Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ರೂಪ ಹೊತ್ತು ಬಂತು ರೆಬೆಲ್ ಸ್ಟಾರ್ ಅಂಬರೀಶ್ ಬಯೋಗ್ರಫಿ
ವಿಶ್ವ ಪುಸ್ತಕ ದಿನದಂದು ಕನ್ನಡದ ಹೆಸರಾಂತ ನಟ, ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಬಯೋಗ್ರಫಿ ಹೊಸ ರೂಪ ಪಡೆದುಕೊಂಡಿದೆ.
2018ರಲ್ಲಿ ಬಿಡುಗಡೆಯಾದ ಈ ಪುಸ್ತಕವನ್ನು ಹೆಸರಾಂತ ಪ್ರಕಾಶನ ಸಂಸ್ಥೆ ಸಾವಣ್ಣ ಪ್ರಕಾಶನ ಹೊರತಂದಿತ್ತು. ಈಗ ಎರಡನೇ ಮುದ್ರಣ ಕೂಡ ಅದೇ ಪ್ರಕಾಶನ ಸಂಸ್ಥೆಯಿಂದ ಹೊರ ಬಂದಿದೆ.
ತಮ್ಮದೇ ಸಾವಿನ ಸುದ್ದಿ ಕೇಳಿ ನಗುತ್ತಿದ್ದರು ಅಂಬರೀಶ್
ಈ ಹಿಂದೆ ಮಂಡ್ಯದಲ್ಲಿ ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಪುಸ್ತಕವನ್ನು ಸಂಸದೆ ಸುಮಲತಾ ಅಂಬರೀಶ್, ರಾಕಿಂಗ್ ಸ್ಟಾರ್ ಯಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಿಡುಗಡೆ ಮಾಡಿದ್ದರು.
ಎರಡನೇ ಮುದ್ರಣದ, ಹೊಸ ವಿನ್ಯಾಸ ಮತ್ತು ಹೊಸ ಮುಖಪುಟ ಹೊತ್ತು ಪುಸ್ತಕವನ್ನು ಲೇಖಕ ಶರಣು ಹುಲ್ಲೂರು ಮತ್ತು ಪ್ರಕಾಶಕ ಜಮೀಲ್ ಸಾವಣ್ಣ ಅವರು ಸರಳವಾಗಿ ಬಿಡುಗಡೆ ಮಾಡಿದ್ದಾರೆ.
''ಪ್ರಕಾಶಕರು ಸದಾ ಹೊಸತನವನ್ನು ಹಂಬಲಿಸುವ ವ್ಯಕ್ತಿ. ಹಾಗಾಗಿ, ಎರಡನೇ ಸಲ ಮುದ್ರಣದಲ್ಲಿ ಹೊಸ ಮುಖಪುಟ ಬಳಕೆ ಮಾಡಿದ್ದೇವೆ. ಕಳೆದ ಬಾರಿ 1000 ಪುಸ್ತಕ ಹೊರಬಂದಿತ್ತು. ಈ ಸಲವೂ 1000 ಪುಸ್ತಕ ಮುದ್ರಣಗೊಂಡಿದೆ' ಎಂದು ಲೇಖಕ ಶರಣು ಹುಲ್ಲೂರು ಸಂತಸ ಹಂಚಿಕೊಂಡಿದ್ದಾರೆ.
ಅಂದ್ಹಾಗೆ, ಈ ಪುಸ್ತಕಕ್ಕೆ ಅಪಾರ ಜನಮನ್ನಣೆ ಸಿಕ್ಕಿತು. ಅಲ್ಲದೇ ಕರ್ನಾಟಕ ಸರಕಾರ ನೀಡುವ ಚಲನಚಿತ್ರ ಸಾಹಿತ್ಯ ರಾಜ್ಯ ಪ್ರಶಸ್ತಿ ಕೂಡ 2018ರಲ್ಲಿ ಬಂದಿದೆ.
'ಕನ್ನಡ ಮಾಣಿಕ್ಯ ಕಿಚ್ಚ': ಸುದೀಪ್ ಬಯೋಗ್ರಫಿ ಬಿಡುಗಡೆ ಮಾಡಿದ ಅಪ್ಪು
ಈ ಪುಸ್ತಕ ಎಲ್ಲ ಮಳಿಗೆಗಳಲ್ಲೂ ಲಭ್ಯ. ಸಾವಣ್ಣ ಪ್ರಕಾಶನದಲ್ಲೂ ಲಭ್ಯ.
ಲೇಖಕರ ಬಗ್ಗೆ....
Recommended Video
ಹಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿರುವ ಶರಣು ಹುಲ್ಲೂರು ಹಲವು ಪುಸ್ತಕಗಳನ್ನು ಬರೆದಿದ್ದಾರೆ. 'ಕೊರೋನಾ' ಹೆಸರಿನಲ್ಲಿ ಪುಸ್ತಕ ಬರೆದಿದ್ದರು. 'ಬದುಕು ಹ್ಯಾಕ್ ಆಗಿದೆ', 'ಸಿನಿ ಸಾಂಗತ್ಯ', 'ಜುಗಲ್ ಬಂದಿ ಕವಿತೆಗಳು' ಎಂಬ ಪುಸ್ತಕಗಳನ್ನು ಸಹ ಹುಲ್ಲೂರು ರಚಿಸಿದ್ದಾರೆ. 'ಕಿಚ್ಚ' ಎಂಬ ಹೆಸರಿನಲ್ಲಿ ಸುದೀಪ್ ಅವರ ಕುರಿತು ಪುಸ್ತಕ ರಚಿಸಿದ್ದರು.