Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಮನೆ ಕಟ್ಟಿಸಲು ಭೂಮಿ ಪೂಜೆ ಮಾಡಿದ ನಿಖಿಲ್ ಕುಮಾರಸ್ವಾಮಿ ದಂಪತಿ
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ನಿಧಾನಕ್ಕೆ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಸಕ್ರಿಯಗೊಳ್ಳುತ್ತಿದ್ದಾರೆ.
Recommended Video
ಲಾಕ್ಡೌನ್ ಸಮಯದಲ್ಲಿ ಸರಳವಾಗಿ ವಿವಾಹವಾಗಿ ನಂತರ ಲಾಕ್ಡೌನ್ ನ ಬಿಡುವಿನ ಸಮಯವನ್ನು ಪತ್ನಿಯೊಂದಿಗೆ ಕಳೆದ ನಿಖಿಲ್ ಇದೀಗ ಹೊಸದಾಗಿ ಮನೆ ನಿರ್ಮಿಸುತ್ತಿದ್ದಾರೆ.
ಹೌದು, ಲಾಕ್ಡೌನ್ ಸಮಯದಲ್ಲಿ ಕೃಷಿ ಮಾಡಲು ಪ್ರಾರಂಭಿಸಿದ ನಿಖಿಲ್ ಕುಮಾರಸ್ವಾಮಿ, ಇದೀಗ ಮನೆ ಸಹ ಕಟ್ಟಿಸಲು ಪ್ರಾರಂಭಿಸಿದ್ದು, ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿ ಭೂಮಿ ಪೂಜೆ ನೆರವೇರಿಸಿದ್ದಾರೆ.
ಕೃಷಿ ಭೂಮಿಗೆ ಹತ್ತಿರವಾಗಿರಲು ಮನೆ ನಿರ್ಮಾಣ
ಮದುವೆಯ ನಂತರ ಬಹುತೇಕ ಸಮಯ ಫಾರ್ಮ್ಹೌಸ್ನಲ್ಲೇ ಕಳೆದಿರುವ ನಿಖಿಲ್ ಮತ್ತು ರೇವತಿ ಅಲ್ಲಿಯೇ ಒಂದು ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಕೃಷಿ ಭೂಮಿಗೆ ಹತ್ತಿರವಾಗಿ ಮನೆ ಇರಲೆಂದು ಈ ಮನೆಯನ್ನು ನಿರ್ಮಾಣ ಮಾಡಲಾಗುತ್ತಿದೆಯಂತೆ.
ನಿಖಿಲ್ ಪತ್ನಿ ರೇವತಿ ಆರ್ಕಿಟೆಕ್ಟ್
ನಿಖಿಲ್ ಪತ್ನಿ ರೇವತಿ ಸ್ವತಃ ಆರ್ಕಿಟೆಕ್ಟ್ ಆಗಿದ್ದು, ಮನೆ ನಿರ್ಮಾಣದ ಬಹುಪಾಲು ಮೇಲುಸ್ತುವಾರಿಯನ್ನು ಅವರೇ ಹೊರಲಿದ್ದಾರೆ. ಆರರಿಂದ ಎಂಟು ತಿಂಗಳ ಅವಧಿಯಲ್ಲಿ ಮನೆ ನಿರ್ಮಾಣ ಕಾರ್ಯ ಮುಗಿಯಲಿದೆ ಎನ್ನಲಾಗಿದೆ.
ಕೃಷಿ ಪ್ರಾರಂಭಿಸಿರುವ ನಿಖಿಲ್ ಕುಮಾರಸ್ವಾಮಿ
ಕೆಲವು ದಿನಗಳ ಹಿಂದಷ್ಟೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ನಿಖಿಲ್ ಕುಮಾರಸ್ವಾಮಿ ಪ್ರಾರಂಭಿಸಿದ್ದರು. ತಾವು ಕೃಷಿಕನಾಗಿ ಗುರುತಿಸಿಕೊಳ್ಳಲು ಹೆಮ್ಮೆ ಪಡುತ್ತೇನೆ. ರೈತಾಪಿ ಜೀವನ ಶ್ರೇಷ್ಠ ಜೀವನ ಎಂದು ನಿಖಿಲ್ ಹೇಳಿದ್ದರು.
ಕೊಡಗಿಗೆ ಭೇಟಿ ನೀಡಿದ್ದ ನಿಖಿಲ್ ಕುಮಾರಸ್ವಾಮಿ
ರಾಜಕೀಯದಲ್ಲೂ ಮತ್ತೆ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ, ಇತ್ತೀಚೆಗಷ್ಟೆ, ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿ ನೆರೆ ವೀಕ್ಷಣೆ ಮಾಡಿ, ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ್ದರು. ಕೇಂದ್ರದ ತ್ವಿಭಾಷಾ ನೀತಿ ವಿರುದ್ಧ ಸಹ ಸಾಮಾಜಿಕ ಜಾಲತಾಣದಲ್ಲಿ ದನಿ ಎತ್ತಿದ್ದರು ನಿಖಿಲ್.