twitter
    For Quick Alerts
    ALLOW NOTIFICATIONS  
    For Daily Alerts

    ಅಂಬಾರಿ ಹೊರುವ 'ಅರ್ಜುನ'ನನ್ನು ಭೇಟಿ ಮಾಡಿದ ನಿಖಿಲ್ ಕುಮಾರ್ ದಂಪತಿ

    |

    ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ. ಸಂಪ್ರದಾಯವಾಗಿ ಅಂಬಾರಿ ಹೊರವ ಗಜಪಡೆಗೆ ಸೂಕ್ತ ತಯಾರಿ ನೀಡಲಾಗುತ್ತಿದೆ. ಈ ನಡುವೆ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಮತ್ತು ಪತ್ನಿ ರೇವತಿ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ.

    ಈ ವೇಳೆ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿ ಆನೆಗಳನ್ನು ಭೇಟಿ ಮಾಡಿ ಅವುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಹಾಗೂ ಗಜಪಡೆಯ ಜೊತೆ ನಿಖಿಲ್ ದಂಪತಿ ಫೋಟೋ ಸಹ ಕ್ಲಿಕ್ಕಿಸಿಕೊಂಡಿದ್ದಾರೆ.

    ತೆಲುಗು ಖ್ಯಾತ ನಿರ್ದೇಶಕನಿಂದ ನಿಖಿಲ್ ಕುಮಾರಸ್ವಾಮಿಯ ನಾಲ್ಕನೇ ಸಿನಿಮಾತೆಲುಗು ಖ್ಯಾತ ನಿರ್ದೇಶಕನಿಂದ ನಿಖಿಲ್ ಕುಮಾರಸ್ವಾಮಿಯ ನಾಲ್ಕನೇ ಸಿನಿಮಾ

    Recommended Video

    ದೀಪು ಸರ್ ಅಂತ ಕರೆಯೋದು ನಂಗೆ ಅಭ್ಯಾಸ | Sudheendra Venkatesh | Kiccha Sudeep | Filmibeat Kannada

    ಈ ಕುರಿತು ಫೇಸ್‌ಬುಕ್ ಹಾಗೂ ಇನ್ಸ್ಟಾಗ್ರಾಂ ಖಾತೆಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ನಿಖಿಲ್ ಕುಮಾರ್ ''ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾದ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿಯೊಂದಿಗೆ'' ಎಂದು ಬರೆದುಕೊಂಡಿದ್ದಾರೆ.

    Nikhil Kumaraswamy and Revathi Visited Nagarahole National Park

    ಮದುವೆ ಬಳಿಕ ನಿಖಿಲ್ ಕುಮಾರ್ ಮತ್ತು ರೇವತಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರಮುಖ ಆಕರ್ಷಣೆಯ ಜೋಡಿಗಳಲ್ಲಿ ಒಂದಾಗಿದೆ. ಮನೆಯಲ್ಲಿ ಹಬ್ಬ, ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ನಿಖಿಲ್ ಅಭಿಮಾನಿಗಳ ಪಾಲಿಗೆ ನೆಚ್ಚಿನ ಜೋಡಿ ಎನಿಸಿಕೊಂಡಿದ್ದಾರೆ.

    English summary
    Kannada actor-polican Nikhil Kumaraswamy and his wife Revathi visited Nagarahole National Park and meet Arjuna elephant.
    Monday, September 7, 2020, 12:12
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X