Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಗಾರು ಮಳೆಯಲ್ಲಿ ಗಣೇಶ್ ಜೊತೆಯಾದ ಕುಡ್ಲದ ಬಾಲೆ
2006 ಡಿಸೆಂಬರ್ 26ರಂದು ತೆರೆ ಕಂಡಿದ್ದ ನಿರ್ದೇಶಕ ಯೋಗರಾಜ ಭಟ್ಟರ ಅದ್ಭುತ ಚಿತ್ರ 'ಮುಂಗಾರು ಮಳೆ' ಎಲ್ಲಾ ಯುವಜನತೆಯಲ್ಲಿ ಸಂಚಲನ ಮೂಡಿಸಿತ್ತು. ಹಾಡುಗಳಂತೂ ಎಲ್ಲೆಡೆ ಸಖತ್ ಸೌಂಡ್ ಮಾಡಿತ್ತು. ಗಣೇಶ್, ಸಂಜನಾ ಗಾಂಧಿ, ಲೀಡ್ ರೋಲ್ ನಲ್ಲಿ ಕಾಣಿಸಿಕೊಂಡು ಮಳೆಯಲ್ಲಿ ನೆನೆದಿದ್ದರು.
ಅಂದು ಭಟ್ರು ತಮ್ಮ ಚಿತ್ರಕ್ಕೆ ಹೊಸ ಹುಡುಗಿ ಸಂಜನಾ ಗಾಂಧಿಯನ್ನು ಕರೆತಂದು ಸ್ಯಾಂಡಲ್ ವುಡ್ ಗೆ ಪರಿಚಯ ಮಾಡಿಕೊಟ್ಟಿದ್ದು, ಅದೇ ಸಂಜನಾ ಗಾಂಧಿ ಇದೀಗ ಪೂಜಾ ಗಾಂಧಿಯಾಗಿ ಇತ್ತೀಚೆಗೆ ಗಾಂಧಿನಗರದಲ್ಲಿ ಸುದ್ದಿ ಮಾಡುತ್ತಿರುವುದು. ಎಲ್ಲಾ ನಿಮಗೆ ಗೊತ್ತಿರುವ ವಿಚಾರ ತಾನೇ.
ಇದೀಗ 2015 ರಲ್ಲಿ ನಿರ್ದೇಶಕ ಶಶಾಂಕ್ ಆಕ್ಷನ್-ಕಟ್ ಹೇಳಲಿರುವ, ಮತ್ತೆ ಗೋಲ್ಡನ್ ಸ್ಟಾರ್ ಗಣೇಶ್ ಕಾಣಿಸಿಕೊಂಡಿರುವ 'ಮುಂಗಾರು ಮಳೆ 2' ಚಿತ್ರಕ್ಕೆ ನಮ್ಮ ಕರಾವಳಿ ಬೆಡಗಿ 2014ರ 'ಮಿಸ್ ಮಂಗಳೂರು ಚೆಲುವೆ' ನೇಹಾ ಶೆಟ್ಟಿ ಗಣೇಶ್ ಜೊತೆ ಡ್ಯುಯೆಟ್ ಹಾಡಲು ಗ್ರ್ಯಾಂಡ್ ಎಂಟ್ರಿ ಕೊಡುತ್ತಿದ್ದಾರೆ.
ನಿರ್ದೇಶಕ ಶಶಾಂಕ್ ತಮ್ಮ ಚಿತ್ರಕ್ಕೆ ಗ್ಲಾಮರಸ್ ಲುಕ್, ಜೊತೆಗೆ ಸ್ಟೈಲೀಷ್ ಆಗಿರುವ ಹೊಸ ಹುಡುಗಿಯ ಹುಡುಕಾಟದಲ್ಲಿದ್ದರು. ಅಡೀಷನ್ ಸಂದರ್ಭದಲ್ಲಿ ಕೊನೆಯದಾಗಿ 'ಝೀರೋ ಫಿಗರ್' ಸುಂದರಿ, ಕುಡ್ಲದ ಬಾಲೆ ನೇಹಾ ಶೆಟ್ಟಿ ಆಯ್ಕೆಯಾದರು.
ಇದೀಗ 'ಮುಂಗಾರು ಮಳೆ 2' ಚಿತ್ರಕ್ಕೆ ನಾಯಕಿ ಪಕ್ಕಾ ಆಗಿರುವುದರಿಂದ ಇದೇ ಜುಲೈ 28 ರಿಂದ ಚಿತ್ರದ ಶೂಟಿಂಗ್ ಶುರು ಮಾಡಲು ಶಶಾಂಕ್ ಪ್ಲಾನ್ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಬೇಗ ಮುಗಿದರೆ 'ಮುಂಗಾರು ಮಳೆ' ಡಿಸೆಂಬರ್ 26 ರಂದು ರಿಲೀಸ್ ಆದಂತೆ 'ಮುಂಗಾರು ಮಳೆ 2' ರಿಲೀಸ್ ಮಾಡುವ ಆತುರದಲ್ಲಿದೆ ಚಿತ್ರತಂಡ. ಈ ಚಿತ್ರದ ಇನ್ನಷ್ಟು ಸುದ್ದಿಗಾಗಿ ಫಿಲ್ಮಿಬೀಟ್ ಕನ್ನಡ ನೋಡುತ್ತಿರಿ.