನಟ ಸಾರ್ವಭೌಮ' ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಕ್ ಲೈನ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.