Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಚಿತ್ರರಂಗವನ್ನು ನಂಬಿ ಬದುಕು ಸಾಗಿಸುತ್ತಿರುವ ಸಾಮಾನ್ಯ ಕಾರ್ಮಿಕ ಬದುಕು ಬೀದಿಗೆ ಬಂದಿದೆ.
Recommended Video
ಮಹಾಮಾರಿ ಕೊರೊನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿ, ಜನರು ಕೆಲಸ ಇಲ್ಲದೇ ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ. ಅದೇ ರೀತಿ ಸಿನಿಮಾ ಉದ್ಯಮ ಕೂಡ ಸಂಪೂರ್ಣ ಬಂದ್ ಆಗಿರುವ ಕಾರಣ ದಿನಗೂಲಿ ನಂಬಿ ಬದುಕುತ್ತಿದ್ದ ಸಿನಿಮಾ ಕಾರ್ಮಿಕ ವರ್ಗ ಕಂಗಾಲಾಗಿದೆ.
ಸಂಕಷ್ಟದಲ್ಲಿರುವವರಿಗೆ ಪಕ್ಕದ ಚಿತ್ರರಂಗದಲ್ಲಿ ಕೋಟಿ ಕೋಟಿ ನೆರವು: ನಮ್ಮ 'ಸ್ಟಾರ್'ಗಳೆಲ್ಲಿ?
ದಿನ ನಿತ್ಯವೂ ಚಿತ್ರೀಕರಣ ಸೇರಿದಂತೆ ಚಿತ್ರೋದ್ಯಮದ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಮಾತ್ರ ಅವರಿಗೆ ಆ ದಿನದ ಸಂಬಳ, ಊಟ ಸಿಗುವುದು ಎನ್ನುವ ಪರಿಸ್ಥಿತಿಯಲ್ಲಿರುವ ಕಾರ್ಮಿಕರು ಕೂಡ ಚಿತ್ರರಂಗದಲ್ಲಿದ್ದಾರೆ. ಅವರೆಲ್ಲ ಈಗ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೂರು ಸಾವಿರ ಸಿನಿಮಾ ಕಾರ್ಮಿಕರಿಗೆ ನೆರವು
ಹೀಗೆ ಕಷ್ಟದಲ್ಲಿರುವ ಕಾರ್ಮಿಕರಿಗೆ ನೆರವು ನೀಡಲು ನಟ ನಿಖಿಲ್ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿನಿಮಾ ಕಾರ್ಮಿಕರಾದ ಲೈಟ್ಸ್ ಬಾಯ್ಸ್ ಅಸೋಸಿಯೇಷನ್, ಯುನಿಟ್ ಬಾಯ್ಸ್ ಅಸೋಸಿಯೇಷನ್, ಪ್ರೊಡಕ್ಷನ್ ಅಸೋಸಿಯೇಷನ್, ಫೈಟರ್ಸ್ ಅಸೋಸಿಯೇಷನ್, ಮೇಕಪ್ ಮೆನ್ ಹಾಗೂ ಇತ್ಯಾದಿ ಸುಮಾರು 3 ಸಾವಿರ ಸಿನಿಮಾ ಕಾರ್ಮಿಕರ ಖಾತೆಗಳಿಗೆ ನೇರವಾಗಿ ಧನ ಸಹಾಯ ಮಾಡಲು ತೀರ್ಮಾನಿಸಿದ್ದಾರೆ.
ಇನ್ನೂ ಒಂದು ತಿಂಗಳು ಕಷ್ಟ
ಏಪ್ರಿಲ್ 14ರವರೆಗೂ ಸಂಪೂರ್ಣ ದೇಶ ಲಾಕ್ಡೌನ್ ಆಗಿರಲಿದೆ. ಹೀಗಾಗಿ ಅಲ್ಲಿವರೆಗೂ ಸಿನಿಮಾ ರಂಗದ ಚಟುವಟಿಕೆಗಳು ನಡೆಯುವುದಿಲ್ಲ. ಅದರ ನಂತರವೂ ಸ್ಥಿತಿ ಸಹಜಗೊಳ್ಳುವವರೆಗೂ ಚಿತ್ರರಂಗ ಸ್ತಬ್ಧವಾಗಿಯೇ ಇರಲಿದೆ. ಹೀಗಾಗಿ ಇನ್ನೂ ಕನಿಷ್ಠ ಒಂದು ತಿಂಗಳವರೆಗೆ ಅವರ ಜೀವನ ತೀವ್ರ ಕಷ್ಟದಲ್ಲಿರಲಿದೆ.
ಕೊರೊನಾ ವಿರುದ್ಧ ಹೋರಾಟಕ್ಕೆ ತೆಲುಗು ನಟರ ಧನ ಸಹಾಯ: ರಾಮ್, ಪವನ್, ಚಿರು ನಂತರ ಪ್ರಭಾಸ್ ದೇಣಿಗೆ
ಶನಿವಾರದ ಕಾರ್ಯಕ್ರಮ ಮುಂದೂಡಿಕೆ
ಕಾರ್ಮಿಕರಿಗೆ ಅಗತ್ಯ ಪಡಿತರಗಳನ್ನು ಒದಗಿಸಲು ನಿಖಿಲ್ ಕುಮಾರಸ್ವಾಮಿ ಬಯಸಿದ್ದರು. ಗಾಂಧಿನಗರದ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಆವರಣದಲ್ಲಿ ಶನಿವಾರ ಬೆಳಿಗ್ಗೆ ಚಲನಚಿತ್ರ ಕಾರ್ಮಿಕರಿಗೆ ಪಡಿತರಗಳನ್ನು ವಿತರಿಸಲು ತೀರ್ಮಾನಿಸಲಾಗಿತ್ತು. ಆದರೆ ಲಾಕ್ಡೌನ್ ಕಾರಣದಿಂದ ಈ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ನಿಖಿಲ್ಗೆ ಕೃತಜ್ಞತೆ
ಲಾಕ್ಡೌನ್ ನಿಯಮ ಪಾಲಿಸಬೇಕಾಗಿರುವುದು ನಮ್ಮ ಕರ್ತವ್ಯ. ಅದರೆ ಈ ಸಂದರ್ಭದಲ್ಲಿ ಕಾರ್ಮಿಕ ವರ್ಗ ಕೆಲಸವಿಲ್ಲದೆ ತುಂಬಾ ಕಷ್ಟ ಪಡುತ್ತಿದೆ. ಚಲನಚಿತ್ರ ಕಾರ್ಮಿಕರು ಈ ಸಮಸ್ಯೆಗೆ ಹೊರತಲ್ಲ. ಅವರಿಗೆ ನೆರವು ನೀಡಲು ಮುಂದಾಗಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಕಾರ್ಮಿಕರು ಧನ್ಯವಾದ ಸಲ್ಲಿಸಿದ್ದಾರೆ.