Just In
Don't Miss!
- News
20,000 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ HCL
- Automobiles
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಎಫ್ಸಿ vs ಕೇರಳ ಬ್ಲಾಸ್ಟರ್ಸ್, Live ಸ್ಕೋರ್
- Lifestyle
ಕುಂಭ ಮೇಳ ಪ್ರಾರಂಭ: ಕುಂಭ ಮೇಳ ವಿಶೇಷತೆ ಹಾಗೂ ಎಷ್ಟು ದಿನ ಇರುತ್ತದೆ?
- Education
BECIL Recruitment 2021: 11 ರೇಡಿಯೋಗ್ರಾಫರ್ ಅಥವಾ ಎಕ್ಸ್-ರೇ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅಂದು ಆರತಿ ಇಂದು ಅಧಿತಿ: 'ರಂಗನಾಯಕಿ' ಆರಂಭಕ್ಕೆ ವಿವಾದ.!
ಪುಟ್ಟಣ್ಣ ಕಣಗಾಲ್ ನಿರ್ದೇಶನದ ರಂಗನಾಯಕಿ ಸಿನಿಮಾ ಕನ್ನಡ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಯಶಸ್ಸು ಕಂಡ ಸಿನಿಮಾ. ಮಹಿಳಾ ಪ್ರಧಾನವಾದ ಈ ಚಿತ್ರದಲ್ಲಿ ಆರತಿ ನಾಯಕಿಯಾಗಿ ನಟಿಸಿದ್ದರು. ರೆಬೆಲ್ ಸ್ಟಾರ್ ಅಂಬರೀಶ್, ಅಶೋಕ್, ರಾಮಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.
1981ರಲ್ಲಿ ತೆರೆಕಂಡಿದ್ದ ಈ ಚಿತ್ರದ ಹೆಸರಿನಲ್ಲೇ ಈಗ ಹೊಸ ಸಿನಿಮಾ ಬರ್ತಿದೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ಈಗ' ರಂಗನಾಯಕಿ' ಹೆಸರಿನಲ್ಲಿ ಸಿನಿಮಾ ಸೆಟ್ಟೇರುತ್ತಿದ್ದು, ಯುವನಟಿ ಅಧಿತಿ ಪ್ರಭುದೇವ ನಾಯಕಿಯಾಗಿ ನಟಿಸುತ್ತಿದ್ದಾರೆ.
ಪುಟ್ಟಣ್ಣ ಕಣಗಾಲ್-ಆರತಿ ಬಗ್ಗೆ ಅಂಬರೀಶ್ ಬಿಚ್ಚಿಟ್ಟ ಸತ್ಯ ಸಂಗತಿ
ಕಲಾತ್ಮಕ ಚಿತ್ರಗಳ ಯಶಸ್ವಿ ನಿರ್ದೇಶಕ ದಯಾಳ್ ಪದ್ಮನಾಭನ್ ಹೊಸ ರಂಗನಾಯಕಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಧಿತಿ ಜೊತೆ ಶ್ರೀನಿ ಮತ್ತು ವಿಕ್ರಂ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಂದ್ಹಾಗೆ, ಹೊಸ ರಂಗನಾಯಕಿ ಶೀರ್ಷಿಕೆಗೆ ವಿವಾದ ಅಂಟಿಕೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ, ರಂಗನಾಯಕಿ ಟೈಟಲ್ ಗೆ ವಾಲ್ಯೂಮ್ 1-ವರ್ಜಿನಿಟಿ ಎಂದು ಸಬ್ ಟೈಟಲ್ ಇಡಲಾಗಿದೆ. ಇದು ಸಹಜವಾಗಿ ಚರ್ಚೆಗೆ ಕಾರಣವಾಗಿದೆ.
ಪುಟ್ಟಣ್ಣನ ಬಗ್ಗೆ ಅಂಬರೀಶ್ ಹೇಳಿದ ಕುತೂಹಲಕಾರಿ ಸಂಗತಿಗಳು
ಏಪ್ರಿಲ್ 26 ರಂದು ರಂಗನಾಯಕಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಹಗ್ಗದ ಕೊನೆ, ಆಕ್ಟರ್, ಆ ಕರಾಳ ರಾತ್ರಿ, ಪುಟ 109 ಅಂತಹ ಸಿನಿಮಾಗಳನ್ನ ನಿರ್ದೇಶನ ಮಾಡಿರುವ ದಯಾಳ್ ಈಗ ರಂಗನಾಯಕಿ ಕೈಗೆತ್ತಿಕೊಂಡಿರುವುದು ನಿಜಕ್ಕೂ ಕುತೂಹಲ ಮೂಡಿಸಿದೆ.