Don't Miss!
- News Bagalkote: ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ: ಮೆರವಣಿಗೆಯಲ್ಲಿ ಕಾಶಪ್ಪನವರ್ ಭರ್ಜರಿ ಡಾನ್ಸ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕತ್ತಲೆಯಲ್ಲಿ ವಿಷ್ಣುವರ್ಧನ್ ಸ್ಮಾರಕ: ಅಭಿಮಾನಿಗಳಿಂದ ಅಹೋರಾತ್ರಿ ಧರಣಿ
ಮೈಸೂರಿನಲ್ಲಿ ಮಧ್ಯಾಹ್ನ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ಡಾ.ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ ನಡೆಯಿತು, ರಾತ್ರಿ ಆಗುತ್ತಿದ್ದಂತೆ ಸರ್ಕಾರದ ನಿರ್ಲಕ್ಷ್ಯ ಬಹಿರಂಗವಾಯಿತು! ಸ್ಮಾರಕಕ್ಕೆ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದ್ದನ್ನು ವಿರೋಧಿಸಿ ಅಭಿಮಾನಿಗಳು ರಾತ್ರಿ ಧರಣಿ ನಡೆಸಿದರು.
ಎಚ್. ಡಿ.ಕೋಟೆ ಮಾನಂದವಾಡಿ ರಸ್ತೆಯಲ್ಲಿನ ವಿಷ್ಣು ಸ್ಮಾರಕವನ್ನು ವೀಕ್ಷಿಸಲು ಸಂಜೆ ಆಗಮಿಸಿದ ಅಭಿಮಾನಿಗಳಿಗೆ ಕತ್ತಲೆ ಕಂಡು ನಿರಾಸೆಯಾಯಿತು.
ಭಾನುವಾರ ಬೆಳಗ್ಗೆಯಿಂದಲೇ ಸ್ಮಾರಕ ವೀಕ್ಷಣೆಗೆ ಆಗಮಿಸಿದ್ದ ಸಾರ್ವಜನಿಕರು ಮಧ್ಯಾಹ್ನ 2ರವರೆಗೂ ಕಾದಿದ್ದರು. ಬಳಿಕ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದರಿಂದ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂದಿತ್ತು. ಸಂಜೆ ವೇಳೆ ವೀಕ್ಷಣೆಗೆ ಬಂದ ಅಭಿಮಾನಿಗಳಿಗೆ ವಿದ್ಯುತ್ ದೀಪ ವ್ಯವಸ್ಥೆ ಇಲ್ಲದೇ ಇರುವುದರಿಂದ ಓಡಾಡಲು ಪರದಾಡಿದರು. ಸರಿಯಾಗಿ ವ್ಯವಸ್ಥೆ ಮಾಡದೇ ವಿಷ್ಣುವರ್ಧನ್ ಅವರಿಗೆ ಸರಕಾರ ಅಪಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
'ಮೈಸೂರು ನಗರದಲ್ಲಿ ಇಂದು ಅದ್ದೂರಿಯಾಗಿ ನಡೆದ ವಿಷ್ಣು ಸ್ಮಾರಕ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ವಿಷ್ಣು ಅಭಿಮಾನಿಗಳಿಗೆ ಅನಂತಾನಂತ ಧನ್ಯವಾದಗಳು ಹಾಗೂ ಸರ್ಕಾರಕ್ಕೂ ಸಹ ಧನ್ಯವಾದಗಳು. ಆದರೆ ಮತ್ತೊಂದು ಬೇಸರದ ಸಂಗತಿ ಎಂದರೆ ಮೈಸೂರು ಜಿಲ್ಲಾ ಮಂತ್ರಿ ಎಸ್ ಟಿ ಸೋಮಶೇಖರ್ ಸಾಹಸಸಿಂಹ ವಿಷ್ಣು ಸ್ಮಾರಕ ಕಾರ್ಯಕ್ರಮ ಉದ್ಘಾಟನೆಗೆ ಬರದೆ ನಿರ್ಲಕ್ಷಿಸಿರುವುದು ಅದು ಅಭಿಮಾನಿಗಳಿಗೆ ನೋವು ಉಂಟಾಗಿದೆ. ಹಾಗೆಯೇ ವಿಷ್ಣು ಹೆಸರಿನಲ್ಲಿ ಹಲವಾರು ಚಿತ್ರನಟರು ಮುಂದೆ ಬಂದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ ಆದರೆ ಸ್ಮಾರಕ ಉದ್ಘಾಟನೆಗೆ ಚಲನಚಿತ್ರ ನಟರು ಯಾಕೆ ಬಂದಿಲ್ಲ ಎಂಬುವುದು ಅಭಿಮಾನಿಗಳ ಪ್ರಶ್ನೆ. ಈ ಕೂಡಲೇ ಜಿಲ್ಲಾ ಮಂತ್ರಿಗಳು ಸ್ಪಷ್ಟನೆಕೊಡಬೇಕು ಸ್ಮಾರಕ ಉದ್ಘಾಟನೆ ಕಾರ್ಯಕ್ರಮವು ಇನ್ನೂ ಅಚ್ಚುಕಟ್ಟಾಗಿ ನೆರವೇರಿಸಬಹುದಿತ್ತು. ಕತ್ತಲೆಯಲ್ಲೇ ಸ್ಮಾರಕ ಇದೆ. ದೂರದಿಂದ ಬಂದಂತ ಅಭಿಮಾನಿಗಳಿಗೆ ಇದರಿಂದ ಬೇಸರವಾಗಿದೆ ಎಂದು ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.
ಹದಿಮೂರು ವರ್ಷಗಳ ಬಳಿಕ ವಿಷ್ಣುವರ್ಧನ್ ಸ್ಮಾರಕವನ್ನು ಸರ್ಕಾರ ನಿರ್ಮಾಣ ಮಾಡಿದೆ. 11 ಕೋಟಿ ವೆಚ್ಚದಲ್ಲಿ ಸ್ಮಾರಕವೇನೋ ನಿರ್ಮಾಣವಾಗಿದೆಯಾದರು ಸೂಕ್ತವಾದ ವ್ಯವಸ್ಥೆಗಳನ್ನು ಪೂರ್ಣವಾಗಿ ಕಲ್ಪಿಸಲಾಗಿಲ್ಲ ಎಂದು ಅಭಿಮಾನಿಗಳು ಆರೋಪ ಮಾಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಳಿಗ್ಗೆ ವಿಷ್ಣುವರ್ಧನ್ ಸ್ಮಾರಕವನ್ನು ಉದ್ಘಾಟನೆ ಮಾಡಿದರು. ಬಸವರಾಜ ಬೊಮ್ಮಾಯಿ ಜೊತೆಗೆ ಸಂಸದ ಪ್ರತಾಪ್ ಸಿಂಹ, ಶಾಸಕ ರಾಮದಾಸ್, ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್ ಇನ್ನೂ ಕೆಲವು ಮುಖಂಡರು ಹಾಜರಿದ್ದರು.