Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಮಂದಿರ ತೆರೆಯಲು ಅವಕಾಶ: ಗೊಂದಲಗಳಿವೆ ಎಂದ ಫಿಲ್ಮಚೇಂಬರ್ ಅಧ್ಯಕ್ಷ ಜಯರಾಜ್
ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಕೊಟ್ಟ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿರುವ ಫಿಲಂಚೇಂಬರ್ ಅಧ್ಯಕ್ಷ ಜಯರಾಜ್, ಚಿತ್ರಮಂದಿರ ತೆರೆಯುವ ಮುನ್ನಾ ಹಲವಾರು ವಿಷಯಗಳು ಇತ್ಯರ್ಥವಾಗಬೇಕಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚಿತ್ರಮಂದಿರಗಳು ತೆರೆಯುವಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ ಆದ ಬಳಿಕ, ನಿರ್ಮಾಪಕರು ಹಾಗೂ ಚಿತ್ರಪ್ರದರ್ಶಕರ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ ಜಯರಾಜ್.
ಮಾರ್ಗಸೂಚಿ ಅನುಸರಿಸುವುದು ಕಷ್ಟವಾದಲ್ಲಿ, ಸರಳಗೊಳಿಸುವಂತೆ ಮನವಿ ಮಾಡುತ್ತೇವೆ. ಯಾವ ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ, ಯಾವುದು ಯಾವ ಸಮಯದಲ್ಲಿ ಬಿಡುಗಡೆ ಆಗಬೇಕು ಎಂಬುದನ್ನು ನಿರ್ಮಾಪಕರು, ಪ್ರದರ್ಶಕರ ನಡುವೆ ಚರ್ಚೆ ನಡೆಸಲಿದ್ದೇವೆ ಎಂದಿದ್ದಾರೆ ಅವರು.
Recommended Video
ರಾಜ್ಯ ಸರ್ಕಾರದ ಬಳಿ ಕೆಲವಾರು ಮನವಿಗಳನ್ನು ನಾವು ಸಲ್ಲಿಸಿದ್ದೇವೆ. ಸರ್ಕಾರದಿಂದ ಧನಾತ್ಮಕ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇವೆ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು, ಎಲ್ಲರ ಸಹಕಾರ ಪಡೆದು ಚಿತ್ರಮಂದಿರಗಳನ್ನು ಪುನರ್ ಪ್ರಾರಂಭಗೊಳಿಸಬೇಕಿದೆ ಎಂದಿದ್ದಾರೆ ಜಯರಾಜ್.