Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಹುಟ್ಟುಹಬ್ಬ ದಿನ ಮನದ ಮಾತು ಹಂಚಿಕೊಂಡ ನಿಖಿಲ್
Recommended Video
ನಟ ಅಂಬರೀಶ್ ಅವರ ಹುಟ್ಟುಹಬ್ಬದ ವಿಶೇಷವಾಗಿ ನಿಖಿಲ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಾಲ್ಕು ಸಾಲು ಬರೆದುಕೊಂಡಿದ್ದಾರೆ. ಈ ಮೂಲಕ ಅಂಬಿರನ್ನು ನೆನಪು ಮಾಡಿಕೊಂಡಿದ್ದಾರೆ.
ನಿನ್ನೆ (29 ಮೇ) ರೆಬಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಅಂಬಿ ನಮ್ಮೊಂದಿಗೆ ಇಲ್ಲ ಎನ್ನುವ ನೋವಿನಲ್ಲಿಯೇ ಅವರ ಸ್ನೇಹಿತರು, ಅಭಿಮಾನಿಗಳು ಆ ದಿನ ಕಳೆದರು. ನಟ ನಿಖಿಲ್ ಕುಮಾರ್ ಸಹ ಅಂಬಿ ಇಲ್ಲದ ನೋವನ್ನು ಹಂಚಿಕೊಂಡಿದ್ದಾರೆ.
ಅಂಬಿ ಇಲ್ಲದ ಹುಟ್ಟುಹಬ್ಬ : ರೆಬಲ್ ಸ್ಟಾರ್ ಗೆ ನಮಿಸಿದ ಸಿನಿ ಸ್ಟಾರ್ಸ್
ಮಂಡ್ಯ ಚುನಾವಣೆ ಅಖಾಡದಲ್ಲಿ ನಿಖಿಲ್ ಹಾಗೂ ಸುಮಲತಾ ಅಂಬರೀಶ್ ನಡುವೆ ಫೈಟ್ ನಡೆದಿತ್ತು. ಈ ಚುನಾವಣೆ ದೊಡ್ಡ ಅಸಮಾಧಾನಕ್ಕೆ ಕಾರಣ ಆಗಿತ್ತು. ಕೊನೆಗೆ ಚುನಾವಣಾ ಪಲಿತಾಂಶದಲ್ಲಿ ಸುಮಲತಾ ಗೆದ್ದರು.
ಆದರೆ, ಈ ಎಲ್ಲದರ ನಂತರ ನಿಖಿಲ್ ಅಂಬರೀಶ್ ಬಗ್ಗೆ ಬರೆದುಕೊಂಡಿದ್ದಾರೆ. ''ಹ್ಯಾಪಿ ಬರ್ತ್ ಡೇ ಅಂಬರೀಶ್ ಅಣ್ಣ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮ ಜೊತೆಗೆ ಕಳೆದ ಅದ್ಬುತ ನೆನಪು ನಮ್ಮ ಜೊತೆ ಇವೆ. ನಿಮ್ಮ ಬಗ್ಗೆ ಹೇಳಲು ತುಂಬ ಇದೆ. ಆದರೆ, ಅದಕ್ಕೆ ನನ್ನ ಬಳಿ ಪದಗಳೇ ಇಲ್ಲ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಇಷ್ಟು ಮಾತ್ರ ಹೇಳಲು ಸಾಧ್ಯ.'' ಎಂದಿದ್ದಾರೆ.
View this post on InstagramA post shared by Nikhil Kumar (@nikhilgowda_jaguar) on
ಅಂಬರೀಶ್ ಹುಟ್ಟುಹಬ್ಬದ ದಿನ ತಡವಾದರೂ ರಾತ್ರಿ 9 ಗಂಟೆಗೆ ಶುಭಾಶಯ ಹಂಚಿಕೊಂಡಿದ್ದಾರೆ. ಅಂಬರೀಶ್ ಜೊತೆಗಿನ ಫೋಟೋ ಹಾಕಿ ತಮ್ಮ ಮನದ ಮಾತನ್ನು ಹೇಳಿಕೊಂಡಿದ್ದಾರೆ.