Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್ 'ಮಾಸ್ಟರ್ ಪೀಸ್' ಬಿಡುಗಡೆಗೆ ನೋ ಪ್ರಾಬ್ಲಂ!!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ 'ಮಾಸ್ಟರ್ ಪೀಸ್' ಬಿಡುಗಡೆಗೆ ಎರಡೇ ದಿನ ಬಾಕಿ. ಅಷ್ಟರಲ್ಲೇ, ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿತ್ತು.
ಸಂತೋಷ್ ಚಿತ್ರಮಂದಿರದಲ್ಲಿ ಹಾಕಲಾದ ಕಟೌಟ್ ಸಲುವಾಗಿ 'ಮಾಸ್ಟರ್ ಪೀಸ್' ಚಿತ್ರದ ವಿರುದ್ಧ 'ಜಾತ್ರೆ' ಸಿನಿಮಾ ನಾಯಕ ಚೇತನ್ ಚಂದ್ರ ಬೇಸರಗೊಂಡಿದ್ದರು. ['ಮಾಸ್ಟರ್ ಪೀಸ್' ಬಿಡುಗಡೆಗೆ ಮುನ್ನ ಏನಿದು ಅಪಸ್ವರ.?]
ಆದ್ರೀಗ, ಎಲ್ಲಾ ಗೊಂದಲ-ಗದ್ದಲಕ್ಕೆ ಫುಲ್ ಸ್ಟಾಪ್ ಬಿದ್ದಿದೆ. 'ಜಾತ್ರೆ' ಹಾಗೂ 'ಮಾಸ್ಟರ್ ಪೀಸ್' ಚಿತ್ರ ನಡುವೆ ಎದ್ದಿದ್ದ ಅಸಮಾಧಾನ ಶಮನವಾಗಿದೆ. ನಟ ಚೇತನ್ ಚಂದ್ರ ಜೊತೆ ಯಶ್ ಮಾತುಕತೆ ನಡೆಸಿ ವಿವಾದಕ್ಕೆ ಶುಭಂ ಹಾಡಿದ್ದಾರೆ. [ಮುಯ್ಯಿಗೆ ಮುಯ್ಯಿ; ಯಶ್ 'ಮಾಸ್ಟರ್ ಪೀಸ್' ಕಟೌಟ್ ಪೀಸ್ ಪೀಸ್!]
ಅಂದ್ಹಾಗೆ, 'ಮಾಸ್ಟರ್ ಪೀಸ್' ಸಿನಿಮಾ ಇದೇ ಗುರುವಾರ (ಡಿಸೆಂಬರ್ 24) ಭಾರತದಾದ್ಯಂತ ಬಿಡುಗಡೆ ಆಗಲಿದೆ. 'ಕೇಡಿ ನಂ.1' ಆಗಿ ಯಶ್ ಸಿನಿಮಾದಲ್ಲಿ ಮಿಂಚಿದ್ದಾರೆ. ಯಶ್ ಜೊತೆ ಶಾನ್ವಿ ಡ್ಯುಯೆಟ್ ಹಾಡಿದ್ದಾರೆ.
'ಮಾಸ್ಟರ್ ಪೀಸ್' ಚಿತ್ರದ ಮೂಲಕ ಸಂಭಾಷಣೆಕಾರ ಮಂಜು ಮಾಂಡವ್ಯ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಮೊದಲ ಪ್ರಯತ್ನದಲ್ಲೇ ಯಶಸ್ಸು ಗಳಿಸುವ ಹುಮ್ಮಸ್ಸು ಮಂಜು ಮಾಂಡವ್ಯಗಿದೆ. ಅವರ ಕೈಹಿಡಿದು ಸಾಥ್ ಕೊಡುವ ಜವಾಬ್ದಾರಿ ನಿಮ್ಮದು...