Don't Miss!
- Finance ಬೆಂಗಳೂರಿನಿಂದ ಲಕ್ಷದ್ವೀಪಕ್ಕೆ ನೇರ ವಿಮಾನ ಸೇವೆ ಆರಂಭ, ದಿನಾಂಕ ವಿವರ
- News ವಿ ಸೋಮಣ್ಣಗೆ ಎದುರಾಯ್ತು ಸಂಕಷ್ಟ: ಕೈ ನಾಯಕರ ಸಂಪರ್ಕದಲ್ಲಿರುವ ಮಾಧುಸ್ವಾಮಿ: ಕಾಂಗ್ರೆಸ್ ಸೇರ್ಪಡೆ?
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಮನೆ ಮೇಲೆ ಕಲ್ಲು ತೂರಾಟ: ನಿಖಿಲ್ ಕುಮಾರ್ ಹೇಳಿದ್ದೇನು?
Recommended Video
ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಸುಮಲತಾ ಅವರನ್ನು ಗೆಲ್ಲಿಸಲೇ ಬೇಕೆಂದು ನಟ ದರ್ಶನ್ ಮತ್ತು ಯಶ್ ಟೊಂಕಕಟ್ಟಿ ನಿಂತಿದ್ದಾರೆ. ಚಿತ್ರೀಕರಣದ ನಡುವೆಯೂ ಸುಮಲತಾ ಪರ ಪ್ರಚಾರ ಮಾಡುತ್ತಿದಾರೆ ಈ ಇಬ್ಬರು ನಟರು.
ಹೀಗಿರುವಾಗ ನಟ ದರ್ಶನ್ ಮನೆಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಕಳೆದ ರಾತ್ರಿ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ದರ್ಶನ್ ನಿವಾಸ ಹಾಗೂ ಕಾರಿನ ಮೇಲೆ ಕಲ್ಲು ಎಸೆದು ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ.
ಸುಮಲತಾ ಪರ ಪ್ರಚಾರ ಮಾಡುತ್ತಿರುವ ಕಾರಣ ಹೀಗೆ ಮಾಡಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಮನೆ ಮೇಲೆ ಕಲ್ಲು ತೂರಾಟ: 'ಚಾಲೆಂಜ್ ಆಗಿ ಸ್ವೀಕರಿಸ್ತಾರೆ' ಎಂದ ಸುಮಲತಾ
ಮಂಡ್ಯದಲ್ಲಿ ಪ್ರಚಾರ ಮಾಡ್ತಿರುವ ನಿಖಿಲ್ 'ಇಂತಹ ಕೆಲಸವನ್ನು ನಾವ್ಯಾಕೆ ಮಾಡೋಣ, ನಮಗೆ ಎಲ್ಲಾ ಕಡೆಯೂ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ನಮ್ಮ ಮೇಲಯೂ ಆ ರೀತಿ ಪ್ರಯತ್ನ ಆಯ್ತು. ಹೀಗೆ ಮಾಡಬಾರದು' ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ದುರ್ಯೋಧನ vs ಅಭಿಮನ್ಯು: ಮುನಿರತ್ನ 'ಕುರುಕ್ಷೇತ್ರ'ಕ್ಕೆ ಫುಲ್ ಟೆನ್ಷನ್.!
ಮತ್ತೊಂದೆಡೆ ಮಂಡ್ಯ ಕ್ಷೇತ್ರ ಸ್ವತಂತ್ರ ಅಭ್ಯರ್ಥಿ ಸುಮಲತಾ ಅವರು ಮಾತನಾಡಿದ್ದು, 'ದರ್ಶನ್ ಅವರನ್ನ ಪ್ರಚಾರದಿಂದ ಹಿಂದೆ ಸರಿಸಲು ಸಾಧ್ಯವಿಲ್ಲ. ಈ ರೀತಿ ಹೆದರಿಸೋಕೆ ಸಾಧ್ಯವಿಲ್ಲ. ಇದರಿಂದ ಅಭಿಮಾನಿಗಳು ಪ್ರಚೋದನೆಗೆ ಒಳಗಾಗಬಾರದು. ದರ್ಶನ್ ಇದನ್ನ ಚಾಲೆಂಜ್ ಆಗಿ ಸ್ವೀಕರಿಸ್ತಾರೆ' ಎಂದಿದ್ದಾರೆ.
ಇನ್ನು ದರ್ಶನ್ ಅವರ ಮನೆ ಮೇಲ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಶೀಲನೆ ಮಾಡುತ್ತಿದ್ದಾರೆ.