Don't Miss!
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಲ್ಲ..ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ನಿರ್ಮಾಣ- ಅಶ್ವತ್ಥ್ ನಾರಾಯಣ್
Recommended Video
ಫಿಲ್ಮ್ ಸಿಟಿ ನಿರ್ಮಾಣ ಮಾಡಬೇಕು ಎನ್ನುವುದು ಎಷ್ಟೋ ವರ್ಷದ ಕನಸು. ಕಳೆದ ಬಾರಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷರಾಗಿದ್ದ ರಾಜೇಂದ್ರ ಸಿಂಗ್ ಬಾಬು ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವ ಪ್ಲಾನ್ ಇದೆ ಎಂದಿದ್ದರು. ಆದರೆ, ಅದು ಈಗ ಬೆಂಗಳೂರಿಗೆ ಶಿಫ್ಟ್ ಆಗಿದೆ.
ಮೈಸೂರಿನಲ್ಲಿ ಅಲ್ಲ.. ಬೆಂಗಳೂರಿನಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆಯಂತೆ. ಈ ವಿಷಯವನ್ನು ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ನಿನ್ನೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಡಾ.ವಿ. ಸರೋಜದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಫಿಲ್ಮ್ ಸಿಟಿ ವಿಷಯ ಹಂಚಿಕೊಂಡಿದ್ದಾರೆ.
ಬಿಜಿಪಿ ಸರ್ಕಾರ ರಾಜ್ಯದಲ್ಲಿ ಬಂದ ದಿನವೇ ಮುಖ್ಯಮಂತ್ರಿ ಯಡಿಯೂರಪ್ಪ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಚಿಂತನೆ ನಡೆಸಿದ್ದು, ಈ ಜವಾಬ್ದಾರಿಯನ್ನು ಅಶ್ವತ್ಥ್ ನಾರಾಯಣ್ ರಿಗೆ ನೀಡಿದ್ದಾರಂತೆ. ಹೀಗಾಗಿ, ತಮ್ಮ ಸರ್ಕಾರದಿಂದ ಫಿಲ್ಮ್ ಸಿಟಿ ನಿರ್ಮಾಣ ಆಗುವುದು ಖಚಿತ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ದ್ವೇಷ ರಾಜಕಾರಣಕ್ಕೆ ಬಲಿಯಾಗುತ್ತಿದ್ಯಾ ಫಿಲಂಸಿಟಿ ಕನಸು?
ಫಿಲ್ಮ್ ಸಿಟಿಗಾಗಿ ಬೆಂಗಳೂರಿನಲ್ಲಿ ಈಗಾಗಲೇ ಒಂದು ಜಾಗ ನೋಡಲಾಗಿತಂತೆ. ಆದರೆ, ಕಾರಣಾಂತರಗಳಿಂದ ಆ ಜಾಗದಲ್ಲಿ ನಿರ್ಮಾಣ ಕಾರ್ಯ ಮಾಡಲು ಆಗುತ್ತಿಲ್ಲ. ಹೀಗಾಗಿ ಇನ್ನೊಂದು ಜಾಗವನ್ನು ಗುರುತಿಸಬೇಕಿದೆಯಂತೆ. ಆದಷ್ಟು ಬೇಗ ಈ ಕೆಲಸಗಳು ನಡೆಯಲಿದ್ದು, ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ಸಂಸ್ಥೆಗಳು ನಿರ್ಮಾಣ ಕಾರ್ಯದಲ್ಲಿ ಜೊತೆಯಾಗಲಿವೆಯಂತೆ.
ನಮ್ಮ ಸರ್ಕಾರ ಚಿತ್ರರಂಗದ ಅಭಿವೃದ್ದಿಗೆ ಪೂರ್ಣ ಸಹಕಾರ ನೀಡುತ್ತಿದ್ದು, ಆದಷ್ಟು ಬೇಗ ಫಿಲ್ಮ್ ಸಿಟಿ ನಿರ್ಮಾಣ ಆಗುತ್ತದೆ ಎಂದು ಅಶ್ವತ್ಥ್ ನಾರಾಯಣ್ ಭರವಸೆ ನೀಡಿದ್ದಾರೆ.