Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿನ್ನಿಂದಲೇ ಚಿತ್ರದ ನಾಯಕಿ ದರ್ಶನ್ ಚಿತ್ರದಿಂದ ಔಟ್
ಪುನೀತ್ ರಾಜಕುಮಾರ್ ಅಭಿನಯದ ನಿನ್ನಿಂದಲೇ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎರಿಕಾ ಫರ್ನಾಂಡಿಸ್, ದರ್ಶನ್ ಅಭಿನಯದ ಮುಂದಿನ ಚಿತ್ರ 'ಐರಾವತ'ದಿಂದ ಹೊರಬಿದ್ದಿದ್ದಾರೆ.
ಎರಿಕಾ ಈ ಚಿತ್ರದಿಂದ ಹೊರಬಿದ್ದಿರುವ ವಿಷಯವನ್ನು ಐರಾವತ ಚಿತ್ರದ ನಿರ್ದೇಶಕ ಎ ಪಿ ಅರ್ಜುನ್ ಖಚಿತ ಪಡಿಸಿದ್ದಾರೆ. ಎರಿಕಾ ಚಿತ್ರದಿಂದ ಹೊರಬಿದ್ದಿರುವುದಕ್ಕೆ ಕಾರಣ ಆಕೆಯ ಪರ್ಸನಾಲಿಟಿ. (ಗೋಲ್ಡನ್ ಸ್ಟಾರ್ ಜೊತೆ ಬುಗುರಿ ಆಡಲಿರುವ ಎರಿಕಾ)
ಚಿಕನ್ ಪಾಕ್ಸ್ ಕಾಯಿಲೆಯಿಂದ ಈಗತಾನೇ ಚೇತರಿಸಿಕೊಳ್ಳುತ್ತಿರುವ ಎರಿಕಾ ಸಿಕ್ಕಾಪಟ್ಟೆ ಸಪೂರವಾಗಿರುವುದರಿಂದ ಈ ನಿರ್ಧಾರ ತೆಗೆದು ಕೊಳ್ಳಬೇಕಾಯಿತು ಎನ್ನುತ್ತಾರೆ ನಿರ್ದೇಶಕ ಅರ್ಜುನ್.
ಎರಿಕಾಗೆ ದಪ್ಪಗಾಗಲು ಕೆಲವು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಈಗ ಆಕೆಯ ಪರ್ಸನಾಲಿಟಿ ದರ್ಶನ್ ಜೊತೆ ಸರಿ ಹೋಗುತ್ತಿಲ್ಲ. ಹಾಗಾಗಿ ಅವರನ್ನು ಈ ಪ್ರಾಜೆಕ್ಟಿನಿಂದ ಕೈಬಿಡಲಾಗಿದೆ. ಇದಕ್ಕೆ ಬೇರೇನೂ ಕಾರಣವಿಲ್ಲ ಎಂದು ಅರ್ಜುನ್ ಹೇಳಿದ್ದಾರೆ.
ಚಿತ್ರದ ನಿರ್ಮಾಪಕರಿಗೆ ಮತ್ತು ನಟ ದರ್ಶನ್ ಗೆ ಈ ಬಗ್ಗೆ ಮಾಹಿತಿ ನೀಡಿದ್ದೇನೆ ಮತ್ತು ಅವರ ಅನುಮತಿಯನ್ನೂ ಪಡೆದಿದ್ದೇನೆ. ಚಿತ್ರಕ್ಕೆ ನಾಯಕಿಯಾಗಿ ಯಾರನ್ನು ಆಯ್ಕೆ ಮಾಡಬೇಕೆನ್ನುವ ಬಗ್ಗೆ ಮಾತುಕತೆಗಳು ನಡೆಯುತ್ತಿದೆ. ಆದಷ್ಟು ಬೇಗ ನಾಯಕಿಯನ್ನು ಆಯ್ಕೆಮಾಡಲಾಗುವುದು ಎಂದು ಅರ್ಜುನ್ ಹೇಳಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿರುವ ಮತ್ತು ಎಂ ಡಿ ಶ್ರೀಧರ್ ನಿರ್ದೇಶನದ 'ಬುಗುರಿ' ಚಿತ್ರಕ್ಕೂ ಎರಿಕಾ ಫರ್ನಾಂಡಿಸ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇನ್ನು ಬುಗುರಿ ಚಿತ್ರದಿಂದ ಏನು ಸುದ್ದಿ ಬರುತ್ತೋ ಮಾಹಿತಿಯಿಲ್ಲ.