Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ನಡುವೆಯೂ 100 ಕೆಜಿ ಕೇಕ್ ಕತ್ತರಿಸಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಸಂಭ್ರಮಿಸಿದ ನಿಖಿಲ್
ಸ್ಯಾಂಡಲ್ ವುಡ್ ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬವನ್ನು ನಿಖಿಲ್ ಅದ್ದೂರಿಯಾಗಿ, ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ಆಚರಣೆ ಮಾಡಿಕೊಂಡಿದ್ದಾರೆ. ಕೊರೊನಾ ಸಮಯದಲ್ಲೂ ಸಾವಿರಾರು ಸಂಖ್ಯೆಯ ಅಭಿಮಾನಿಗಳ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡು ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Recommended Video
ಇತರರಿಗೆ ಮಾದರಿ ಆಗಬೇಕಾದವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಹೀಗೆ ಮಾಡಿದರೆ, ಸಮಾಜಕ್ಕೆ ಏನು ಸಂದೇಶ ರವಾನಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಕೊರೊನಾ ಸಮಯದಲ್ಲಿ ಗುಂಪು ಸೇರಬಾರದು, ಸಾಮಾಜಿಕ ಅಂತರ ಕಾಪಾಡಬೇಕು ಎನ್ನುವುದು ಕೇವಲ ಹೇಳಿಕೆಗಳು ಮಾತ್ರನಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.
ಟೀಸರ್ ಬಿಡುಗಡೆ: ನಿಖಿಲ್ ಹುಟ್ಟುಹಬ್ಬಕ್ಕೆ ಬಂದ 'ರೈಡರ್'
ಕೊರೊನಾ ಕಾರಣ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿರುವ ಸ್ಟಾರ್ಸ್
ಈಗಾಗಲೇ ಅನೇಕ ಸ್ಟಾರ್ ಕಲಾವಿದರು ಈ ಬಾರಿ ಅದ್ದೂರಿ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿ ಸರಳವಾಗಿ ಕುಟುಂಬದ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೆ ಅಭಿಮಾನಿಗಳಿಗೂ ಈ ಸಮಯದಲ್ಲಿ ಮನೆಯ ಬಳಿ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
100 ಕೆಜಿ ಕೇಕ್ ಕತ್ತರಿಸಿದ ನಿಖಿಲ್
ಆದರೆ ನಿಖಿಲ್ ಜೆಪಿ ನಗರದ ತನ್ನ ನಿವಾಸದಲ್ಲಿ ಅಭಿಮಾನಿಗಳ ಜೊತೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ತಂದಿದ್ದ 100 ಕೆಜಿ ಕೇಕ್ ಕತ್ತರಿಸಿದ್ದಾರೆ. ಸಾವಿರಾರು ಅಭಿಮಾನಿಗಳು ನಿಖಿಲ್ ನಿವಾಸದ ಮುಂದೆ ಜಮಾಯಿಸಿದ್ದರು.
ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ
ಹುಟ್ಟುಹಬ್ಬ ಹಿನ್ನೆಲೆ ನಿಖಿಲ್ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ ಎನ್ನಲಾಗುತ್ತಿದೆ. ಜೊತೆಗೆ ದೂರ ಊರುಗಳಿಂದ ಬಂದಿರುವ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಸಹ ಮಾಡಿಸಲಾಗಿದೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ನಿಖಿಲ್ ಕುಮಾರ್
ನಿಖಿಲ್ ಕುಮಾರ್ ಪ್ರತಿಕ್ರಿಯೆ
ಇದೇ ಸಮಯದಲ್ಲಿ ಮಾತನಾಡಿದ ನಿಖಿಲ್ ಕುಮಾರ್ 'ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟುಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ, ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹುಟ್ಟು ಹಬ್ಬ ಆಚರಣೆಗೆ ಇಲ್ಲಿ ಬಂದಿದ್ದೀರಾ. ನೀವೆಲ್ಲಾ ಸುರಕ್ಷಿತವಾಗಿ ಮನೆ ತಲುಪಬೇಕು, ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ, ಎಲ್ಲರಿಗೂ ಧನ್ಯವಾದಗಳು' ಎಂದಿದ್ದಾರೆ.
ಜೆಡಿಎಸ್ ಎಂದರೆ ಯುವಕರ ಪಕ್ಷ
ಇನ್ನು 'ಜೆಡಿಎಸ್ ಪಕ್ಷ ಅಂದ್ರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗುತ್ತದೆ. ನಾವೆಲ್ಲ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡಿಯೋಣ' ಎಂದು ಹೇಳಿದ್ದಾರೆ.
ರೈಡರ್ ಟೀಸರ್ ರಿಲೀಸ್
ನಿಖಿಲ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರೈಡರ್ ಸಿನಿಮಾದ ಟೀಸರ್ ರಿಲೀಸ ಮಾಡಲಾಗಿದೆ. ರೈಡರ್ ಸಿನಿಮಾ ಕನ್ನಡದ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗಿದೆ. ರೈಡರ್ ಚಿತ್ರಕ್ಕೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೈಡರ್ ನಿಜ ಜೀವನದಿಂದ ಸ್ಫೂರ್ತಿ ಪಡೆದ ಸಿನಿಮಾ ಎಂದು ಹೇಳಲಾಗುತ್ತಿದೆ. ಕ್ರೀಡಾಧಾರಿತ ಸಿನಿಮಾ ಇದಾಗಿದೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ಸಧ್ಯದಲ್ಲೇ ಬಹಿರಂಗವಾಗುವ ಸಾಧ್ಯತೆ ಇದೆ.