Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ : 'ಕುರುಕ್ಷೇತ್ರ'ದ ಯುವರಾಜ ಅಭಿಮನ್ಯು ಟೀಸರ್ ನೋಡಿ
ಕನ್ನಡದ ಬಹು ಕೋಟಿ ವೆಚ್ಚದ ಅದ್ದೂರಿ ಸಿನಿಮಾ 'ಕುರುಕ್ಷೇತ್ರ'ದ ಮತ್ತೊಂದು ಟೀಸರ್ ರಿಲೀಸ್ ಆಗಿದೆ. ಧುರ್ಯೋಧನ ಆಗಿರುವ ದರ್ಶನ್ ಟೀಸರ್ ನಂತರ ಈಗ ನಿಖಿಲ್ ಕುಮಾರ್ ಅವರ ಅಭಿಮನ್ಯು ಟೀಸರ್ ರಿಲೀಸ್ ಆಗಿದೆ. ಇಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಇದ್ದು, ಅದರ ವಿಶೇಷವಾಗಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅವರ ಟೀಸರ್ ರಿಲೀಸ್ ಮಾಡಲಾಗಿದೆ.
ಹೋಟೆಲ್, ಆಟೋ, ಬೈಕ್ ಎಲ್ಲೆಲ್ಲೂ ದರ್ಶನ್ 'ಕುರುಕ್ಷೇತ್ರ'
'ಕುರುಕ್ಷೇತ್ರ' ಎರಡನೇ ಟೀಸರ್ ಇದಾಗಿದ್ದು, ಮತ್ತೆ ಚಿತ್ರದ ಮೇಲೆ ನಿರೀಕ್ಷೆಯನ್ನು ಹುಟ್ಟಿಸುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ. ಟೀಸರ್ ನೋಡಿದವರು ಒಂದು ಕ್ಷಣ ಆಶ್ಚರ್ಯ ಪಡುತ್ತಾರೆ. ನಿರ್ದೇಶಕ ನಾಗಣ್ಣ ಚಿತ್ರದ ಮೇಕಿಂಗ್ ತುಂಬ ಚೆನ್ನಾಗಿ ಮಾಡಿದ್ದಾರೆ. ಅದರಲ್ಲಿಯೂ ನಿಖಿಲ್ ಅಭಿನಯ ಅದ್ಬುತವಾಗಿದೆ. ಟೀಸರ್ ನೋಡಿದ ಮೇಲೆ ಅಭಿಮನ್ಯು ಪಾತ್ರಕ್ಕೆ ನಿಖಿಲ್ ಉತ್ತಮ ಆಯ್ಕೆ ಎನಿಸುತ್ತದೆ.
ಚಿತ್ರದ ಸಾಹಸ ದೃಶ್ಯಗಳನ್ನು ನಿಜಕ್ಕೂ ಮನೋಜ್ಞ ವಾಗಿದೆ. ಯುದ್ಧದ ಸನ್ನಿವೇಶಗಳು ಅಭಿಮಾನಿಗಳಿಗೆ ಹೆಚ್ಚು ಥ್ರಿಲ್ ನೀಡಲಿದೆ. 1 ನಿಮಿಷ 38 ಸೆಕೆಂಡ್ ಇರುವ ಈ ಟೀಸರ್ ದೃಶ್ಯಕಾವ್ಯದಂತೆ ಇದೆ. ಇದನ್ನು ನೋಡುತ್ತಿದ್ದರೆ ಒಂದು ವಿಸ್ಮಯಕಾರಿ ಲೋಕಕ್ಕೆ ನಾಗಣ್ಣ ಕರೆದುಕೊಂಡು ಹೋಗಿದ್ದಾರೆ. ಇನ್ನು ಮುನಿರತ್ನ 'ಕುರುಕ್ಷೇತ್ರ' ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಸಿನಿಮಾ ಜನವರಿ ಕೊನೆಯಲ್ಲಿ ಅಥವ ಫೆಬ್ರವರಿ ಪ್ರಾರಂಭದಲ್ಲಿ ಬಿಡುಗಡೆಯಾಗಲಿದೆ.