twitter
    For Quick Alerts
    ALLOW NOTIFICATIONS  
    For Daily Alerts

    ನೆರೆ ಸಂತ್ರಸ್ತರಿಗೆ 'ಕುರುಕ್ಷೇತ್ರ'ದ ಸಂಭಾವನೆ ನೀಡಿದ ನಿಖಿಲ್ ಕುಮಾರ್

    |

    Recommended Video

    ಅಪ್ಪನ ಹಾದಿಯಲ್ಲಿ ಸಾಗುತ್ತಿದ್ದಾರೆ ನಿಖಿಲ್ ಕುಮಾರಸ್ವಾಮಿ..? | FILMIBEAT KANNADA

    ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಮಾತ್ರ ಮಾಡಿದ್ದ ನಿಖಿಲ್ ಕುಮಾರ್ ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದಾರೆ. ಬಿಡುಗಡೆಗೆ ಮುಂಚೆ ಭಾರಿ ಸುದ್ದಿಯಲ್ಲಿದ್ದ ನಿಖಿಲ್, ಅಭಿಮನ್ಯು ಪಾತ್ರವನ್ನ ಹೇಗೆ ನಿಭಾಯಿಸಿರುತ್ತಾರೋ ಎಂಬ ಕುತೂಹಲವಿತ್ತು.

    ಆದರೆ, ಪ್ರೇಕ್ಷಕರಿಗೆ ನಿರಾಸೆಯಾಗಿಲ್ಲ. ನಿಖಿಲ್ ಪಾತ್ರ ಅದ್ಭುತವಾಗಿ ಬಂದಿದೆ. ಇದೀಗ, ಈ ಚಿತ್ರದಿಂದ ಬಂದ ಸಂಭಾವನೆಯನ್ನ ಪ್ರವಾಹಕ್ಕೆ ಸಿಲುಕಿರುವ ನೆರೆ ಸಂತ್ರಸ್ಥರಿಗೆ ನೀಡಲು ನಿಖಿಲ್ ಮುಂದಾಗಿದ್ದಾರೆ.

    ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ದೇವೇಗೌಡ

    ಈ ವಿಷ್ಯವನ್ನ ಖುದ್ದು ನಿಖಿಲ್ ಕುಮಾರ್ ಅವರೇ ಘೋಷಿಸಿದ್ದಾರೆ. ಮುನಿರತ್ನ ನಿರ್ಮಾಣದ ಕುರುಕ್ಷೇತ್ರ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿದೆ. ದರ್ಶನ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ಈ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ.

    'ನಿಖಿಲ್ ಸೂಪರ್ ಆಗಿ ಆಕ್ಟ್ ಮಾಡಿದ್ದಾನೆ' ಅಂದ್ರು ಸುಮಲತಾ 'ನಿಖಿಲ್ ಸೂಪರ್ ಆಗಿ ಆಕ್ಟ್ ಮಾಡಿದ್ದಾನೆ' ಅಂದ್ರು ಸುಮಲತಾ

    Nikhil kumar Help To Karnataka Floods

    ಕುರುಕ್ಷೇತ್ರ ಚಿತ್ರದಲ್ಲಿ ನಟಿಸಲು ನಿಖಿಲ್ ಕುಮಾರ್ ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಅದೆಷ್ಟೇ ಹಣ ಪಡೆದಿದ್ದರು ಮಾನವೀಯತೆ ದೃಷ್ಠಿಯಿಂದ ಆ ಮೊತ್ತವನ್ನ ನೆರೆ ಸಂತ್ರಸ್ಥರಿಗೆ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

    ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರ್, ತಮ್ ಪಕ್ಷದ ಪರವಾಗಿ ಉತ್ತರ ಕರ್ನಾಟಕ, ಕರಾವಳಿ ಭಾಗದ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನ ಕೂಡ ಪೂರೈಸಿದ್ದಾರೆ.

    English summary
    Kannada actor Nikhil kumar decided to give kurukshetra movie remuneration for flood people.
    Monday, August 12, 2019, 22:14
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X