Don't Miss!
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾರಂಗದಲ್ಲಿ ಅಪ್ಪನ ಹಾದಿಯನ್ನೇ ತುಳಿದ ನಿಖಿಲ್ ಕುಮಾರಸ್ವಾಮಿ
ರಾಜಕೀಯದಲ್ಲಿ ಹಿನ್ನಡೆ ಅನುಭವಿಸಿರುವ ನಿಖಿಲ್ ಕುಮಾರಸ್ವಾಮಿ ಸಿನಿಮಾವನ್ನು ಮುಂದುವರೆಸಿಕೊಂಡು ಹೋಗಲು ನಿರ್ಧರಿಸಿದ್ದಾರೆ.
Recommended Video
ಲಾಕ್ಡೌನ್ ಸಮಯದಲ್ಲಿ ಪತ್ನಿಯೊಂದಿಗೆ ಹಾಯಾಗಿ ಕಾಲಕಳೆಯುತ್ತಿರುವ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಈಗಾಗಲೇ ಕೆಲವಾರು ಕತೆಗಳನ್ನು ಕೇಳಿ ಒಪ್ಪಿಗೆ ಸಹ ಸೂಚಿಸಿದ್ದಾರೆ ಎನ್ನಲಾಗಿದೆ.
Mr And Mrsಆಗಿ 3 ತಿಂಗಳು: ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ನಿಖಿಲ್ ಕುಮಾರ್
ಹೊಸ ವಿಷಯವೆಂದರೆ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ತಂದೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ತುಳಿದಿದ್ದ ಹಾದಿಯನ್ನೇ ಸಿನಿರಂಗದಲ್ಲಿ ತುಳಿಯಲು ನಿಶ್ಚಯಿಸಿದ್ದಾರೆ.
ಕುಮಾರಸ್ವಾಮಿ ಸಹ ನಿರ್ಮಾಪಕರಾಗಿದ್ದರು
ಮಾಜಿ ಸಿಎಂ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಮುನ್ನಾ ಸಿನಿಮಾ ನಿರ್ಮಾಪಕರಾಗಿದ್ದರು. ಚೆನ್ನಾಂಬಿಕಾ ಫಿಲಂಸ್ ಮೂಲಕ ಸಾಕಷ್ಟು ಉತ್ತಮ ಸಿನಿಮಾಗಳನ್ನು ಅವರು ಕನ್ನಡ ಸಿನಿಮಾರಂಗಕ್ಕೆ ನೀಡಿದ್ದಾರೆ. ಈಗ ಇದೇ ಹಾದಿಯನ್ನು ತುಳಿದಿದ್ದಾರೆ ನಿಖಿಲ್ ಕುಮಾರಸ್ವಾಮಿ.
ನಿರ್ಮಾಪಕರಾಗುತ್ತಿದ್ದಾರೆ ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ ಅವರು ನಿರ್ಮಾಪಕರಾಗುತ್ತಿದ್ದು, ತಮ್ಮ ಎನ್ಕೆ ಎಂಟರ್ಟೇನ್ಮೆಂಟ್ ಹೆಸರಿನ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದು, ಮೊದಲ ಸಿನಿಮಾವನ್ನು ನಿರ್ಮಿಸಲು ಸಕಲ ಸಜ್ಜಾಗಿದ್ದಾರೆ. ಸಿನಿಮಾದ ಪ್ರೀಪ್ರೊಡಕ್ಷನ್ ಹಂತ ಈಗಾಗಲೇ ಪ್ರಾರಂಭವಾಗಿದೆ.
ಯುವಕರಿಗೆ ಸ್ಫೂರ್ತಿಯಾಗಲು ರೈತನಾಗಲು ನಿರ್ಧರಿಸಿದ ನಟ ನಿಖಿಲ್ ಕುಮಾರಸ್ವಾಮಿ
ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ನಿರ್ಮಾಣ
ನಿಖಿಲ್ ಕುಮಾರಸ್ವಾಮಿ ಅವರು ರೊಮ್ಯಾಂಟಿಕ್ ಕಾಮಿಡಿ ಸಿನಿಮಾವೊಂದನ್ನು ನಿರ್ಮಿಸುತ್ತಿದ್ದು, ಸಿನಿಮಾದ ಹೆಸರು 'ಸಂಗೀತ್'. ಹಂಬಲ್ ಪೊಲಿಟೀಶಿಯನ್ ನಾಗರಾಜ್ ಸಿನಿಮಾ ನಿರ್ದೇಶಿಸಿದ್ದ ಸಾದ್ ಖಾನ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.
ನಟ-ನಟಿಯರು ಅಂತಿಮವಾಗಿಲ್ಲ
ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ. ಆದರೆ ಸಿನಿಮಾದ ಚಿತ್ರೀಕರಣವು ಸೆಪ್ಟೆಂಬರ್ನಲ್ಲಿ ಕೊಡಗು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಾರಂಭವಾಗಲಿದೆ ಎಂದು ನಿರ್ದೇಶಕ ಸಾದ್ ಖಾನ್ ಹೇಳಿದ್ದಾರೆ.
ಲಹರಿ ಮ್ಯೂಸಿಕ್ನ ಚಂದ್ರು ಮನೋಹರ್ ಜೊತೆಗಿದ್ದಾರೆ
ನಿಖಿಲ್ ಕುಮಾರಸ್ವಾಮಿ ಅವರು ಒಬ್ಬರೇ ಈ ಸಿನಿಮಾಕ್ಕೆ ಹಣ ತೊಡಗಿಸುತ್ತಿಲ್ಲ, ನಿಖಿಲ್ ಜೊತೆಗೆ ಲಹರಿ ಮ್ಯೂಸಿಕ್ನ ಚಂದ್ರು ಮನೋಹರ್ ಸಹ ಕೈಜೋಡಿಸಿದ್ದಾರೆ. ವಿಶೇಷವೆಂದರೆ ಚಂದ್ರು ಮನೋಹರ್ ಅವರು ನಿಖಿಲ್ ಅವರ ಮತ್ತೊಂದು ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಅದು ಕ್ರೀಡೆಯೊಂದರ ಬಗೆಗಿನ ಕತೆಯಾಗಿದೆ.