Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದರ್ಶನ್' ಜೊತೆಗಿನ ಆಂತರಿಕ ಕದನಕ್ಕೆ ಬ್ರೇಕ್ ಹಾಕಿದ 'ಅಭಿಮನ್ಯು'
Recommended Video
ಕನ್ನಡ ಸಿನಿಮಾರಂಗದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಸಿನಿಮಾ. ಅಭಿಮಾನಿಗಳು ಕಾತುರದಿಂದ ಕುರುಕ್ಷೇತ್ರ ಚಿತ್ರವನ್ನು ಬೆಳ್ಳಿತೆರೆ ಮೇಲೆ ನೋಡಲು ಕಾದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕುರುಕ್ಷೇತ್ರ ಚಿತ್ರದ ಬಗ್ಗೆ ಇಲ್ಲ ಸಲ್ಲದ ಗಾಸಿಪ್ ಗಳು ಸುದ್ದಿ ಆಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ದೃಶ್ಯಗಳನ್ನು ಕಡಿಮೆ ಮಾಡಿ ನಿಖಿಲ್ ಕುಮಾರ್ ಅವರ ದೃಶ್ಯವನ್ನು ಹೆಚ್ಚು ಮಾಡಲಾಗಿದೆ. ಸಿ ಎಂ ಮಗ ಎನ್ನುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂದು ಗಾಸಿಪ್ ಹರಡಿತ್ತು. ಈ ಎಲ್ಲಾ ವಿಚಾರಕ್ಕೂ ನಿಖಿಲ್ ನೇರವಾಗಿ ಉತ್ತರ ಕೊಟ್ಟಿದ್ದಾರೆ.
ಪಕ್ಕಾ ಆಯ್ತು 'ಕುರುಕ್ಷೇತ್ರ' ಆಡಿಯೋ ಬಿಡುಗಡೆಯ ದಿನಾಂಕ
ನಿನ್ನೆ ನಡೆದ ಸೀತಾ ರಾಮ ಕಲ್ಯಾಣ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಹಾಗಾದರೆ ನಿಖಿಲ್ ಕುರುಕ್ಷೇತ್ರ ಚಿತ್ರದ ಬಗ್ಗೆ ಹೇಳಿದ ಮಾತುಗಳೇನು? ಸದ್ಯ 'ಕುರುಕ್ಷೇತ್ರ' ಸಿನಿಮಾ ಯಾವ ಹಂತದಲ್ಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ ಮುಂದೆ ಓದಿ
ಗಾಸಿಪ್ ಗೂ ನನಗೂ ಸಂಬಂಧವಿಲ್ಲ
'ಕುರುಕ್ಷೇತ್ರ'ದ ಸಿನಿಮಾ ಬಗ್ಗೆ ಹಬ್ಬಿರುವ ಸುದ್ದಿ ಈಗ ಗೊತ್ತಾಯಿತು. ಚಿತ್ರದಲ್ಲಿ ಎಲ್ಲಾ ಪಾತ್ರಗಳಿಗೂ ಅದರದ್ದೇ ಆದ ಪ್ರಾಮುಖ್ಯತೆಯನ್ನೂ ನೀಡಲಾಗಿದೆ. ಅದನ್ನು ಬಿಟ್ಟರೆ ಯಾವುದೇ ರೀತಿಯ ಸಮಸ್ಯೆಗಳಿಲ್ಲ ಎನ್ನುವ ಮಾತನ್ನು ನಿಖಿಲ್ ಕುಮಾರ್ ತಿಳಿಸಿದ್ದಾರೆ.
ಡಬ್ಬಿಂಗ್ ನಲ್ಲಿ ನಿಖಿಲ್ ಭಾಗಿ ಆಗಿಲ್ಲ
'ಕುರುಕ್ಷೇತ್ರ' ಸಿನಿಮಾದಲ್ಲಿ ನಿಖಿಲ್ ಕುಮಾರ್ ಅಭಿಮನ್ಯು ಪಾತ್ರದಲ್ಲಿ ಮಿಂಚಿದ್ದಾರೆ. ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಆದರೆ ನಿಖಿಲ್ ಕುಮಾರ್ ಇನ್ನು ಕೂಡ ಡಬ್ಬಿಂಗ್ ಮಾಡಿಲ್ಲ.
ಡಬ್ಬಿಂಗ್ ನಾನೇ ಮಾಡುತ್ತೇನೆ
ನಿಖಿಲ್ 'ಸೀತಾ ರಾಮ ಕಲ್ಯಾಣ' ಸಿನಿಮಾದಲ್ಲಿ ಬ್ಯುಸಿ ಆಗಿದ್ದು ಇನ್ನು ಕೆಲವೇ ದಿನಗಳಲ್ಲಿ ಡಬ್ಬಿಂಗ್ ಮಾಡಲು ಹೋಗುವುದಾಗಿ ತಿಳಿಸಿದ್ದಾರೆ. ಇತ್ತೀಚಿಗಷ್ಟೆ ವಿ ನಾಗೇಂದ್ರ ಪ್ರಸಾದ್ ನಿಖಿಲ್ ಅವರನ್ನು ಭೇಟಿ ಮಾಡಿ ಡಬ್ಬಿಂಗ್ ಮಾಡಲು ಬನ್ನಿ ಎಂದು ತಿಳಿಸಿದ್ದಾರಂತೆ.
ಕುರುಕ್ಷೇತ್ರಕ್ಕೆ ಎರಡು ಭಾರಿ ಸಿ ಜಿ
ಸದ್ಯ 'ಕುರುಕ್ಷೇತ್ರ' ಸಿನಿಮಾದ ಸಿ ಜಿ ಕೆಲಸಗಳು ಶುರುವಾಗಿದ್ದು ಈ ಹಿಂದೆಯೇ ಸಿಜಿ ಕೆಲಸವನ್ನು ಮುಗಿಸಲಾಗಿತ್ತು. ಆದರೆ ಚಿತ್ರತಂಡಕ್ಕೆ ಅದು ಇಷ್ಟವಾಗಿಲ್ಲ ಎನ್ನುವ ಕಾರಣದಿಂದ ಮತ್ತೆ ಸಿಜಿ ಮಾಡಿಸಲಾಗುತ್ತಿದೆಯಂತೆ. ನಿಖಿಲ್ ಪ್ರಕಾರ ಸಿನಿಮಾ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ.