Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ ಮೊಮ್ಮಗಳ 'ನಿನ್ನ ಸನಿಹಕೆ' ಚಿತ್ರಕ್ಕೆ ಮೊದಲ ದಿನವೇ ವಿಘ್ನ
ಭಾರಿ ನಿರೀಕ್ಷೆಗಳೊಂದಿಗೆ ತೆರೆಗೆ ಬಂದ 'ನಿನ್ನ ಸನಿಹಕೆ' ಚಿತ್ರಕ್ಕೆ ಮೊದಲ ದಿನವೇ ವಿಘ್ನ ಎದುರಾಗಿದೆ. ಚಿತ್ರಮಂದಿರಗಳಿಗೆ 100% ಅನುಮತಿ ಸಿಕ್ಕ ಮೇಲೆ ನಿರೀಕ್ಷೆಯ ಚಿತ್ರಗಳು ಬಿಡುಗಡೆಯಾಗುತ್ತಿವೆ. ತುಂಬಾ ದಿನದಿಂದ ಕಾದು ಕುಳಿತು ಈಗ ಸಂಭ್ರಮದಿಂದ ಸಿನಿಮಾ ರಿಲೀಸ್ ಮಾಡಿದ್ರೆ, ಮೊದಲ ಶೋನಲ್ಲೇ ಸಮಸ್ಯೆ ಎದುರಾಗಿದೆ.
ಸೂರಜ್ ಗೌಡ ಮತ್ತು ಧನ್ಯಾ ರಾಮ್ ಕುಮಾರ್ ನಟನೆಯ 'ನಿನ್ನ ಸನಿಹಕೆ' ಚಿತ್ರ ಇಂದು (ಅಕ್ಟೋಬರ್ 8) ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಜಿ ರಸ್ತೆಯಲ್ಲಿರುವ ಸಂತೋಷ್ ಚಿತ್ರಮಂದಿರ ಈ ಚಿತ್ರಕ್ಕೆ ಪ್ರಮುಖ ಥಿಯೇಟರ್ ಆಗಿತ್ತು. ಆದ್ರೀಗ, ಸಂತೋಷ್ ಥಿಯೇಟರ್ ಬೆಳಗ್ಗಿನ ಪ್ರದರ್ಶನ ರದ್ದಾಗಿದೆ.
'ನಿನ್ನ ಸನಿಹಕೆ' ಪ್ರೀಮಿಯರ್ ಶೋನಲ್ಲಿ ಅಣ್ಣಾವ್ರ ಇಡೀ ಕುಟುಂಬ ಭಾಗಿ
ತಾಂತ್ರಿಕ ದೋಷದಿಂದ ಸಂತೋಷ್ ಚಿತ್ರಮಂದಿರದಲ್ಲಿ 'ನಿನ್ನ ಸನಿಹಕೆ' ಚಿತ್ರದ ಶೋ ಸ್ಥಗಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಗಾಗಿ, ಮಧ್ಯಾಹ್ನದ ಶೋ ವೀಕ್ಷಿಸಲು ಸಂತೋಷ್ ಥಿಯೇಟರ್ ಬಳಿ ನೆರೆದಿದ್ದ ಪ್ರೇಕ್ಷಕರು ನವರಂಗ್ ಚಿತ್ರಮಂದಿರದ ಕಡೆ ಹೆಜ್ಜೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಮೂರು ದಿನದಿಂದಲೂ ಸಮಸ್ಯೆ ಇದ್ರೂ ಥಿಯೇಟರ್ ಮಾಲೀಕರಿಂದ ಚಿತ್ರತಂಡಕ್ಕೆ ಯಾವುದೇ ಮಾಹಿತಿ ನೀಡಿಲ್ಲ. ಚಿತ್ರತಂಡ ಅಲಂಕಾರ ಮಾಡಿಕೊಂಡು ಪ್ರೇಕ್ಷಕರು ಕಿಕ್ಕಿರಿದು ಸೇರಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ಕೊನೆ ಕ್ಷಣದಲ್ಲಿ ಪ್ರದರ್ಶನ ಸಾಧ್ಯವಿಲ್ಲ ಎಂದು ತಿಳಿಸಿರುವುದರಿಂದ ಚಿತ್ರತಂಡ ಬೇಸರ ವ್ಯಕ್ತಪಡಿಸಿದೆ.
ಪ್ರತಿಯೊಬ್ಬ ನಟ-ನಟಿಯರಿಗೂ ಮುಖ್ಯ ಚಿತ್ರಮಂದಿರದಲ್ಲಿ ಮೊದಲ ಶೋ ಸಕ್ಸಸ್ ಆಗಬೇಕು ಎಂಬ ಆಸೆ ಇರುತ್ತದೆ. ಅದರಲ್ಲೂ ಡಾ ರಾಜ್ ಕುಮಾರ್ ಮೊಮ್ಮಗಳ ಮೊದಲ ಚಿತ್ರ. ನಟ ಸೂರಜ್ ಗೌಡ ನಿರ್ದೇಶಿಸಿರುವ ಚೊಚ್ಚಲ ಸಿನಿಮಾ. ಈ ಇಬ್ಬರು ಬಹಳ ಆಸೆಗಳೊಂದಿಗೆ ಮೇನ್ ಥಿಯೇಟರ್ನಲ್ಲಿ ಮೊದಲ ಶೋ ನೋಡಲು ಕಾಯುತ್ತಿದ್ದರು. ಆದರೆ, ಚಿತ್ರತಂಡ ನಿರ್ಲಕ್ಷ್ಯದಿಂದ ಯುವ ಕಲಾವಿದರಿಗೆ ನಿರಾಸೆ ಉಂಟಾಗಿದೆ.
ನಿನ್ನ ಸನಿಹಕೆ ಚಿತ್ರದ ಮೊದಲ ಟಿಕೆಟ್ ಮುಖ್ಯಮಂತ್ರಿ ಬೊಮ್ಮಾಯಿಗೆ
ಇನ್ನುಳಿದಂತೆ ರಾಜ್ಯದಾದ್ಯಂತ ತೆರೆಕಂಡಿರುವ 'ನಿನ್ನ ಸನಿಹಕೆ' ಚಿತ್ರ ಅದ್ಧೂರಿ ಓಪನಿಂಗ್ ಪಡೆದುಕೊಂಡಿದೆ. ವಿಶೇಷವಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಯಶಸ್ವಿ ಪ್ರದರ್ಶನ ಕಾಣ್ತಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಪ್ರೀಮಿಯರ್ ಪ್ರದರ್ಶನದಲ್ಲಿ ರಾಜ್ ಕುಟುಂಬ
ಗುರುವಾರ ರಾತ್ರಿ ಬೆಂಗಳೂರಿನ ಒರೆಯಾನ್ ಮಾಲ್ನಲ್ಲಿ ನಿನ್ನ ಸನಿಹಕೆ ಚಿತ್ರದ ಪ್ರೀಮಿಯರ್ ಪ್ರದರ್ಶನ ಆಯೋಜಿಸಲಾಗಿತ್ತು. ಈ ಶೋಗೆ ಇಡೀ ರಾಜ್ ಕುಟುಂಬ ಭಾಗಿಯಾಗಿತ್ತು. ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸಿನಿಮಾ ನೋಡಿ ಧನ್ಯಾ ಹಾಗೂ ಸೂರಜ್ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಧನ್ಯಾ ನಾಯಕಿಯಾಗಿ ನಟಿಸಿರುವ 'ನಿನ್ನ ಸನಿಹಕೆ' ಚಿತ್ರದಲ್ಲಿ ಸೂರಜ್ ಗೌಡ ನಾಯಕನಾಗಿ ನಟಿಸಿ ಸ್ವತಃ ಅವರೇ ನಿರ್ದೇಶಿಸಿದ್ದಾರೆ. ವೈಟ್ ಅಂಡ್ ಗ್ರೇ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಕ್ಷಯ್ ರಾಜಶೇಖರ್, ರಂಗನಾಥ್ ಕುಡ್ಲಿ ನಿರ್ಮಿಸಿದ್ದಾರೆ. ರಘು ದೀಕ್ಷಿತ್ ಸಂಗೀತ ಒದಗಿಸಿದ್ದಾರೆ.