Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
65ನೇ ಸಾಲಿನ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ರಾಷ್ಟಪತಿ ರಾಮ್ ನಾಥ್ ಕೋವಿಂದ್ ಅವರು ಇಂದು (ಮೇ 3) ಪ್ರಶಸ್ತಿ ಪ್ರದಾನ ಮಾಡಿದರು. ದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಜೊತೆಗೆ ಮಾಹಿತಿ ಮತ್ತು ಪ್ರಸಾರಣ ಇಲಾಖೆ ಸಚಿವೆ ಸ್ಮ್ರತಿ ಇರಾನಿ, ರಾಜ್ಯವರ್ಧನ್ ಸಿಂಗ್ ರಾಥೋರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
2017ನೇ ಸಾಲಿನ ಪ್ರತಿಷ್ಟಿತ ರಾಷ್ಟ್ರ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ
ಹಿಂದಿ, ತಮಿಳು, ತೆಲುಗು ಸೇರಿದಂತೆ ಸುಮಾರು 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ದಿವಂಗತ ನಟಿ ಶ್ರೀದೇವಿ ಅವರಿಗೆ 65ನೇ ಸಾಲಿನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದ್ದು, ಅವರ ಪರವಾಗಿ ಪತಿ ಬೋನಿ ಕಪೂರ್, ಮಕ್ಕಳಾದ ಜಾಹ್ನವಿ ಕಪೂರ್, ಖುಷಿ ಕಪೂರ್ ಪ್ರಶಸ್ತಿ ಸ್ವೀಕರಿಸಿದರು. ಇದೇ ವೇಳೆ ಬಾಲಿವುಡ್ ನಟ ವಿನೋದ್ ಖನ್ನಾ ಅವರಿಗೆ ಮರೋಣತ್ತರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಯಿತು.
ಶ್ರೀದೇವಿ ಅತ್ಯುತ್ತಮ ನಟಿ
65ನೇ ಸಾಲಿನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ದಿವಂಗತ ಶ್ರೀದೇವಿಗೆ ಸಿಕ್ಕಿದ್ದು, ಅವರ ಪರವಾಗಿ ಪತಿ ಬೋನಿ ಕಪೂರ್, ಮಕ್ಕಳಾದ ಜಾಹ್ನವಿ ಕಪೂರ್, ಖುಷಿ ಕಪೂರ್ ಪ್ರಶಸ್ತಿ ಸ್ವೀಕರಿಸಿದರು.
ಹಿನ್ನೆಲೆ ಗಾಯಕಿ ಶಾಶಾ
ತಮಿಳಿನ 'ಕಾಟ್ರು ವೇಲಿಯಿಡು' ಚಿತ್ರದ ವಾನ್ ಹಾಡಿಗಾಗಿ ಶಾಶಾ ತಿರುಪತಿ ಅವರಿಗೆ ಅತ್ಯುತ್ತಮ ಹಿನ್ನಲೆ ಗಾಯಕಿ ಪ್ರಶಸ್ತಿ ಸಿಕ್ಕಿದೆ.
ಅತ್ಯುತ್ತಮ ಮನರಂಜನಾ ಚಿತ್ರ
ಎಸ್.ಎಸ್.ರಾಜಮೌಳಿ ನಿರ್ದೇಶನದ 'ಬಾಹುಬಲಿ, ದಿ ಕನ್ ಕ್ಲೂಶನ್' ಚಿತ್ರಕ್ಕೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಸಿಕ್ಕಿದ್ದು, ಈ ಪ್ರಶಸ್ತಿಯನ್ನ ಚಿತ್ರದ ನಿರ್ಮಾಪಕರು ಪಡೆದುಕೊಂಡರು.
ಅತ್ಯುತ್ತಮ ಪೋಷಕ ನಟಿ
ಇರಾದಾ ಚಿತ್ರದ ಅಭಿನಯಕ್ಕಾಗಿ ದಿವ್ಯಾ ದತ್ತಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಂದ ಪಡೆದುಕೊಂಡರು.
ಎ ಆರ್ ರೆಹಮಾನ್ ಗೆ ಎರಡು ಪ್ರಶಸ್ತಿ
ತಮಿಳಿನ 'ಕಾಟ್ರು ವೇಲಿಯಿಡು' ಚಿತ್ರಕ್ಕೆ ಅತ್ಯುತ್ತಮ ಸಂಗೀತ ನಿರ್ದೇಶನ ಹಾಗೂ ಹಿಂದಿಯ ಮಾಮ್ ಚಿತ್ರಕ್ಕೆ ಅತ್ಯುತ್ತಮ ಬ್ಯಾಕ್ ಗ್ರೌಂಡ್ ಮ್ಯೂಸಿಕ್ ವಿಭಾಗದಲ್ಲಿ ಎ.ಆರ್.ರೆಹಮಾನ್ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಇನ್ನು ಕನ್ನಡಕ್ಕೆ ಎರಡು ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು, ಪ್ರಾದೇಶಿಕ ಭಾಷೆಗಳ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಚಿತ್ರ ಹೆಬ್ಬೆಟ್ ರಾಮಕ್ಕ ಹಾಗೂ ಮಾರ್ಚ್ 22 ಚಿತ್ರದ ''ಮುತ್ತು ರತ್ನದ ಪ್ಯಾಟೆ'' ಹಾಡಿಗೆ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿ ಸಿಕ್ಕಿದೆ.