Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸೀತಾರಾಮ ಕಲ್ಯಾಣೋತ್ಸವಕ್ಕೆ ಸಿದ್ಧವಾಯ್ತು ರಾಮನಗರ
Recommended Video
ರೇಷ್ಮೆ ನಗರಿ ರಾಮನಗರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿನಯದ 'ಸೀತರಾಮ ಕಲ್ಯಾಣ' ಚಿತ್ರದ ಟೀಸರ್ ಇಂದು ರಿಲೀಸ್ ಮಾಡಲಾಗುತ್ತಿದೆ.
ರಾಮನಗರದ ಇತಿಹಾಸ ಪ್ರಸಿದ್ಧ ಚಾಮುಂಡೇಶ್ವರಿ ದೇವರ ಕರಗ ಉತ್ಸವದ ಪ್ರಯುಕ್ತ ಸಿಎಂ ಕರ್ಮಭೂಮಿ ರಾಮನಗರದಲ್ಲೇ ತಮ್ಮ ಪುತ್ರನ ನಟನೆಯ ಚಿತ್ರದ ಟೀಸರ್ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲಾ ಕ್ರೀಡಾಂಗಣದಲ್ಲಿ ಭವ್ಯ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಸುಮಾರು 30 ಸಾವಿರ ಆಸನದ ವ್ಯವಸ್ಥೆ ಕೂಡ ಮಾಡಲಾಗಿದೆ. ರಾತ್ರಿ 8 ಗಂಟೆಗೆ ಚಿತ್ರದ ಮೊದಲ ಟೀಸರ್ ಬಿಡುಗಡೆಗೊಳ್ಳಲಿದೆ.
ನಟ ನಿಖಿಲ್ ಕುಮಾರ್ ಬಗ್ಗೆ ರವಿಶಂಕರ್ ಮಾತು
ಸಿ.ಎಂ. ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರರಂಗದ ಹಲವು ನಟ ನಟಿಯರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಖ್ಯಾತ ಸಂಗೀತ ನಿದೇರ್ಶಕ ಅರ್ಜುನ್ ಜನ್ಯ ಅವರ ತಂಡದಿಂದ ಲೈವ್ ಮ್ಯೂಸಿಕಲ್ ರಸ ಸಂಜೆ ಕಾರ್ಯಕ್ರಮ ಕೂಡ ಏರ್ಪಡಿಸಲಾಗಿದೆ.
'ಸೀತರಾಮ ಕಲ್ಯಾಣ' ನಿಖಿಲ್ ನಟನೆಯ 2ನೇ ಚಿತ್ರವಾಗಿದೆ. ಫ್ಯಾಮಿಲಿ ಸಬ್ಜೆಕ್ಟ್ ಆಗಿರುವ ಈ ಚಿತ್ರಕ್ಕೆ ಎ.ಹರ್ಷ ನಿರ್ದೆಶನ ಮಾಡಿದ್ದಾರೆ. ಅಂದಹಾಗೆ, ಕಳೆದ ವರ್ಷ ಕೂಡ ಇದೇ ಚಾಮುಂಡೇಶ್ವರಿ ದೇವರ ಕರಗ ಉತ್ಸವದ ದಿನದಂದು ನಿಖಿಲ್ ಅಭಿನಯದ ಮೊದಲ ಚಿತ್ರ 'ಜಾಗ್ವಾರ್' ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಲಾಗಿತ್ತು.