Don't Miss!
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
26/11 ಮುಂಬೈ ದಾಳಿ: ಹುತಾತ್ಮರನ್ನು ನೆನೆದ ನಿಖಿಲ್ ಕುಮಾರಸ್ವಾಮಿ
ರಾಷ್ಟ್ರವನ್ನೇ ಭೀತಿಗೊಳಿಸಿದ್ದ ಮುಂಬೈ ದಾಳಿ ನಡೆದು ಇಂದಿಗೆ 12 ವರ್ಷ. 2008 ರ ನವೆಂಬರ್ 26 ರಂದು ಮುಂಬೈನ ತಾಜ್ ಹೋಟೆಲ್, ನಾರಿಮನ್ ಪಾಯಿಂಟ್, ಶಿವಾಜಿ ಟರ್ಮಿನಲ್ ಇನ್ನೂ ಹಲವು ಕಡೆ ಉಗ್ರರು ದಾಳಿ ಮಾಡಿ ಹಲವರನ್ನು ಕೊಂದಿದ್ದರು.
ಸಮುದ್ರ ಮಾರ್ಗದಿಂದ ಮುಂಬೈಗೆ ಬಂದಿದ್ದ 10 ಶಸ್ತ್ರಸಜ್ಜಿತ ಉಗ್ರರು ನಡೆಸಿದ ದಾಳಿಯಲ್ಲಿ ಕನಿಷ್ಟ 174 ಮಂದಿ ಅಸುನೀಗಿ, 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಮುಂಬೈನ ಕರಾಳ ದಾಳಿ 12 ವರ್ಷವಾದ ಸಂದರ್ಭದಲ್ಲಿ ನಾಡಿನ ಹಲವರು ಅಂದು ಅಗಲಿದ ಜೀವಗಳಿಗೆ, ಪೊಲೀಸರಿಗೆ ಗೌರವ ಸಮನ ಸಲ್ಲಿಸಿದ್ದಾರೆ. ಕನ್ನಡದ ಯುವ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ 26/11 ದಾಳಿ ಹುತಾತ್ಮರಿಗೆ ಸಾಮಾಜಿಕ ಜಾಲತಾಣದಲ್ಲಿ ಗೌರವ ನಮನ ಸಲ್ಲಿಸಿದ್ದಾರೆ.
'26/11 ರ ಮುಂಬೈ ತಾಜ್ ಹೋಟೆಲ್ ಮೇಲೆ ಉಗ್ರರು ದಾಳಿ ನಡೆಸಿದಾಗ ಎದೆಗುಂದದೆ ಹೋರಾಡಿ ಹುತಾತ್ಮರಾದ ಎಲ್ಲಾ ಕೆಚ್ಚೆದೆಯ ವೀರ ಯೋಧರಿಗೆ ನನ್ನ ಗೌರವ ನಮನಗಳು.' ಎಂದಿದ್ದಾರೆ ನಿಖಿಲ್ ಕುಮಾರಸ್ವಾಮಿ.
Recommended Video
ಇದೇ ದಿನ (ನವೆಂಬರ್ 26) ಭಾರತ ಸಂವಿಧಾನ ದಿನವೂ ಆಗಿದ್ದು, ಸಂವಿಧಾನ ದಿನವಾದ ಇಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಸಂವಿಧಾನವನ್ನು ರಕ್ಷಿಸುವುದು ಮತ್ತು ಅನುಸರಿಸುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ ನಿಖಿಲ್.