Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಖಿಲ್-ರೇವತಿ ಮದುವೆ ಬಗ್ಗೆ ನಿರ್ಧಾರ ಬದಲಿಸಿದ ಕುಮಾರಸ್ವಾಮಿ?
ನಿಖಿಲ್ ಕುಮಾರಸ್ವಾಮಿ-ರೇವತಿ ಮದುವೆ ರಾಜ್ಯದ ಅದ್ಧೂರಿ ಮದುವೆಗಳಲ್ಲಿ ಪ್ರಮುಖ ಮದುವೆ ಆಗಲಿದೆ ಎಂದೇ ಎಣಿಸಲಾಗಿತ್ತು. ಆದರೆ ಕುಮಾರಸ್ವಾಮಿ ಅವರು ತಮ್ಮ ನಿರ್ಧಾರ ಬದಲಿಸಿದ್ದಾರೆ ಎನ್ನಲಾಗಿದೆ.
ಹೌದು, ಆರತಕ್ಷತೆಯನ್ನೇ ಬಹು ಅದ್ಧೂರಿಯಾಗಿ ಮಾಡಿದ್ದ ಕುಮಾರಸ್ವಾಮಿ, ಪುತ್ರನ ಮದುವೆಯನ್ನು ರಾಮನಗರದಲ್ಲಿ ಭಾರಿ ಅದ್ಧೂರಿಯಾಗಿ ಮಾಡಲು ಸಕಲ ಸಿದ್ಧತೆಯನ್ನೂ ಮಾಡುವ ಯೋಜನೆ ತಯಾರಿಸಿದ್ದರು. ಆದರೆ ಅದಕ್ಕೆ ಕೊರೊನಾ ಅಡ್ಡಿ ಪಡಿಸಿದೆ.
ಹೌದು, ಕೊರೊನಾ ಕಾರಣದಿಂದಾಗಿ ರಾಮನಗರದಲ್ಲಿ ಭಾರಿ ಅದ್ಧೂರಿಯಾಗಿ ನಡೆಯಬೇಕಿದ್ದ ನಿಖಿಲ್ ಕುಮಾರಸ್ವಾಮಿ- ರೇವತಿ ಮದುವೆ ಬೆಂಗಳೂರಿಗೆ ಸ್ಥಳಾಂತರವಾಗಿದೆ. ಆದರೆ ಈಗ ಮದುವೆ ಬಗ್ಗೆ ಮತ್ತೊಂದು ಸುದ್ದಿ ಹೊರಬಿದ್ದಿದೆ.
ನಿರ್ಧಾರ ಬದಲಿಸಿದ ಕುಮಾರಸ್ವಾಮಿ?
ನಿಖಿಲ್ ಕುಮಾರಸ್ವಾಮಿ ಮದುವೆಯನ್ನು ಭಾರಿ ಅದ್ಧೂರಿಯಾಗಿ ಮಾಡಲು ಕುಮಾರಸ್ವಾಮಿ ಇಚ್ಛಿಸಿದ್ದರು ಎನ್ನಲಾಗಿತ್ತು. ಆದರೆ ಈಗ ಅವರು ನಿರ್ಧಾರ ಬದಲಿಸಿ ಸರಳ ಮದುವೆಯ ಮುಖ ಮಾಡಿದ್ದಾರೆ.
ಸರಳವಾಗಿ ಮದುವೆಯಾಗಲಿದ್ದಾರೆ ನಿಖಿಲ್-ರೇವತಿ?
ಹೌದು, ನಿಖಿಲ್-ರೇವತಿ ಮದುವೆಯನ್ನು ಸರಳವಾಗಿ ಮಾಡುವುದಾಗಿ ಕುಮಾರಸ್ವಾಮಿ ನಿರ್ಧಾರ ಮಾಡಿದ್ದು, ಮನೆ ದೇವಸ್ಥಾನದಲ್ಲಿ ಕುಟುಂಬ ಸದಸ್ಯರ, ಹಿರಿಯರ ಹಾಜರಿಯಲ್ಲಿ ಸರಳವಾಗಿ ನಿಖಿಲ್ ಮದುವೆ ನಡೆಯಲಿದೆ ಎನ್ನಲಾಗುತ್ತಿದೆ.
60 ಎಕರೆಯಲ್ಲಿ ಮದುವೆ ಮಾಡಲು ನಿಶ್ಚಯಿಸಲಾಗಿತ್ತು
ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡಲಾಗಿತ್ತು, ಆದರೆ ಕೊರೊನಾ ಭೀತಿ ಕಡಿಮೆಯಾಗದ ಕಾರಣ ಸರಳ ಮದುವೆಗೆ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ.
ಏಪ್ರಿಲ್ 17 ಕ್ಕೆ ನಿಶ್ಚಯವಾಗಿರುವ ಮದುವೆ
ಏಪ್ರಿಲ್ 17 ರಂದು ರಾಮನಗರದಲ್ಲಿ ಮದುವೆ ನಿಶ್ಚಯಿಸಲಾಗಿತ್ತು. ಈಗಾಲಗೇ 80 ಲಕ್ಷ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು. ಆದರೆ ಕೊರೊನಾ ಕಾರಣದಿಂದ ಎಲ್ಲವೂ ತಲೆಕೆಳಗಾಗಿದೆ.
ನಿದಗಿಯಾದ ದಿನವೇ ಮದುವೆ
ಆದರೆ ನಿಗದಿಯಾಗಿರುವ ದಿನದಂದೇ ಮದುವೆ ಮಾಡಲು ಕುಟುಂಬ ನಿಶ್ಚಯಿಸಿದ್ದು, ಅದ್ಧೂರಿಯಾಗಿಲ್ಲದಿದ್ದರೂ ಸರಳವಾಗಿ ಆದರೂ ಮದುವೆ ಮುಗಿಸುವ ಯೋಜನೆ ಮಾಡಿಕೊಂಡಿದ್ದಾರೆ. ಕೊರೊನಾ ಭೀತಿ ಮುಗಿದ ಮೇಲೆ ಆರತಕ್ಷತೆಯನ್ನು ಅದ್ಧೂರಿಯಾಗಿ ನಡೆಸಲಾಗುತ್ತದೆ.