Don't Miss!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಶ್ವಿಕಾ ನಾಯ್ಡು ಪ್ರಕಾರ 'ಜಂಟಲ್ ಮ್ಯಾನ್' ಅಂದ್ರೆ ಇವರಂತೆ!
ಪ್ರಜ್ವಲ್ ದೇವರಾಜ್ ನಟನೆಯ 'ಜಂಟಲ್ ಮ್ಯಾನ್' ಸಿನಿಮಾ ಫೆಬ್ರವರಿ 7 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಪ್ರಜ್ವಲ್ ಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ಕಾಣಿಸಿಕೊಂಡಿದ್ದಾರೆ.
ಇತ್ತೀಚಿಗಷ್ಟೆ ಫಿಲ್ಮಿಬೀಟ್ ಕನ್ನಡದ ಜೊತೆ ಸಂದರ್ಶನದಲ್ಲಿ ಭಾಗಿಯಾಗಿದ್ದ ನಿಶ್ವಿಕಾ ನಾಯ್ಡು, ತಮ್ಮ ನಿಜ ಜೀವನದಲ್ಲಿ ಜಂಟಲ್ ಮ್ಯಾನ್ ಅಂದ್ರೆ ಯಾರು ಎಂದು ಹೇಳಿಕೊಂಡಿದ್ದಾರೆ.
'ನನ್ನ ತಂದೆ ತನ್ನ ಜೀವನದಲ್ಲಿ ನಿಜವಾದ ಜಂಟಲ್ ಮ್ಯಾನ್' ಎಂದಿದ್ದಾರೆ ನಿಶ್ವಿಕಾ ನಾಯ್ಡು. ಇನ್ನು ಜಂಟಲ್ ಮ್ಯಾನ್ ಸಿನಿಮಾದ ಬಗ್ಗೆ ಮಾತನಾಡಿದ ನಟಿ, 'ಕಥೆ ಕೇಳಿದಾಗ ಇದೊಂದು ಕಾಮಿಡಿ ಸಿನಿಮಾ ಅಂದುಕೊಂಡಿದ್ದೆ. 18 ಗಂಟೆ ನಿದ್ದೆ ಮಾಡುವುದು ಅಂದ್ರೆ ಬಹುಶಃ ಪಕ್ಕಾ ಕಾಮಿಡಿ ಸ್ಕ್ರಿಪ್ಟ್ ಇರಬಹುದು ಅನಿಸುತ್ತಿತ್ತು. ಆದರೆ, ಆಮೇಲೆ ಗೊತ್ತಾಯ್ತು ಇದು ಥ್ರಿಲ್ಲಿಂಗ್ ಸಬ್ಜೆಕ್ಟ್ ಅಂತ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ' ಎಂದು ಅನುಭವ ಹಂಚಿಕೊಂಡರು.
ಫೆಬ್ರವರಿ 7ಕ್ಕೆ 'ಜಂಟಲ್ ಮ್ಯಾನ್' ಸಿನಿಮಾ ಅದ್ಧೂರಿ ಬಿಡುಗಡೆ
''ಪ್ರಜ್ವಲ್ ದೇವರಾಜ್ ಜೊತೆ ನಾನು ಮೊದಲ ದೃಶ್ಯ ನಟಿಸಿದಾಗಲೇ ನಿಮ್ಮ ಜೋಡಿ ತುಂಬಾ ಚೆನ್ನಾಗಿದೆ ಎಂದು ಸೆಟ್ ನಲ್ಲಿದ್ದವರೆಲ್ಲ ಹೇಳಿದರು. ನಂತರ ನಿರ್ದೇಶಕರು ಅದೇ ಹೇಳಿದರು. ಈಗ ಹಾಡುಗಳು ಬಂದಿದೆ. ಇದನ್ನ ನೋಡಿ ಜನರು ಕೂಡ ಒಳ್ಳೆಯ ಜೋಡಿ ಎನ್ನುತ್ತಿದ್ದಾರೆ. ಇದು ಖುಷಿ ಕೊಡ್ತಿದೆ'' ಎಂದು ಸಂತಸ ಹಂಚಿಕೊಂಡಿದ್ದಾರೆ.
'ಎದ್ದೇಳು ಭಾರತೀಯ' ಅಂತಿದ್ದಾರೆ ಪ್ರಜ್ವಲ್ ದೇವರಾಜ್
'ಸಿನಿಮಾದಲ್ಲಿ ಹೆಚ್ಚು ಸೀರೆಯಲ್ಲಿ ಕಾಣಿಸಿಕೊಂಡಿದ್ದೇನೆ. ಸೀರೆ ತೊಡುವುದು ಕೂಡ ಈ ಚಿತ್ರದಿಂದಲೇ ನಾನು ಕಲಿತೆ' ಎಂದು ಹೇಳಿಕೊಂಡಿದ್ದಾರೆ ನಿಶ್ವಿಕಾ ನಾಯ್ಡು. ಇನ್ನು ಹಲವು ವಿಚಾರಗಳನ್ನು ಫಿಲ್ಮಬೀಟ್ ಸಂದರ್ಶನದಲ್ಲಿ ನಿಶ್ವಿಕಾ ಹಂಚಿಕೊಂಡಿದ್ದಾರೆ. ಪೂರ್ತಿ ವಿಡಿಯೋ ಮುಂದಿದೆ ನೋಡಿ...
ಇನ್ನುಳಿದಂತೆ ಈ ಚಿತ್ರವನ್ನು ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನ ಗುರುದೇಶ ಪಾಂಡೆ ನಿರ್ಮಿಸಿದ್ದಾರೆ. ಸಂಚಾರಿ ವಿಜಯ್, ಬೇಬಿ ಆರಾಧ್ಯ, ಭರತ್ ಕಲ್ಯಾಣ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಸುಧಾಕರ್ ಶೆಟ್ಟಿ ಅವರ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಅವರ ಸಂಗೀತ, ವೆಂಕಟೇಶ್ ಯುಡಿವಿ ಅವರ ಸಂಕಲನ ಚಿತ್ರಕ್ಕಿದ್ದು, ಮುರಳಿ ಮಾಸ್ಟರ್ ಮತ್ತು ಗುಂಗುಮ್ ರಾಜು ಅವರ ನೃತ್ಯ ಸಂಯೋಜನೆ ಒಳಗೊಂಡಿದೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಧನಂಜಯ್, ಕಿನ್ನಲ್ ರಾಜ್ ಅವರ ಸಾಹಿತ್ಯವಿದ್ದು, ಸಂಚಿತ್ ಹೆಗ್ಡೆ, ವಿಜಯ್ ಪ್ರಕಾಶ್, ವಸಿಷ್ಠ ಸಿಂಹ ಅವರ ಧ್ವನಿಯಲ್ಲಿ ಹಾಡುಗಳು ಮೂಡಿಬಂದಿದೆ.