Don't Miss!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಣ್ಣಿಮೆ ಚಂದ್ರನಾಗಿ ನಿಖಿತಾ ತುಕ್ರಲ್ ರೀ ಎಂಟ್ರಿ
'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ಚಿತ್ರದಲ್ಲಿ ಸಣ್ಣ ಪಾತ್ರ ಪೋಷಿಸಿದ್ದ ನಿಖಿತಾ ತುಕ್ರಲ್ ಕನ್ನಡಕ್ಕೆ ರೀ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಅವರದು ಹುಣ್ಣಿಮೆ ಚಂದ್ರನಂತೆ ಕಂಗೊಳಿಸಲಿದ್ದಾರೆ. ಚಿತ್ರದ ಹೆಸರು 'ಪೌರ್ಣಮಿ'. ಇದೇ ಮೊದಲ ಬಾರಿಗೆ ಒಲವೇ ಮಂದಾರ ಖ್ಯಾತಿಯ ಶ್ರೀಕಿಗೆ ಜೋಡಿಯಾಗುತ್ತಿದ್ದಾರೆ.
'ಪೌರ್ಣಮಿ' ಅಂತಹ ಅಪ್ಪಟ ಕನ್ನಡ ಶೀರ್ಷಿಕೆ ಹಾಗೂ ಪೌರ್ಣಮಿಯ ಪೂರ್ಣ ಚಂದ್ರನ ಬೆಳಕಿನಂತೆ ಒಂದು ಸುಂದರ ಚಿತ್ರವನ್ನು ಕಟ್ಟಿಕೊಡಲು ಫಿಲ್ಮ್ ಫ್ಯಾಕ್ಟರಿ ಕಂಬೈನ್ಸ್ ತಯಾರಿ ಶುರುವಿಟ್ಟುಕೊಂಡಿದೆ.
ಈ ಚಿತ್ರಕ್ಕಾಗಿ ಈಗಾಗಲೇ ಸೋನು ನಿಗಂ, ಸುನಿಧಿ ಚೌಹಾಣ್, ಸಿಂಚನ ದೀಕ್ಷಿತ್ ಅವರ ಕಂಠ ಸಿರಿಯಲ್ಲಿ ಹಾಡುಗಳ ಧ್ವನಿ ಮುದ್ರಣವನ್ನು ಸಂಗೀತ ನಿರ್ದೇಶಕ ಅರುಣ್ ಅವರು ಸಂಪೂರ್ಣಗೊಳಿಸಿದ್ದಾರೆ. ಇವರು ಈ ಹಿಂದೆ 'ಕೇಡಿಗಳು' ಚಿತ್ರಕ್ಕೆ ರಾಗ ಸಂಯೋಜನೆ ಮಾಡಿದವರು.
ಈ ಚಿತ್ರಕ್ಕೆ ಗೌರಿ ವೆಂಕಟೇಶ್ ಹಾಗೂ ವಿಕ್ರಮ್ ಯೋಗಾನಂದ್ ಛಾಯಾಗ್ರಾಹಕರು. ಕಿರಣ್ ವಿಪ್ರ ಹಾಗೂ ರಾಮಕೃಷ್ಣ ರಣಗಟ್ಟಿ ಸಂಭಾಷಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಹೊಸಮನೆ ಮೂರ್ತಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕೆ ಇದೆ.
ಶ್ರೀಕಿ ಹಾಗೂ ನಿಖಿತಾ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಪೋಷಕ ಪಾತ್ರಗಳಲ್ಲಿ ಪವಿತ್ರಾ ಗೌಡ, ಅರುಣ್ ಸಾಗರ್, ಧರ್ಮ, ಸುಂದರಶ್ರೀ, ಬೋಳಾರ್ ಹಾಗೂ ಇನ್ನಿತರಿದ್ದಾರೆ. (ಒನ್ಇಂಡಿಯಾ ಕನ್ನಡ)