Don't Miss!
- News ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದೇನು?
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಜಿ ಸಿಎಂ ಸಿದ್ದರಾಮಯ್ಯರ ಭೇಟಿಯಾದ ನೀನಾಸಂ ಸತೀಶ್: ಕಾರಣ?
ಸಿನಿಮಾ ಹಾಗೂ ರಾಜಕಾರಣದಲ್ಲಿ ಸಕ್ರಿಯರಾಗಿರುವ ವ್ಯಕ್ತಿಗಳ ನಡುವೆ ಅಂತರ ತೆಳು. ಕರ್ನಾಟಕದಲ್ಲಿ ಸಹ ಚಿತ್ರರಂಗದ ಮಂದಿ ಹಾಗೂ ರಾಜಕಾರಣಿಗಳ ನಡುವೆ ಒಳ್ಳೆಯ ಬಾಂಧವ್ಯ ಇದೆ.
ರಾಜಕಾರಣಿಗಳನ್ನು ಸಿನಿಮಾ ವೀಕ್ಷಿಸಲು ಆಹ್ವಾನಿಸುವುದು, ರಾಜಕಾರಣಿಗಳು ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಸಿನಿಮಾ ತಾರೆಯರನ್ನು ರಾಯಭಾರಿಗಳನ್ನಾಗಿ ಬಳಸಿಕೊಳ್ಳುವುದು ನಡೆಯುತ್ತಾ ಬಂದಿದೆ.
ಕೆಲವು ದಿನಗಳ ಹಿಂದಷ್ಟೆ ಸಿಎಂ ಬಸವರಾಜ ಬೊಮ್ಮಾಯಿಯವರು '777 ಚಾರ್ಲಿ' ಸಿನಿಮಾ ನೋಡಿ ಕಣ್ಣೀರು ಹಾಕಿದ್ದು ರಾಷ್ಟ್ರಮಟ್ಟದ ಸುದ್ದಿಯಾಗಿತ್ತು. ಇದೀಗ ನಟ ನೀನಾಸಂ ಸತೀಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಉದ್ದೇಶ ಸಿನಿಮಾ ಆಗಿದೆ.
ನೀನಾಸಂ ಸತೀಶ್ ನಟಿಸಿರುವ 'ಡಿಯರ್ ವಿಕ್ರಂ' ಸಿನಿಮಾ ಕೆಲವೇ ದಿನಗಳಲ್ಲಿ ತೆರೆಗೆ ಬರುತ್ತಿದೆ. ಸಿನಿಮಾವನ್ನು ವೀಕ್ಷಿಸುವಂತೆ ಸಿದ್ದರಾಮಯ್ಯ ಅವರನ್ನು ಮನವಿ ಮಾಡಲೆಂದು ನೀನಾಸಂ ಸತೀಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.
ನೀನಾಸಂ ಸತೀಶ್ ಅವರನ್ನು ತಮ್ಮನ್ನು ಭೇಟಿಯಾದ ಸಂದರ್ಭದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ''ಚಿತ್ರನಟ ಸತೀಶ್ ನೀನಾಸಂ ಅವರು ಇಂದು ನನ್ನನ್ನು ಭೇಟಿ ಮಾಡಿ ಜೂನ್ 30 ರಂದು ತೆರೆ ಕಾಣಲಿರುವ ತಾವು ನಾಯಕ ನಟನಾಗಿ ಅಭಿನಯಿಸಿರುವ, ಕೆ.ಎಸ್. ನಂದೀಶ್ ನಿರ್ದೇಶನದ 'ಡಿಯರ್ ವಿಕ್ರಮ್' ಸಿನಿಮಾ ವೀಕ್ಷಿಸಲು ಆಹ್ವಾನ ನೀಡಿದರು. ಪ್ರಗತಿಪರ ಆಶಯಗಳೊಂದಿಗೆ ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿರುವ ಈ ಚಿತ್ರ ಯಶಸ್ವಿಯಾಗಲಿ, ಇಂಥಾ ಚಿತ್ರಗಳ ಸಂಖ್ಯೆ ನೂರಾಗಲಿ'' ಎಂದು ಹಾರೈಸಿದ್ದಾರೆ.
ನೀನಾಸಂ ಸತೀಶ್ ಅವರು ಮಾಜಿ ಸಿಎಂ ಭೇಟಿಯಾದ ಸಂದರ್ಭದಲ್ಲಿ ಜೊತೆಯಾಗಿ ಸಾಹಿತಿ, ಪತ್ರಕರ್ತ ನಟರಾಜ್ ಹುಳಿಯಾರ್ ಸಹ ಇದ್ದರು.
'ಡಿಯರ್ ವಿಕ್ರಂ' ಸಿನಿಮಾವು ನಕ್ಸಲ್ ಕತೆಯನ್ನು ಒಳಗೊಂಡಿರುವ ಸಿನಿಮಾ ಆಗಿದೆ. ಸಿನಿಮಾದಲ್ಲಿ ನಕ್ಸಲ್ ಗುಂಪಿನ ಸದಸ್ಯನ ಪಾತ್ರದಲ್ಲಿ ನೀನಾಸಂ ಸತೀಶ್ ನಟಿಸಿದ್ದಾರೆ. ಐಡಿಯಾಲಜಿ ಹಾಗೂ ವಾಸ್ತವವತೆಯ ನಡುವಿನ ಹೋರಾಟದ ಕತನವನ್ನೂ ಈ ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ನಾಯಕಿಯಾಗಿ ಶ್ರದ್ಧಾ ಶ್ರೀನಾಥ್ ನಟಿಸಿದ್ದಾರೆ. ವಸಿಷ್ಠ ಸಿಂಹ ಸಹ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. 'ಡಿಯರ್ ವಿಕ್ರಂ' ಸಿನಿಮಾವನ್ನು ಕೆ.ಎಸ್.ನಂದೀಶ್ ನಿರ್ದೇಶನ ಮಾಡಿದ್ದಾರೆ.