Don't Miss!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಿಖಿಲ್ ಕುಮಾರ್'ಗೆ ಆಕ್ಷನ್ ಕಟ್ ಹೇಳುವ ಕನ್ನಡದ ನಿರ್ದೇಶಕ ಯಾರು?
'ಜಾಗ್ವಾರ್' ಚಿತ್ರದ ನಂತರ ನಿಖಿಲ್ ಕುಮಾರ್ ಎರಡನೇ ಚಿತ್ರ ಯಾವುದು ಎಂಬ ಚರ್ಚೆ ಆಗಲೇ ಶುರುವಾಗಿಬಿಟ್ಟಿತ್ತು. ನಿಖಿಲ್ ಅವರ 2ನೇ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕರೊಬ್ಬರು ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೀಗ, ನಿಖಿಲ್ ಅವರ ಕಡೆಯಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ.
ಹೌದು, ನಿಖಿಲ್ ಅವರ ಮುಂದಿನ ಚಿತ್ರವನ್ನ ಕನ್ನಡದವರೇ ನಿರ್ದೇಶನ ಮಾಡಲಿದ್ದು, 'ಹೆಬ್ಬುಲಿ' ಖ್ಯಾತಿಯ ಕೃಷ್ಣ ಆಕ್ಷನ್ ಕಟ್ ಹೇಳಲಿದ್ದಾರಂತೆ. ಈ ಹಿಂದೆ ಬಹುದ್ದೂರ್ ಚೇತನ್ ಹಾಗೂ ಹರ್ಷ ಅವರ ಹೆಸರು ಕೇಳಿಬಂದಿತ್ತಾದರೂ, ಕೃಷ್ಣ ಅವರ ಹೆಸರು ಅಂತಿಮವಾಗಿದ್ದಾರಂತೆ.[ಎಕ್ಸ್ ಕ್ಲೂಸಿವ್: 'ಜಾಗ್ವಾರ್' ನಾಯಕ ನಿಖಿಲ್ ಕುಮಾರ್ ಸಂದರ್ಶನ ]
ಈಗಾಗಲೇ ಒನ್ ಲೈನ್ ಕಥೆ ಕೇಳಿರುವ ಹೆಚ್.ಡಿ.ಕುಮಾರ್ ಸ್ವಾಮಿ ಅವರು, ಈ ಚಿತ್ರವನ್ನ ತಾವೇ ನಿರ್ಮಾಣ ಮಾಡಲು ನಿರ್ಧರಿಸಿದ್ದಾರಂತೆ. ಇದೊಂದು ಯೂತ್ಸ್ ಗೆ ಇಷ್ಟವಾಗುವಂತಹ ಕಥೆಯಾಗಿದ್ದು, ಮನರಂಜನೆಯಿಂದ ಕೂಡಿದೆಯಂತೆ.[ವಿಮರ್ಶೆ : ಮಿಂಚಿನ ವೇಗದ 'ಜಾಗ್ವಾರ್' ಚಿಂದಿ ಚಿತ್ರಾನ್ನ]
ಸದ್ಯ, ನಿರ್ದೇಶಕ ಕೃಷ್ಣ 'ಹೆಬ್ಬುಲಿ' ಚಿತ್ರದ ಬಿಡುಗಡೆಯ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಮತ್ತೊಂದೆಡೆ ನಿಖಿಲ್ ಕುಮಾರ್ ವಿದೇಶದಲ್ಲಿ ತಾಲೀಮು ನಡೆಸುತ್ತಿದ್ದಾರೆ. ಎಲ್ಲ ಅಂದುಕೊಂಡಂತೆ ಆದ್ರೆ, ಜೂನ್ ಹೊತ್ತಿಗೆ ನಿಖಿಲ್ ಕುಮಾರ್ ಮತ್ತು ಕೃಷ್ಣ ಕಾಂಬಿನೇಷನ್ ನಲ್ಲಿ ಎರಡನೇ ಸಿನಿಮಾ ಶುರುವಾಗಲಿದೆಯಂತೆ.