Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗಿನ ಜನರ ಕಷ್ಟ ಆಲಿಸಿದ ನಟ-ರಾಜಕಾರಣಿ ನಿಖಿಲ್ ಕುಮಾರ್
ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಬಿದ್ದ ಪರಿಣಾಮ ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಜೆಡಿಎಸ್ ಯುವ ನಾಯಕ ಹಾಗೂ ನಟ ನಿಖಿಲ್ ಕುಮಾರ್ ಕೊಡಗು ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.
Recommended Video
ಕೊಡಗಿನ ಸೋಮವಾರಪೇಟೆ ಕುಶಾಲನಗರದ ಸುತ್ತಮುತ್ತಲಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಿಖಿಲ್ ಕುಮಾರ್ ಸಂತ್ರಸ್ತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಯುವಕರಿಗೆ ಸ್ಫೂರ್ತಿಯಾಗಲು ರೈತನಾಗಲು ನಿರ್ಧರಿಸಿದ ನಟ ನಿಖಿಲ್ ಕುಮಾರಸ್ವಾಮಿ
ನಿನ್ನೆ ಕುಶಾಲನಗರದ ಸಮೀಪ ಇರುವ ಕಾವೇರಿ ಮಾತೆಯ ಪ್ರತಿಮೆಗೆ ಪ್ರಾರ್ಥನೆ ಸಲ್ಲಿಸಿದ ನಿಖಿಲ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಬಳಿಕ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕೊಡಗಿನಲ್ಲಿ ಮನೆ ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಿಸಿರುವ ಸ್ಥಳಕ್ಕೆ ಭೇಟಿ ನೀಡಿದ ಜನರ ಯೋಗಕ್ಷೇಮ ವಿಚಾರಿಸಿದರು.
ಈ ಕುರಿತು ಫೇಸ್ಬುಕ್ನಲ್ಲಿ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರ್ 'ಕೊಡಗು ಜಿಲ್ಲೆಗೆ ಭೇಟಿ ನೀಡಿ ಮಳೆಹಾನಿ ಪ್ರದೇಶಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ, ಜಂಬೂರು ಗ್ರಾಮದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಮೈತ್ರಿ ಸರ್ಕಾರವು ನಿರ್ಮಿಸಿರುವ ಸುಸಜ್ಜಿತ ಬಡಾವಣೆ ಮತ್ತು ಮನೆಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ದೊರಕಿತು. ಇದು ನಿಜಕ್ಕೂ ಸಾರ್ಥಕ ಭಾವವನ್ನು ನೀಡಿದ ಕ್ಷಣವಾಗಿತ್ತು' ಎಂದು ಸಂತಸ ಹಂಚಿಕೊಂಡಿದ್ದಾರೆ.
2018ರಲ್ಲಿ ಕೊಡಗಿನ ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ 840ಕ್ಕೂ ಹೆಚ್ಚು ಕುಟುಂಬಗಳು ಮನೆಯನ್ನು ಕಳೆದುಕೊಂಡಿದ್ದರು. ಈ ವರ್ಷವೂ ಕೊಡಗಿನಲ್ಲಿ ಅಪಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ.