Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಸಂಕಷ್ಟದಲ್ಲಿ ರಾಜ್ಯ: ರಮ್ಯಾ ಈಗ ಎಲ್ಲಿದ್ದಾರೆ?
ಕೊರೊನಾ ಇಡೀಯ ವಿಶ್ವವನ್ನೇ ತಲ್ಲಣಗೊಳಿಸಿಬಿಟ್ಟಿದೆ. ಕರ್ನಾಕಟವು ಕೊರೊನಾದಿಂದ ತಲ್ಲಣಿಸಿದೆ. ಸಂಕಷ್ಟ ಸಮಯದಲ್ಲಿ ಎಲ್ಲರೂ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
Recommended Video
ಕನ್ನಡದ ಹಲವು ಪ್ರಮುಖ ಸ್ಟಾರ್ಗಳು ಕೊರೊನಾ ಸಮಯದಲ್ಲಿ ತಮ್ಮ ನೆರವಿನ ಹಸ್ತ ಚಾಚಿದ್ದಾರೆ. ಬಾಲಿವುಡ್ನಲ್ಲಿ ಸಹ ಸ್ಟಾರ್ಗಳು ಕೋಟ್ಯಂತರ ಹಣವನ್ನು ಕೊರೊನಾ ವಿರುದ್ಧ ಹೋರಾಟಕ್ಕೆ ದೇಣಿಗೆ ನೀಡಿದ್ದಾರೆ.
ಆದರೆ ಕೆಲವರು ಮಾತ್ರ ಕೊರೊನಾ ಸಂಕಷ್ಟದ ಸಮಯದಲ್ಲಿ ಅಡ್ರಸ್ಸಿಗೇ ಇಲ್ಲ. ಅಂಥಹವರಲ್ಲಿ ನಟಿ, ರಾಜಕಾರಣಿ ರಮ್ಯಾ ಸಹ ಒಬ್ಬರು. ರಮ್ಯಾ ಅವರನ್ನು ಅವರ ಅಭಿಮಾನಿಗಳು, ವಿರೋಧಿಗಳು ಇಬ್ಬರೂ ಸಹ ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ.
'ಎಲ್ಲಿದ್ದೀಯ ರಮ್ಯಾ' ಪೋಸ್ಟ್ಗಳು ಹರಿದಾಡುತ್ತಿವೆ
ಚುನಾವಣೆ ಸಮಯದಲ್ಲಿ ಮಾತ್ರವೇ ಕಾಣಸಿಗುವ ರಮ್ಯಾ ಅವರು ರಾಜ್ಯವು ಕೊರೊನಾ ದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಯದಲ್ಲಿ ಅವರು ಒಂದು ಸಂದೇಶವನ್ನು ಸಹ ನೀಡಿಲ್ಲ, 'ರಮ್ಯಾ ಎಲ್ಲಿದ್ದಾರೆ' ಎಂಬ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ರಾಜಕಾರಣಿಯೂ ಆಗಿರುವ ರಮ್ಯಾ
ನಟಿ ಆಗಿರುವ ಜೊತೆಗೆ ರಾಜಕಾರಣಿಯೂ ಆಗಿರುವ, ಮಾಜಿ ಸಂಸದೆಯೂ ಆಗಿರುವ ರಮ್ಯಾ ಅವರು ಸಂಕಷ್ಟದ ಈ ಸಂದರ್ಭದಲ್ಲಿ ಜನರಿಗೆ ತಮ್ಮ ಕೈಲಾದ ಮಟ್ಟಿಗೆ ಜಾಗೃತೆಯನ್ನು ಮೂಡಿಸುವ ಕಾರ್ಯವನ್ನಾದರೂ ಮಾಡಬಹುದಾಗಿತ್ತು ಎಂಬುದು ನೆಟ್ಟಿಜನರ ವಾದ.
ಟ್ವಿಟ್ಟರ್ ಖಾತೆಯನ್ನೂ ಡಿಲೀಟ್ ಮಾಡಿದ್ದಾರೆ
ದಿವ್ಯಾ ಸ್ಪಂದನ ಅಲಿಯಾಸ್ ರಮ್ಯಾ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ಕಳೆದ ವರ್ಷ ಜೂನ್ ತಿಂಗಳ ಸಮಯದಲ್ಲಿ ಡಿಲೀಟ್ ಮಾಡಿದ್ದಾರೆ. ಅಂದಿನಿಂದ ಸಾಮಾಜಿಕ ಜಾಲತಾಣದಲ್ಲಿಯೂ ಸಹ ಅವರು ಸಕ್ರಿಯರಾಗಿಲ್ಲ.
ರಾಜಕೀಯದಿಂದಲೂ ದೂರಾಗಿದ್ದಾರೆ ರಮ್ಯಾ
ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ಮುಖ್ಯಸ್ಥ ಸ್ಥಾನವನ್ನೂ ರಮ್ಯಾ ತ್ಯಜಿಸಿದ್ದಾರೆ ಎನ್ನಲಾಗಿದ್ದು, ರಾಜಕೀಯದಿಂದಲೂ ದೂರವೇ ಉಳಿದಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಸಿಗದೇ ಇದ್ದುದಕ್ಕೆ ಅವರು ಕಾಂಗ್ರೆಸ್ ಮೇಲೆ ಮುನಿಸಿಕೊಂಡಿದ್ದಾರೆ ಎನ್ನಾಗುತ್ತಿದೆ.
ರಂಗಭೂಮಿ ಕಲಾವಿದೆಗೆ ಸಹಾಯ ಮಾಡಿದ ರಮ್ಯಾ ತಾಯಿ
ಕೆಲವೇ ದಿನಗಳ ಹಿಂದೆ ರಮ್ಯಾ ಅವರ ತಾಯಿ ರಂಜಿತಾ ಅವರು ಇತ್ತೀಚೆಗಷ್ಟೆ ರಂಗಭೂಮಿ ಕಲಾವಿದರಿಗೆ ಸಹಾಯ ಮಾಡಿದ್ದರು. ರಂಗಭೂಮಿ ಕಲಾವಿದೆ ಆಶಾರಾಣಿ ಅವರಿಗೆ 50,000 ಚೆಕ್ ಅನ್ನು ಅವರು ನೀಡಿದ್ದರು.