Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಮಂದಿರ ತೆರೆಯಲು ಅವಕಾಶ: ಗೊಂದಲಗಳಿವೆ ಎಂದ ಫಿಲ್ಮಚೇಂಬರ್ ಅಧ್ಯಕ್ಷ ಜಯರಾಜ್
ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಕೊಟ್ಟ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿರುವ ಫಿಲಂಚೇಂಬರ್ ಅಧ್ಯಕ್ಷ ಜಯರಾಜ್, ಚಿತ್ರಮಂದಿರ ತೆರೆಯುವ ಮುನ್ನಾ ಹಲವಾರು ವಿಷಯಗಳು ಇತ್ಯರ್ಥವಾಗಬೇಕಿವೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚಿತ್ರಮಂದಿರಗಳು ತೆರೆಯುವಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ ಆದ ಬಳಿಕ, ನಿರ್ಮಾಪಕರು ಹಾಗೂ ಚಿತ್ರಪ್ರದರ್ಶಕರ ಜೊತೆಗೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ ಜಯರಾಜ್.
ಮಾರ್ಗಸೂಚಿ ಅನುಸರಿಸುವುದು ಕಷ್ಟವಾದಲ್ಲಿ, ಸರಳಗೊಳಿಸುವಂತೆ ಮನವಿ ಮಾಡುತ್ತೇವೆ. ಯಾವ ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ, ಯಾವುದು ಯಾವ ಸಮಯದಲ್ಲಿ ಬಿಡುಗಡೆ ಆಗಬೇಕು ಎಂಬುದನ್ನು ನಿರ್ಮಾಪಕರು, ಪ್ರದರ್ಶಕರ ನಡುವೆ ಚರ್ಚೆ ನಡೆಸಲಿದ್ದೇವೆ ಎಂದಿದ್ದಾರೆ ಅವರು.
Recommended Video
ರಾಜ್ಯ ಸರ್ಕಾರದ ಬಳಿ ಕೆಲವಾರು ಮನವಿಗಳನ್ನು ನಾವು ಸಲ್ಲಿಸಿದ್ದೇವೆ. ಸರ್ಕಾರದಿಂದ ಧನಾತ್ಮಕ ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇವೆ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು, ಎಲ್ಲರ ಸಹಕಾರ ಪಡೆದು ಚಿತ್ರಮಂದಿರಗಳನ್ನು ಪುನರ್ ಪ್ರಾರಂಭಗೊಳಿಸಬೇಕಿದೆ ಎಂದಿದ್ದಾರೆ ಜಯರಾಜ್.