Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಜಿಎಫ್' ಬಳಿಕ ನಾಳೆ ಎರಡು ಸಿನಿಮಾಗಳು ಬಿಡುಗಡೆ
ಕಳೆದ ವಾರ ಬಿಡುಗಡೆಯಾಗಿರುವ 'ಕೆಜಿಎಫ್' ಸಿನಿಮಾ ಯಶಸ್ವಿ ಪ್ರದರ್ಶನವನ್ನ ಮುಂದುವರೆಸಿದೆ. ಈ ಚಿತ್ರದ ನಡುವೆ ನಾಳೆ ಎರಡು ಕನ್ನಡ ಸಿನಿಮಾಗಳು ರಿಲೀಸ್ ಆಗುತ್ತಿವೆ.
ಸಂಚಾರಿ ವಿಜಯ್ ಮತ್ತು ಶ್ರುತಿ ಹರಿಹರನ್ ನಟನೆಯ 'ನಾತಿಚರಾಮಿ' ಹಾಗೂ ವಿನಯ್ ರಾಜ್ ಕುಮಾರ್ ಮತ್ತು ಲತಾ ಹೆಗಡೆ ಅಭಿನಯದ 'ಅನಂತು v/s ನುಸ್ರತ್' ಸಿನಿಮಾಗಳು ನಾಳೆ ಬಿಡುಗಡೆಯಾಗುತ್ತಿವೆ. ಈಗಾಗಲೇ ಹಾಡುಗಳ ಹಾಗೂ ಟ್ರೇಲರ್ ಗಳ ಮೂಲಕ ಈ ಎರಡು ಚಿತ್ರಗಳು ಗಮನ ಸೆಳೆದಿವೆ.
'ನಾತಿಚರಾಮಿ' ಸಿನಿಮಾವನ್ನು ಮಂಸೋರೆ ನಿರ್ದೇಶನ ಮಾಡಿದ್ದಾರೆ. ಸಮಾಜಕ್ಕೆ ಹತ್ತಿರ ಎನಿಸುವ ಕಥೆಯನ್ನ ತೆರೆಗೆ ತಂದಿದ್ದಾರೆ. ಸಂಧ್ಯಾರಾಣಿ ಕತೆ-ಸಂಭಾಷಣೆಯನ್ನು ಬರೆದಿದ್ದಾರೆ. ಬಿಂದು ಮಾಲಿನಿ ಅವರು ಸಂಗೀತ ನೀಡಿದ್ದಾರೆ. ಸಿನಿಮಾಗೆ ಗಾಂಧಿನಗರದಲ್ಲಿ ತ್ರಿವೇಣಿ ಚಿತ್ರಮಂದಿರ ಸಿಕ್ಕಿದೆ.
'ಅನಂತು v/s ನುಸ್ರತ್' ಸಿನಿಮಾದ ಮೂಲಕ ಮತ್ತೆ ವಿನಯ್ ರಾಜ್ ಕುಮಾರ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಲಾಯರ್ ಪಾತ್ರದಲ್ಲಿ ಅವರು ನಟಿಸಿದ್ದು, ಲಾಯರ್ ಹಾಗೂ ಜಡ್ಜ್ ನಡುವಿನ ಪ್ರೇಮಕಥೆ ಚಿತ್ರದಲ್ಲಿದೆ. ಬ್ರಾಹ್ಮಣ ಹುಡುಗ ಹಾಗೂ ಮುಸ್ಮಿಂ ಹುಡುಗಿಯ ನಡುವ ಲವ್ ಸ್ಟೋರಿಯಾಗಿದೆ.