Don't Miss!
- Lifestyle ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಡಿನ ಅಗ್ರಮಾನ್ಯ ನೇತಾರ, ಪ್ರೀತಿಯ ತಾತ; ದೇವೇಗೌಡರಿಗೆ ನಿಖಿಲ್ ಬರ್ತಡೇ ವಿಶ್
ದೇಶದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ ಏಕೈಕ ಕನ್ನಡಿಗ ಹೆಚ್.ಡಿ ದೇವೇಗೌಡ ಅವರ ಜನ್ಮದಿನ ಇಂದು (ಮೇ 18). ಅವರ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ರಾಜಕಾರಣಿಗಳು, ಕುಟುಂಬದವರು ಹಿರಿಯ ಮುತ್ಸದ್ಧಿಗೆ ಪ್ರೀತಿಯ ಶುಭಾಶಯ ಕೋರುತ್ತಿದ್ದಾರೆ. 'ಹಿರಿಯರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ' ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಫೋಟೋ ವೈರಲ್; ಲಡಾಖ್ನಲ್ಲಿ 'ರೈಡರ್' ನಿಖಿಲ್ ಕುಮಾರ್
ಇನ್ನು ನಟ, ರಾಜಕಾರಣಿ ನಿಖಿಲ್ ಕುಮಾರ್ ಕೂಡ ತಮ್ಮ ತಾತನ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಕನ್ನಡ ನಾಡಿನ ಅಗ್ರಮಾನ್ಯ ನೇತಾರ ಎಂದು ದೇವೇಗೌಡರನ್ನು ಹೊಗಳಿರುವ ನಿಖಿಲ್, ಅವರಿಗೆ ದೀರ್ಘಾಯುಷ್ಯವನ್ನು ದೇವರು ದಯಪಾಲಿಸಲಿ ಎಂದಿದ್ದಾರೆ.
ಟ್ವೀಟ್ ಮಾಡಿರುವ ನಿಖಿಲ್ 'ಈ ದೇಶ ಕಂಡ ಅಪರೂಪದ ಜನನಾಯಕ, ರೈತನಾಯಕ, ಕನ್ನಡ ನಾಡಿನ ಅಗ್ರಮಾನ್ಯ ನೇತಾರ, ನೀರಾವರಿ ಹರಿಕಾರ, ಮಾಜಿ ಪ್ರಧಾನಮಂತ್ರಿಗಳು, ನನ್ನ ಆದರ್ಶ ಮತ್ತು ನನ್ನ ಪ್ರೀತಿಯ ತಾತ, ಸನ್ಮಾನ್ಯ ಶ್ರೀ ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಉತ್ತಮ ಆರೋಗ್ಯವನ್ನು, ಧೀರ್ಘಾಯುಷ್ಯವನ್ನು, ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.
ಕೋವಿಡ್ ನಿಂದ ಚೇತರಿಸಿಕೊಂಡಿರುವ ನಿಖಿಲ್ ಸದ್ಯ ಮನೆಯಲ್ಲೇ ಕಾಲಕಳೆಯುತ್ತಿದ್ದಾರೆ. ಇತ್ತೀಚಿಗಷ್ಟೆ ತಮ್ಮ ತೋಟದ ಮನೆಯಲ್ಲಿ ಪತ್ನಿ ರೇವತಿ ಮತ್ತು ತಂದೆ-ತಾಯಿ ಜೊತೆ ಬಸವಜಯಂತಿ ಆಚರಣೆ ಮಾಡಿದ್ದರು. ಪೂಜೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Recommended Video
ಇನ್ನು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಬೇಡಿ ಎಂದು ಹೆಚ್.ಡಿ ದೇವೇಗೌಡ ಎರಡು ದಿನದಳ ಮುಂಚೆಯೇ ಮನವಿ ಮಾಡಿಕೊಂಡಿದ್ದರು. ತಮ್ಮ ಹತ್ತಿರದ ಕೋವಿಡ್ ಕೇಂದ್ರಗಳಿಗೆ ಮತ್ತು ಸೋಂಕಿತರಿಗೆ ನೆರವು ನೀಡಿ ಎಂದು ಅಭಿಮಾನಿಗಳಿಗೆ ಮತ್ತು ಜೆಡಿಎಸ್ ಕಾರ್ಯಕರ್ತದಲ್ಲಿ ಕೋರಿಕೊಂಡಿದ್ದರು. ಕೋವಿಡ್ ನಿಂದ ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ. ಸಂಭ್ರಮವನ್ನು ವಿವಿಧ ರೀತಿಯಲ್ಲಿ ಆಚರಿಸುವ ಬದಲು ಅದೇ ಹಣವನ್ನು ಕೊರೊನಾ ಸಂಕಷ್ಟದಲ್ಲಿರೋರಿಗೆ ನೆರವು ನೀಡುವಂತೆ ಕೇಳಿಕೊಂಡಿದ್ದರು.