Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಾರಿ ಹೊರುವ 'ಅರ್ಜುನ'ನನ್ನು ಭೇಟಿ ಮಾಡಿದ ನಿಖಿಲ್ ಕುಮಾರ್ ದಂಪತಿ
ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ. ಸಂಪ್ರದಾಯವಾಗಿ ಅಂಬಾರಿ ಹೊರವ ಗಜಪಡೆಗೆ ಸೂಕ್ತ ತಯಾರಿ ನೀಡಲಾಗುತ್ತಿದೆ. ಈ ನಡುವೆ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಮತ್ತು ಪತ್ನಿ ರೇವತಿ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿ ಆನೆಗಳನ್ನು ಭೇಟಿ ಮಾಡಿ ಅವುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಹಾಗೂ ಗಜಪಡೆಯ ಜೊತೆ ನಿಖಿಲ್ ದಂಪತಿ ಫೋಟೋ ಸಹ ಕ್ಲಿಕ್ಕಿಸಿಕೊಂಡಿದ್ದಾರೆ.
ತೆಲುಗು ಖ್ಯಾತ ನಿರ್ದೇಶಕನಿಂದ ನಿಖಿಲ್ ಕುಮಾರಸ್ವಾಮಿಯ ನಾಲ್ಕನೇ ಸಿನಿಮಾ
Recommended Video
ಈ ಕುರಿತು ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಖಾತೆಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ನಿಖಿಲ್ ಕುಮಾರ್ ''ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿಯೊಂದಿಗೆ'' ಎಂದು ಬರೆದುಕೊಂಡಿದ್ದಾರೆ.
ಮದುವೆ ಬಳಿಕ ನಿಖಿಲ್ ಕುಮಾರ್ ಮತ್ತು ರೇವತಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರಮುಖ ಆಕರ್ಷಣೆಯ ಜೋಡಿಗಳಲ್ಲಿ ಒಂದಾಗಿದೆ. ಮನೆಯಲ್ಲಿ ಹಬ್ಬ, ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ನಿಖಿಲ್ ಅಭಿಮಾನಿಗಳ ಪಾಲಿಗೆ ನೆಚ್ಚಿನ ಜೋಡಿ ಎನಿಸಿಕೊಂಡಿದ್ದಾರೆ.