Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಸಿದ್ದರಾಮಯ್ಯ ಪರ ಸುದೀಪ್ ಪ್ರಚಾರಕ್ಕೆ ವಿಘ್ನ
Recommended Video
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಉಳಿದುಕೊಂಡಿದೆ. ಮತಯಾಚನೆ ಮಾಡಲು ಅಭ್ಯರ್ಥಿಗಳು ಬೇರೆ ಬೇರೆ ರೀತಿಯಲ್ಲಿ ಕಸರತ್ತು ಮಾಡುತ್ತಿದ್ದಾರೆ. ಪ್ರಚಾರದ ವೇಳೆ ಜನರನ್ನು ಒಟ್ಟು ಮಾಡಲು ರಾಜಕೀಯ ವ್ಯಕ್ತಿಗಳು ಸಿನಿಮಾ ಸ್ಟಾರ್ ಗಳನ್ನ ಸ್ಟಾರ್ ಪ್ರಚಾರಕರನ್ನಾಗಿ ಬಳಸಿಕೊಳ್ಳುವುದು ಹೊಸ ವಿಚಾರವೇನಲ್ಲ.
ಅದೇ ರೀತಿಯಲ್ಲಿ ಈಗಾಗಲೇ ರಾಕಿಂಗ್ ಸ್ಟಾರ್ ಯಶ್ ರೋಡ್ ಶೋ ಮೂಲಕ ತಮಗೆ ಇಷ್ಟವಾಗವ ಅಭ್ಯರ್ಥಿಗಳ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಇದೇ ವಾರದಲ್ಲಿ ಕಿಚ್ಚ ಸುದೀಪ್ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಬಾದಾಮಿ ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತಯಾಚನೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
ಚುನಾವಣೆ ಪ್ರಚಾರಕ್ಕೆ ನಟ ಯಶ್ ಧುಮುಕಿರುವುದರ ಹಿಂದಿನ ಗುಟ್ಟು ರಟ್ಟು.!
ಆದರೆ ಬಾದಾಮಿಯಲ್ಲಿರುವ ನಾಯಕ ಸಮುದಾಯದವರು ಇದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಸಿ ಎಂ ವಿರುದ್ದವಾಗಿ ಬಿಜೆಪಿ ಪಕ್ಷದಿಂದ ಶ್ರೀ ರಾಮುಲು ಕಣಕ್ಕಿಳಿದ್ದಿದ್ದಾರೆ. ಶ್ರೀರಾಮುಲು ನಾಯಕ ಸಮುದಾಯಕ್ಕೆ ಸೇರಿದವರು. ಆದ್ದರಿಂದ ಬಾದಾಮಿಯಲ್ಲಿ ಶ್ರೀರಾಮುಲು ಗೆಲ್ಲಬೇಕು ನೀವು ಸಿದ್ದರಾಮಯ್ಯ ಅವರ ಪರವಾಗಿ ಪ್ರಚಾರ ಮಾಡಬೇಡಿ ಎಂದಿದ್ದಾರೆ.
ಬಾದಾಮಿಯಲ್ಲಿ ನಾಯಕ ಸಮುದಾಯಕ್ಕೆ ಸೇರಿರುವ ಜನರು ಹೆಚ್ಚಾಗಿರುವುದರಿಂದ ಸುದೀಪ್ ಅವರನ್ನ ಸ್ಟಾರ್ ಪ್ರಚಾರಕರಾಗಿ ಅಲ್ಲಿ ಬಳಸಿಕೊಳ್ಳಲು ಕಾಂಗ್ರೆಸ್ ಪಕ್ಷ ಯೋಜನೆ ಹಾಕಿಕೊಂಡಿತ್ತು. ಆದರೆ ಅಲ್ಲಿನ ಜನರು ಇದಕ್ಕೆ ವಿರೋಧ ವ್ಯಕ್ತ ಪಡಿಸುತ್ತಿರುವುದರಿಂದ ಸುದೀಪ್ ಈಗ ಯಾವ ನಿರ್ಧಾರಕ್ಕೆ ಬರುತ್ತಾರೆ ಎನ್ನುವುದು ತೀರ ಕುತೂಹಲವನ್ನು ಉಂಟು ಮಾಡಿದೆ.
ಸಿಎಂ ಸಿದ್ಧರಾಮಯ್ಯ ಪರವಾಗಿ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ?