Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ವಾರಿಯರ್ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಕೊರೊನಾ ವೈರಸ್ ಬಿಕ್ಕಟ್ಟಿನಲ್ಲಿ ಜನಸಾಮಾನ್ಯರ ಆರೋಗ್ಯ ಸುಧಾರಣೆಗಾಗಿ ರಾತ್ರಿ-ಹಗಲು ದುಡಿಯುತ್ತಿರುವ ಕೋವಿಡ್ ವಾರಿಯರ್ಸ್ಗೆ ನಟ-ರಾಜಕಾರಣಿ ನಿಖಿಕ್ ಕುಮಾರ್ ನೆರವು ನೀಡಿದ್ದಾರೆ.
ಕೊರೊನಾ ವಿರುದ್ಧ ಹಗಲು ರಾತ್ರಿ ಶ್ರಮಪಟ್ಟ 430 ಆಶಾ ಕಾರ್ಯಕರ್ತೆಯರಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗೌರವ ಧನ ನೀಡಿ ಸಹಾಯ ಹಸ್ತ ಚಾಚಿದರು.
ರಾಗಿ ಬೆಳೆದ ನಿಖಿಲ್ ಕುಮಾರಸ್ವಾಮಿ, ಭೇಷ್ ಎಂದ ದೇವೇಗೌಡ
ರಾಮನಗರದ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿ ಅವರಣದಲ್ಲಿ ಹಮ್ಮಿಕೊಂಡಿರುವ ಸರಳ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರು, ಸ್ಟಾಫ್ ನರ್ಸ್ಗಳಿಗೆ ಗೌರವಧನ ಮತ್ತು ನೆಬ್ಲೆಝ್ಯೆಷನ್ ಮಿಷಿನ್ ವಿತರಣೆ ಮಾಡಲಾಯಿತು.
ಸಿನಿಮಾ ಹಾಗೂ ರಾಜಕಾರಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರ್, ಲಾಕ್ಡೌನ್ ವೇಳೆ ರಾಮನಗರದಲ್ಲಿರುವ ಕೇತಗಾನಹಳ್ಳಿಯಲ್ಲಿ ಜಮೀನಿನಲ್ಲಿ ಕೃಷಿ ಮಾಡುವ ಮೂಲಕ ಗಮನ ಸೆಳೆದಿದ್ದರು. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಜಮೀನಿಗೆ ಭೇಟಿ ನೀಡಿದಾಗ ನಿಖಿಲ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Recommended Video
ಇನ್ನು ನಿಖಿಲ್ ಕುಮಾರಸ್ವಾಮಿ ಅಭಿನಯದ 'ರೈಡರ್' ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದೆ. ಈ ನಡುವೆ ಶಿವರಾಜ್ ಕುಮಾರ್ ಜೊತೆಗೆ ಹೊಸ ಸಿನಿಮಾದಲ್ಲಿ ನಿಖಿಲ್ ನಟಿಸಲಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ನಿರ್ದೇಶಕ ಕೃಷ್ಣ ಜೊತೆಗೆ ಪ್ರಾಜೆಕ್ಟ್ ಘೋಷಿಸುವ ಸಾಧ್ಯತೆ ಇದೆ.