Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಂಡುಪಾಳ್ಯ 2' ಗ್ಯಾಂಗ್ ಗಿದ್ದ ದೊಡ್ಡ ಗಂಡಾಂತರ ತಪ್ತು
ನಿರ್ದೇಶಕ ಶ್ರೀನಿವಾಸ ರಾಜು ಆಕ್ಷನ್-ಕಟ್ ಹೇಳುತ್ತಿರುವ 'ದಂಡುಪಾಳ್ಯ 2' ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇತ್ತು. ಇತ್ತೀಚೆಗೆ 'ದಂಡುಪಾಳ್ಯ 2' ಚಿತ್ರದ ಶೂಟಿಂಗ್ ಗೆ ಮಧ್ಯಂತರ ತಡೆಕೋರಿ ಜೈಲಿನಲ್ಲಿದ್ದ 6 ಕೈದಿಗಳು ಅರ್ಜಿ ಸಲ್ಲಿಸಿದ್ದರು. ಇದರ ಪರಿಣಾಮವಾಗಿ ಶೂಟಿಂಗ್ ಅರ್ಧಕ್ಕೆ ನಿಂತು ಹೋಗಿತ್ತು.
ಇದೀಗ 'ದಂಡುಪಾಳ್ಯ 2' ಚಿತ್ರದ ವಿರುದ್ಧ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾ ಮಾಡಿರುವ ನ್ಯಾಯಾಲಯ ವಾದ-ವಿವಾದಗಳನ್ನು ಆಲಿಸಿ ಕೊನೆಗೂ ಚಿತ್ರ ನಿರ್ಮಾಣ ಹಾಗೂ ಪ್ರದರ್ಶನ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.[ಅಸಹ್ಯ ಹುಟ್ಟಿಸುವ 'ದಂಡುಪಾಳ್ಯ 2'ರ ಚಿತ್ರಗಳು, ಛೀ!]
ಇನ್ನು ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿರುವ 'ದಂಡುಪಾಳ್ಯ' ಖೈದಿಗಳು ತಮ್ಮ ಪರ ವಕೀಲರ ಮೂಲಕ ಬೆಂಗಳೂರು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಚಿತ್ರದಲ್ಲಿ ತಮ್ಮ ಪಾತ್ರಗಳನ್ನು ತೀರಾ ಕ್ರೂರವಾಗಿ ಮತ್ತು ಅವಮಾನಕರವಾಗಿ ತೋರಿಸುವ ಸಾಧ್ಯತೆ ಇರುವುದರಿಂದ ಚಿತ್ರದ ನಿರ್ಮಾಣ ಹಾಗೂ ಪ್ರದರ್ಶನಕ್ಕೆ ಅಡ್ಡಿಪಡಿಸಿ ಮಧ್ಯಂತರ ತಡೆಯಾಜ್ಞೆ ಕೋರಿದ್ದರು.[ಆರಂಭದಲ್ಲೇ ವಿಘ್ನ: 'ದಂಡುಪಾಳ್ಯ 2' ಚಿತ್ರಕ್ಕೆ ಕೋರ್ಟ್ ನೋಟಿಸ್]
ಆದರೆ ಅದಕ್ಕೆ ಪ್ರತಿಯಾಗಿ ಚಿತ್ರತಂಡದ ಪರ ವಕೀಲರಾದ ರವಿಶಂಕರ್ ಅವರು ವಾದ ಮಂಡಿಸಿ, 'ಕೋಟಿಗಟ್ಟಲೆ ದುಡ್ಡು ಸುರಿದು, ಸಾಮಾಜಿಕ ಕಳಕಳಿಯಿಂದ ಈ ಚಿತ್ರ ನಿರ್ಮಾಣ ಮಾಡುತ್ತಿರುವುದರಿಂದ ಇದಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆಯಾಗದಂತೆ ಚಿತ್ರ ಪ್ರದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು' ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.
ಚಿತ್ರತಂಡದವರ ವಾದ ಪರಿಗಣಿಸಿದ ನ್ಯಾಯಾಲಯವು, ಚಿತ್ರೀಕರಣ ಮತ್ತು ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ಕೊಡುವ ಮೂಲಕ ಎಲ್ಲಾ ಗಂಡಾಂತರಗಳಿಂದ 'ದಂಡುಪಾಳ್ಯ 2' ಚಿತ್ರವನ್ನು ಪಾರು ಮಾಡಿದೆ.['ದಂಡುಪಾಳ್ಯ' ಗ್ಯಾಂಗ್ ನಲ್ಲಿ ಪತ್ತೆಯಾದ ಸಂಜನಾ ಗಲ್ರಾನಿ]
ಅಂತೂ ಎಲ್ಲಾ ಸಮಸ್ಯೆಗಳು ನೀರು ಕುಡಿದಷ್ಟು ಸುಲಭವಾಗಿ ಪರಿಹಾರ ಆಗಿದ್ದಕ್ಕೆ ನಿರ್ದೇಶಕರು ಹಾಗೂ ಇಡೀ ಚಿತ್ರತಂಡದವರು ಉಸ್ಸಪ್ಪಾ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.