Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಹಾಗೂ ರಾಜಕೀಯ: ಮಂಡ್ಯದಲ್ಲಿ ನಿಖಿಲ್ ಮಾತು
ನಿಖಿಲ್ ಕುಮಾರಸ್ವಾಮಿ, ರಾಜಕೀಯ ಹಾಗೂ ಸಿನಿಮಾ, ಎರಡರ ಪಯಣವನ್ನೂ ಒಟ್ಟೊಟ್ಟಿಗೆ ಮಾಡುತ್ತಿದ್ದಾರೆ.
ಸಿನಿಮಾ ಚಿತ್ರೀಕರಣದಲ್ಲಿ ತೊಡಗಿಕೊಳ್ಳುವ ನಡುವೆಯೂ ರಾಜಕೀಯ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಾ ಎರಡೂ ರಂಗಗಳನ್ನು ಬ್ಯಾಲೆನ್ಸ್ ಮಾಡುತ್ತಾ ಸಾಗುತ್ತಿದ್ದಾರೆ.
ನಿಖಿಲ್ ಕುಮಾರ್ ಗೆ ದಿನಕರ್ ತೂಗುದೀಪ ನಿರ್ದೇಶನ: ಸ್ಪಷ್ಟನೆ ನೀಡಿದ ದಿನಕರ್
ರಾಜಕೀಯ ಕಾರಣಕ್ಕೆ ಮಂಡ್ಯಕ್ಕೆ ಭೇಟಿ ನೀಡಿರುವ ನಿಖಿಲ್ ಕುಮಾರ್, ಸಿನಿಮಾ ಹಾಗೂ ರಾಜಕೀಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
'ನನಗೆ ಸಿನಿಮಾ ಎಂಬುದು ಫ್ಯಾಷನ್ ಹಾಗಾಗಿ ಅದರ ಮೇಲೆ ಗಮನ ಹರಿಸಿದ್ದೆ. ಒಂದು ವೇಳೆ ನಾನು ಶಾಸಕನಾಗಬೇಕು ಎಂದುಕೊಂಡಿದ್ದರೆ, ಎಂದೋ ಶಾಸಕನಾಗಿರುತ್ತಿದ್ದೆ. ಅಪ್ಪನ ಹೆಸರು ಹೇಳಿಕೊಂಡು ಹಲವರು ಶಾಸಕರಾಗಿದ್ದಾರೆ, ನಾನು ಶಾಸಕನಾಗುವುದು ಕಷ್ಟವೇನಿರಲಿಲ್ಲ' ಎಂದಿದ್ದಾರೆ ನಿಖಿಲ್ ಕುಮಾರಸ್ವಾಮಿ.
ಮಂಡ್ಯ ರಾಜಕೀಯದಲ್ಲಿ ತುಸು ಒಳಜಗಳ ಎದ್ದಿದ್ದು, ಅದರ ಬಗ್ಗೆಯೂ ಮಾತನಾಡಿದ ನಿಖಿಲ್, 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸುರೇಶ್ ಗೌಡ ಅವರೇ ಕಣಕ್ಕೆ ಇಳಿಯಲಿದ್ದಾರೆ, ಈ ಬಗ್ಗೆ ಕಾರ್ಯಕರ್ತರಿಗೆ ಅನುಮಾನ ಬೇಡ' ಎಂದಿದ್ದಾರೆ ನಿಖಿಲ್ ಕುಮಾರಸ್ವಾಮಿ.
ಲವರ್ ಬಾಯ್ ಲುಕ್ ನಲ್ಲಿ ಎಂಟ್ರಿ ಕೊಟ್ಟ 'ರೈಡರ್' ನಿಖಿಲ್ ಕುಮಾರ್
ಶಿವರಾಮೇಗೌಡರು, ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು, ಹಾಗಾಗಿ ಸುರೇಶ್ ಗೌಡ ಹಾಗೂ ಶಿವರಾಮೇಗೌಡರ ನಡುವೆ ವಾಕ್ಸಮರ ಏರ್ಪಟ್ಟಿತ್ತು. ಇದೀಗ ನಿಖಿಲ್ ಕುಮಾರಸ್ವಾಮಿ ಸುರೇಶ್ ಗೌಡ ಅವರೇ ಪಕ್ಷದ ಅಭ್ಯರ್ಥಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ, ಸುಮಲತಾ ಅಂಬರೀಶ್ ಎದುರು ಸೋಲು ಕಂಡಿದ್ದಾರೆ.