Don't Miss!
- Sports ಕಮಿನ್ಸ್ ಟೆನ್ಷನ್ ಹೆಚ್ಚಿಸಿದ ಸ್ಟಾರ್ ಪ್ಲೇಯರ್ ನಿರ್ಧಾರ: ಎಸ್ಆರ್ಎಚ್ ತಂಡಕ್ಕೆ ಆರಂಭದಲ್ಲೇ ಪೆಟ್ಟು
- Lifestyle ಪಳ ಪಳ ಹೊಳೆಯುವ ಕೆಂಪು ನಾಗರ ನೋಡಿದ್ದೀರಾ..? ವೈರಲ್ ಆಗ್ತಿದೆ ವಿಡಿಯೋ..!
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಂದಿ ರಾಷ್ಟ್ರ ಭಾಷೆ ಎಂದ ಸಾಹಿತಿ ದೊಡ್ಡರಂಗೇಗೌಡ: ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದ ನಿಖಿಲ್
'ಹಿಂದಿ ರಾಷ್ಟ್ರ ಭಾಷೆ ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು' ಎಂದು ನಟ ಮತ್ತು ರಾಜಕಾರಣಿ ನಿಖಿಲ್ ಕುಮಾರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರಿಗೆ ತಿರುಗೇಟು ನೀಡಿದ್ದಾರೆ.
86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ದೊಡ್ಡರಂಗೇಗೌಡ ಅವರು ಇತ್ತೀಚಿಗೆ ಖಾಸಗಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ 'ಹಿಂದಿ ನಮ್ಮ ರಾಷ್ಟ್ರ ಭಾಷೆ, ಇಲ್ಲಿ ಕನ್ನಡ ಹೇಗೋ ಅದೇ ರೀತಿ ಉತ್ತರ ಭಾರತದಲ್ಲಿ ಸ್ಥಾನಮಾನವಿದೆ. ಹಿಂದಿಯನ್ನು ಯಾಕೆ ತಿರಸ್ಕಾರ ಮಾಡಬೇಕು. ಇಂಗ್ಲಿಷ್ ಒಪ್ಪುವ ನಾವು ಹಿಂದಿ ಭಾಷೆಯನ್ನು ಏಕೆ ಒಪ್ಪಿಕೊಳ್ಳಬಾರದು' ಎಂದು ಹೇಳಿದ್ದರು.
ಅಮಿತ್ ಶಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ: ಬಿಜೆಪಿ ವಿರುದ್ಧ ನಿಖಿಲ್ ಆಕ್ರೋಶ
ದೊಡ್ಡರಂಗೇಗೌಡ ಅವರ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿರುವ ನಿಖಿಲ್, 'ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ದೊಡ್ಡ ರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು' ಎಂದು ಹೇಳಿದ್ದಾರೆ.
'ನಮ್ಮ ರಾಜ್ಯದ ಪ್ರತಿಯೊಂದು ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ' ಎಂದಿದ್ದಾರೆ.
Recommended Video
ಹಿಂದಿ ಹೇರಿಕೆ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಆದರೂ ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಆಗುತ್ತಲೆ ಇದೆ. ಹಿಂದಿ ಹೇರಿಕೆ ವಿರುದ್ಧ ಕನ್ನಡಿಗರು ರೊಚ್ಚಿಗೆದ್ದಿರುವ ಈ ಸಮಯದಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿರುವ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.