Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಹೆಸರು ಪ್ರಕಟ
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಇತ್ತೀಚೆಗೆ ಸಿನಿಮಾಗಳ ಕಡೆಗೆ ಹೆಚ್ಚು ಗಮನ ಕೊಡುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಅವರ ನಟನೆಯ 'ರೈಡರ್' ಸಿನಿಮಾ ಬಿಡುಗಡೆ ಆಗಿ ಹಿಟ್ ಆಗಿದೆ. ಇದೀಗ ಅವರ ಹೊಸ ಸಿನಿಮಾದ ಹೆಸರು ಘೋಷಣೆ ಮಾಡಲಾಗಿದೆ.
ಇಂದು (ಜನವರಿ 22) ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ. ಈ ವಿಶೇಷ ಸಂದರ್ಭದಲ್ಲಿ ನಿಖಿಲ್ ನಟನೆಯ ಹೊಸ ಸಿನಿಮಾದ ಹೆಸರನ್ನು ಘೋಷಿಸಲಾಗಿದೆ.
ಮಂಜು ಅಥರ್ವ ನಿರ್ದೇಶಿಸುತ್ತಿರುವ ಸಿನಿಮಾದಲ್ಲಿ ನಿಖಿಲ್ ನಟಿಸುತ್ತಿದ್ದು, ಸಿನಿಮಾದ ಹೆಸರು 'ಯದುವೀರ'. ಸಿನಿಮಾವನ್ನು ಕೆವಿಎನ್ ಬ್ಯಾನರ್ ಅಡಿಯಲ್ಲಿ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರಿತ್ ನಿರ್ಮಾಣ ಮಾಡುತ್ತಿದ್ದಾರೆ.
ಸಿನಿಮಾದ ಪೋಸ್ಟರ್ ಸಹ ಇಂದು ಬಿಡುಗಡೆ ಆಗಿದ್ದು, ಪೋಸ್ಟರ್ನಲ್ಲಿ ಒಂದು ಕೈಯಲ್ಲಿ ಟೀ ಗ್ಲಾಸ್ ಹಿಡಿದು ಸಿಗರೇಟು ಸೇದುತ್ತ ರಗಡ್ ಲುಕ್ ಕೊಡುತ್ತಿರುವ ನಿಖಿಲ್ರ ಚಿತ್ರವಿದೆ. ಪೋಸ್ಟರ್ನಲ್ಲಿ ಕಪ್ಪು ಬಣ್ಣವೇ ಪ್ರಧಾನವಾಗಿದ್ದು, ಇದೊಂದು ಗ್ಯಾಂಗ್ಸ್ಟರ್ ಸಿನಿಮಾ ಆಗಿರಬಹುದೆಂಬ ಅನುಮಾನ ಮೂಡಿಸುತ್ತಿದೆ.
ಯದುವೀರ ಮೈಸೂರಿನ ರಾಜರ ಹೆಸರು ಈ ಹೆಸರು ಇಟ್ಟಿದ್ದಕ್ಕೆ ಸಿನಿಮಾಕ್ಕೆ ಆಕ್ಷೇಪ ಎದುರಾಗುವ ಸಂಭವವೂ ಇದೆ. ಆದರೆ ಈವರೆಗೆ ಯಾವುದೇ ಆಕ್ಷೇಪಗಳು ಕೇಳಿ ಬಂದಿಲ್ಲ.
ಇಂದು (ಜನವರಿ 22) ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬ. ಆದರೆ ಕೊರೊನಾ ಸಂಕಷ್ಟದ ಪರಿಸ್ಥಿತಿ ಇರುವ ಕಾರಣ ತಾವು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಹುಟ್ಟುಹಬ್ಬ ಆಚರಣೆ ಮಾಡುವ ಬದಲಿಗೆ ಕೋವಿಡ್ ನಿಂದ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದು ನಿಖಿಲ್ ಮನವಿ ಮಾಡಿದ್ದಾರೆ.
'ಯದುವೀರ' ಸಿನಿಮಾದ ಬಳಿಕ ನಂದ ಕಿಶೋರ್ ನಿರ್ದೇಶನದ ಹೊಸ ಸಿನಿಮಾದಲ್ಲಿ ನಿಖಿಲ್ ನಟಿಸುವ ಸಾಧ್ಯತೆ ಇದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಸಹ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ನಂದ ಕಿಶೋರ್ ಪ್ರಸ್ತುತ ಕೊಬ್ರಿ ಮಂಜು ಪುತ್ರನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನಟನೆಯ ಕೊನೆಯ ಸಿನಿಮಾ 'ರೈಡರ್' ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಆಗಿತ್ತು. ಸಿನಿಮಾವನ್ನು ಆನಂದ್ ಆಡಿಯೋ ನಿರ್ಮಾಣ ಮಾಡಿತ್ತು. ಸಿನಿಮಾ ಹಿಟ್ ಎನಿಸಿಕೊಂಡಿತು. ಸಿನಿಮಾದ ಪ್ರಚಾರಕ್ಕಾಗಿ ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮುಂತಾದೆಡೆಗಳಲ್ಲಿ ನಿಖಿಲ್ ಸಂಚಾರ ಮಾಡಿದ್ದರು. ಸಿನಿಮಾದ ಪೈರಸಿ ಕಾಪಿ ಹೊರಬಂದ ಕಾರಣ ಸಿನಿಮಾಕ್ಕೆ ತುಸು ಹಿನ್ನೆಡೆ ಉಂಟಾಯಿತು.