Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎರಡುವರೆ ದಶಕದ ಬಳಿಕ ಮತ್ತೆ ಬಂದ ಕಮಾಂಡೋ ಅಜಯ್
ಒಂದು ಬ್ಯಾಂಕ್ ದರೋಡೆಯನ್ನು ಅಧ್ಬುತವಾಗಿ ತೆರೆ ಮೇಲೆ ತೋರಿಸಿದ್ದ ಸಿನಿಮಾ 'ನಿಷ್ಕರ್ಷ'. ಇಡೀ ಸಿನಿಮಾವನ್ನು ಒಂದು ಬ್ಯಾಂಕ್ ಕಟ್ಟಡದಲ್ಲಿ ಚಿತ್ರೀಕರಣ ಮಾಡಿ ಅಂದಿನ ಕಾಲಕ್ಕೆ ಬಹು ದೊಡ್ಡ ಸಾಹಸ ಮಾಡಿದ್ದರು ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ. ಈ ಸಿನಿಮಾದಲ್ಲಿ ವಿಷ್ಣುವರ್ಧನ್ ಕಮಾಂಡೋ ಅಜಯ್ ಆಗಿ ಕಾಣಿಸಿಕೊಂಡಿದ್ದರು.
ವಿಷ್ಣು ಕಪಾಳಕ್ಕೆ ಸುಹಾಸಿನಿ ಹೊಡೆದ ದೃಶ್ಯ ಬಾಬು ಎಂದಿಗೂ ಮರೆಯೋಲ್ಲ!
ಅಂದಹಾಗೆ, ಈಗ ಎರಡುವರೆ ದಶಕದ ಬಳಿಕ ಮತ್ತೆ ಕಮಾಂಡೋ ಅಜಯ್ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅರ್ಥಾತ್ 'ನಿಷ್ಕರ್ಷ' ಸಿನಿಮಾ 26 ವರ್ಷಗಳ ನಂತರ ಮತ್ತೆ ಬಿಡುಗಡೆ ಆಗುತ್ತಿದೆ. ಈ ವರ್ಷದ ವಿಷ್ಣುವರ್ಧನ್ ಹುಟ್ಟುಹಬ್ಬಕ್ಕೆ ಈ ಸಿನಿಮಾ ರಿ ರಿಲೀಸ್ ಆಗುತ್ತಿದೆ. ಡಿಜಿಟಲ್ ರೂಪದಲ್ಲಿ ಜಯಣ್ಣ ಬ್ಯಾನರ್ ನಲ್ಲಿ ಚಿತ್ರ ಸಪ್ಟೆಂಬರ್ 20ಕ್ಕೆ ಬಿಡುಗಡೆ ಆಗಲಿದೆ.
ವಿಷ್ಣು - ಅಂಬಿ ಮಾಡಬೇಕಿದ್ದ ಈ ಸಿನಿಮಾ ಕನಸಾಗಿಯೇ ಉಳಿದಿದೆ
ಸಪ್ಟೆಂಬರ್ 18 ರಂದು ವಿಷ್ಣು ಬರ್ತ್ ಡೇ ವಿಶೇಷವಾಗಿ ಆಗಾಗ ಅವರ ಹಳೆಯ ಸಿನಿಮಾಗಳು ಮರು ಬಿಡುಗಡೆ ಆಗುತ್ತಿರುತ್ತವೆ. ಆ ರೀತಿ ಈ ವರ್ಷ 'ನಿಷ್ಕರ್ಷ' ಚಿತ್ರದ ತೆರೆಗೆ ಬರುತ್ತಿದೆ. 'ನಿಷ್ಕರ್ಷ' ಸಿನಿಮಾ 1993ರಲ್ಲಿ ಬಿಡುಗಡೆ ಆಗಿತ್ತು. ವಿಷ್ಣು ಕೆರಿಯರ್ ನ ಬೆಸ್ಟ್ ಸಿನಿಮಾಗಳ ಪೈಕಿ ಇದು ಒಂದಾಗಿತ್ತು. ಜೊತೆಗೆ ಮೂರು ರಾಜ್ಯ ಪ್ರಶಸ್ತಿಗಳು ಚಿತ್ರಕ್ಕೆ ಸಿಕ್ಕವು.
ಸುನೀಲ್ ಕುಮಾರ್ ದೇಸಾಯಿ ತಮ್ಮ ಸ್ಟೈಲ್ ನಲ್ಲಿ ಥ್ರಿಲ್ಲರ್ ಕಥೆ ಹೇಳಿ ಗೆದ್ದಿದ್ದರು. ಅನಂತ್ ನಾಗ್, ಗುರುಕಿರಣ್, ಬಿಸಿ ಪಾಟೀಲ್, ಪ್ರಕಾಶ್ ರೈ, ಅವಿನಾಶ್, ರಮೇಶ್ ಭಟ್ ಸಿನಿಮಾದಲ್ಲಿ ನಟಿಸಿದ್ದರು.