Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜಾಗ್ವಾರ್' ನಟ ನಿಖಿಲ್ ಕುಮಾರ್ ಬಹಳ ದೈವಭಕ್ತರು
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರ್, 'ಜಾಗ್ವಾರ್' ಚಿತ್ರದ ನಂತರ ಎರಡನೇ ಚಿತ್ರಕ್ಕೆ ಸಿದ್ದವಾಗಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೇ, ಇಷ್ಟೊತ್ತಿಗಾಗಲೇ ನಿಖಿಲ್ ಎರಡನೇ ಸಿನಿಮಾ ಸೆಟ್ಟೇರಬೇಕಿತ್ತು. ಆದ್ರೆ, ನಿರ್ದೇಶಕರ ಸಮಸ್ಯೆಯಿಂದ ಸಿನಿಮಾ ಮತ್ತಷ್ಟು ಮುಂದಕ್ಕೆ ಹೋಗಿದೆ.
ಈ ಮಧ್ಯೆ ನಟ ನಿಖಿಲ್ ಕುಮಾರ್ ಸ್ವಲ್ಪ ರಿಲೀಫ್ ಆಗಲು ಪುಣ್ಯಕ್ಷೇತ್ರಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಹೌದು, ರಾಜ್ಯದ ಕೆಲವು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ನಿಖಿಲ್ ತಮ್ಮನ್ನ ತೀರ್ಥಯಾತ್ರೆಯಲ್ಲಿ ತೊಡಗಿಸಿಕೊಂಡಿದ್ದಾರಂತೆ. ಶ್ರೀ ಕೊಲ್ಲೂರು ಮೂಕಾಂಬಿಕೆ, ಕುಕ್ಕೆ ಸುಬ್ರಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರಂತೆ. ಈ ಹಿಂದೆ ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ಸನ್ನಿಧಾನಕ್ಕೆ ಭೇಟಿ ನೀಡಿದ್ದ ಫೋಟೋವನ್ನ ನಿಖಿಲ್ ಕುಮಾರ್ ಅವರೇ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
ನಿಖಿಲ್ ಕುಮಾರ್ ಎರಡನೇ ಸಿನಿಮಾದಿಂದ ನಿರ್ದೇಶಕ ಚೇತನ್ ಔಟ್!
ಅಂದ್ಹಾಗೆ, ನಿಖಿಲ್ ಕುಮಾರ್ ಅವರ ಎರಡನೇ ಚಿತ್ರವನ್ನ ಯಾರು ನಿರ್ದೇಶನ ಮಾಡಲಿದ್ದಾರೆ ಎಂಬುದು ಅಧಿಕೃತವಾಗಿ ಹೊರಬಿದ್ದಿಲ್ಲ. ಈ ಮೊದಲು 'ಬಹುದ್ದೂರ್' ಖ್ಯಾತಿಯ ಚೇತನ್ ಕುಮಾರ್ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೆ, 'ಭರ್ಜರಿ' ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕಾರಣದಿಂದ ಚೇತನ್, ನಿಖಿಲ್ ಸಿನಿಮಾದಿಂದ ಹಿಂದೆ ಸರಿದಿದ್ದಾರಂತೆ. ಈಗ ಚೇತನ್ ಜಾಗಕ್ಕೆ ಹೊಸ ನಿರ್ದೇಶಕನ ಹುಡುಕಾಟದಲ್ಲಿರುವ ಚಿತ್ರತಂಡಕ್ಕೆ ಮಹೇಶ್ ರಾವ್ ಸಿಕ್ಕಿದ್ದಾರೆ ಎನ್ನಲಾಗಿದೆ. ಇನ್ನು ಈ ಚಿತ್ರಕ್ಕೆ ರಿಯಾ ನಲವಾಡೆ ನಾಯಕಿ ಆಗಿ ಆಯ್ಕೆ ಆಗಿದ್ದು, ಫೋಟೋಶೂಟ್ ಕೂಡ ನೆರವೇರಿದೆ.
ಚೇತನ್ ಜಾಗಕ್ಕೆ ಬಂದ್ರು ಹೊಸ ಡೈರೆಕ್ಟರ್, ನಿಖಿಲ್ 2ನೇ ಚಿತ್ರ ಶುರು.!