Don't Miss!
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದು ಆರತಿ ಇಂದು ಅಧಿತಿ: 'ರಂಗನಾಯಕಿ' ಆರಂಭಕ್ಕೆ ವಿವಾದ.!
ಪುಟ್ಟಣ್ಣ ಕಣಗಾಲ್ ನಿರ್ದೇಶನದ ರಂಗನಾಯಕಿ ಸಿನಿಮಾ ಕನ್ನಡ ಇಂಡಸ್ಟ್ರಿಯಲ್ಲಿ ಬಹುದೊಡ್ಡ ಯಶಸ್ಸು ಕಂಡ ಸಿನಿಮಾ. ಮಹಿಳಾ ಪ್ರಧಾನವಾದ ಈ ಚಿತ್ರದಲ್ಲಿ ಆರತಿ ನಾಯಕಿಯಾಗಿ ನಟಿಸಿದ್ದರು. ರೆಬೆಲ್ ಸ್ಟಾರ್ ಅಂಬರೀಶ್, ಅಶೋಕ್, ರಾಮಕೃಷ್ಣ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.
1981ರಲ್ಲಿ ತೆರೆಕಂಡಿದ್ದ ಈ ಚಿತ್ರದ ಹೆಸರಿನಲ್ಲೇ ಈಗ ಹೊಸ ಸಿನಿಮಾ ಬರ್ತಿದೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ಈಗ' ರಂಗನಾಯಕಿ' ಹೆಸರಿನಲ್ಲಿ ಸಿನಿಮಾ ಸೆಟ್ಟೇರುತ್ತಿದ್ದು, ಯುವನಟಿ ಅಧಿತಿ ಪ್ರಭುದೇವ ನಾಯಕಿಯಾಗಿ ನಟಿಸುತ್ತಿದ್ದಾರೆ.
ಪುಟ್ಟಣ್ಣ ಕಣಗಾಲ್-ಆರತಿ ಬಗ್ಗೆ ಅಂಬರೀಶ್ ಬಿಚ್ಚಿಟ್ಟ ಸತ್ಯ ಸಂಗತಿ
ಕಲಾತ್ಮಕ ಚಿತ್ರಗಳ ಯಶಸ್ವಿ ನಿರ್ದೇಶಕ ದಯಾಳ್ ಪದ್ಮನಾಭನ್ ಹೊಸ ರಂಗನಾಯಕಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಧಿತಿ ಜೊತೆ ಶ್ರೀನಿ ಮತ್ತು ವಿಕ್ರಂ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಂದ್ಹಾಗೆ, ಹೊಸ ರಂಗನಾಯಕಿ ಶೀರ್ಷಿಕೆಗೆ ವಿವಾದ ಅಂಟಿಕೊಳ್ಳುವ ಸಾಧ್ಯತೆ ಇದೆ. ಯಾಕಂದ್ರೆ, ರಂಗನಾಯಕಿ ಟೈಟಲ್ ಗೆ ವಾಲ್ಯೂಮ್ 1-ವರ್ಜಿನಿಟಿ ಎಂದು ಸಬ್ ಟೈಟಲ್ ಇಡಲಾಗಿದೆ. ಇದು ಸಹಜವಾಗಿ ಚರ್ಚೆಗೆ ಕಾರಣವಾಗಿದೆ.
ಪುಟ್ಟಣ್ಣನ ಬಗ್ಗೆ ಅಂಬರೀಶ್ ಹೇಳಿದ ಕುತೂಹಲಕಾರಿ ಸಂಗತಿಗಳು
ಏಪ್ರಿಲ್ 26 ರಂದು ರಂಗನಾಯಕಿ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಹಗ್ಗದ ಕೊನೆ, ಆಕ್ಟರ್, ಆ ಕರಾಳ ರಾತ್ರಿ, ಪುಟ 109 ಅಂತಹ ಸಿನಿಮಾಗಳನ್ನ ನಿರ್ದೇಶನ ಮಾಡಿರುವ ದಯಾಳ್ ಈಗ ರಂಗನಾಯಕಿ ಕೈಗೆತ್ತಿಕೊಂಡಿರುವುದು ನಿಜಕ್ಕೂ ಕುತೂಹಲ ಮೂಡಿಸಿದೆ.