Don't Miss!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ 'ತಿಥಿ' ಸಿನಿಮಾ ಈ ವಾರ ತೆರೆಗೆ
ನಿನ್ನೆಯಷ್ಟೇ (ಮೇ 3) ನವದೆಹಲಿಯ ವಿಜ್ಞಾನ ಭವನದಲ್ಲಿ 2015ನೇ ಸಾಲಿನ ಪ್ರತಿಷ್ಟಿತ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
'ತಿಥಿ' ಸಿನಿಮಾಗೆ ಪ್ರಾದೇಶಿಕ ವಿಭಾಗದಲ್ಲಿ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. 'ತಿಥಿ' ಚಿತ್ರದ ನಿರ್ದೇಶಕ ರಾಮ್ ರೆಡ್ಡಿ ರವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡಿದರು. [63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳು]
ಪ್ರಶಸ್ತಿ ಸ್ವೀಕರಿಸಿದ ಖುಷಿಯಲ್ಲಿರುವ 'ತಿಥಿ' ಚಿತ್ರತಂಡ ಈ ವಾರ ನಿಮ್ಮ ಮುಂದೆ ಬರುತ್ತಿದೆ. ಅರ್ಥಾತ್ 'ತಿಥಿ' ಸಿನಿಮಾ ಈ ವಾರ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.
ಈರೇಗೌಡ ರಚಿಸಿರುವ ಕಥೆಗೆ ರಾಮ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಚನ್ನೇಗೌಡ, ತಮ್ಮೇಗೌಡ, ಅಭಿಷೇಕ್ ಸೇರಿದಂತೆ ಹೊಸಬರ ದಂಡೇ ತುಂಬಿ ತುಳುಕುವ 'ತಿಥಿ' ಚಿತ್ರಕ್ಕೆ ಬಂಡವಾಳ ಹಾಕಿರುವವರು ಪ್ರತಾಪ್ ರೆಡ್ಡಿ.
ಈಗಾಗಲೇ ಸ್ವಿಟ್ಜರ್ಲ್ಯಾಂಡ್ ನಲ್ಲಿ ನಡೆದ ಲೋಕಾರ್ನೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 'ತಿಥಿ' ಚಿತ್ರಕ್ಕೆ 2 ಪ್ರಶಸ್ತಿ ಸಿಕ್ಕಿದೆ. ಜೊತೆಗೆ ರಾಷ್ಟ್ರ ಪ್ರಶಸ್ತಿಯ ಹೆಮ್ಮೆ. [ಸೆಂಚುರಿ ಗೌಡರ 'ತಿಥಿ'ಯಲ್ಲಿ ಪವರ್ ಸ್ಟಾರ್ ಪುನೀತ್]
ಇವೆಲ್ಲದರ ಜೊತೆ 'ತಿಥಿ' ಚಿತ್ರವನ್ನ ವೀಕ್ಷಿಸಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಇನ್ಯಾಕೆ ತಡ, ಸಮಾಜಕ್ಕೆ ಉತ್ತಮ ಸಂದೇಶ ಇರುವ 'ತಿಥಿ' ಚಿತ್ರವನ್ನ ಇದೇ ಶುಕ್ರವಾರ (ಮೇ 6) ನೋಡಲು ಈಗಲೇ ಟಿಕೆಟ್ ಕಾಯ್ದಿರಿಸಿ....