Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 28, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದು ಆರತಿ ಇಂದು ಅಧಿತಿ: 'ರಂಗನಾಯಕಿ' ಆರಂಭಕ್ಕೆ ವಿವಾದ.!
ಪುಟ್ಟಣ್ಣ ಕಣಗಾಲ್ ನಿರ್ದೇಶನದ ರಂಗನಾಯಕಿ ಸಿನಿಮಾ ಕನ್ನಡ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಯಶಸ್ಸು ಕಂಡ ಸಿನಿಮಾ. ಮಹಿಳಾ ಪ್ರಧಾನವಾದ ಈ ಚಿತ್ರದಲ್ಲಿ ಆರತಿ ನಾಯಕಿಯಾಗಿ ನಟಿಸಿದ್ದರು. ರೆಬೆಲ್ ಸ್ಟಾರ್ ಅಂಬರೀಶ್, ಅಶೋಕ್, ರಾಮಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.
1981ರಲ್ಲಿ ತೆರೆಕಂಡಿದ್ದ ಈ ಚಿತ್ರದ ಹೆಸರಿನಲ್ಲೇ ಈಗ ಹೊಸ ಸಿನಿಮಾ ಬರ್ತಿದೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ಈಗ' ರಂಗನಾಯಕಿ' ಹೆಸರಿನಲ್ಲಿ ಸಿನಿಮಾ ಸೆಟ್ಟೇರುತ್ತಿದ್ದು, ಯುವನಟಿ ಅಧಿತಿ ಪ್ರಭುದೇವ ನಾಯಕಿಯಾಗಿ ನಟಿಸುತ್ತಿದ್ದಾರೆ.
ಪುಟ್ಟಣ್ಣ ಕಣಗಾಲ್-ಆರತಿ ಬಗ್ಗೆ ಅಂಬರೀಶ್ ಬಿಚ್ಚಿಟ್ಟ ಸತ್ಯ ಸಂಗತಿ
ಕಲಾತ್ಮಕ ಚಿತ್ರಗಳ ಯಶಸ್ವಿ ನಿರ್ದೇಶಕ ದಯಾಳ್ ಪದ್ಮನಾಭನ್ ಹೊಸ ರಂಗನಾಯಕಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಧಿತಿ ಜೊತೆ ಶ್ರೀನಿ ಮತ್ತು ವಿಕ್ರಂ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಂದ್ಹಾಗೆ, ಹೊಸ ರಂಗನಾಯಕಿ ಶೀರ್ಷಿಕೆಗೆ ವಿವಾದ ಅಂಟಿಕೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ, ರಂಗನಾಯಕಿ ಟೈಟಲ್ ಗೆ ವಾಲ್ಯೂಮ್ 1-ವರ್ಜಿನಿಟಿ ಎಂದು ಸಬ್ ಟೈಟಲ್ ಇಡಲಾಗಿದೆ. ಇದು ಸಹಜವಾಗಿ ಚರ್ಚೆಗೆ ಕಾರಣವಾಗಿದೆ.
ಪುಟ್ಟಣ್ಣನ ಬಗ್ಗೆ ಅಂಬರೀಶ್ ಹೇಳಿದ ಕುತೂಹಲಕಾರಿ ಸಂಗತಿಗಳು
ಏಪ್ರಿಲ್ 26 ರಂದು ರಂಗನಾಯಕಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಹಗ್ಗದ ಕೊನೆ, ಆಕ್ಟರ್, ಆ ಕರಾಳ ರಾತ್ರಿ, ಪುಟ 109 ಅಂತಹ ಸಿನಿಮಾಗಳನ್ನ ನಿರ್ದೇಶನ ಮಾಡಿರುವ ದಯಾಳ್ ಈಗ ರಂಗನಾಯಕಿ ಕೈಗೆತ್ತಿಕೊಂಡಿರುವುದು ನಿಜಕ್ಕೂ ಕುತೂಹಲ ಮೂಡಿಸಿದೆ.