Don't Miss!
- News Dingaleshwar Swamiji: ಕೋಟಿ ಒಡೆಯ ದಿಂಗಾಲೇಶ್ವರ ಸ್ವಾಮೀಜಿಯ ಆಸ್ತಿ ವಿವರ ತಿಳಿಯಿರಿ
- Sports PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಲ್ಲ..ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ನಿರ್ಮಾಣ- ಅಶ್ವತ್ಥ್ ನಾರಾಯಣ್
Recommended Video
ಫಿಲ್ಮ್ ಸಿಟಿ ನಿರ್ಮಾಣ ಮಾಡಬೇಕು ಎನ್ನುವುದು ಎಷ್ಟೋ ವರ್ಷದ ಕನಸು. ಕಳೆದ ಬಾರಿ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷರಾಗಿದ್ದ ರಾಜೇಂದ್ರ ಸಿಂಗ್ ಬಾಬು ಮೈಸೂರಿನಲ್ಲಿ ಫಿಲ್ಮ್ ಸಿಟಿ ಮಾಡುವ ಪ್ಲಾನ್ ಇದೆ ಎಂದಿದ್ದರು. ಆದರೆ, ಅದು ಈಗ ಬೆಂಗಳೂರಿಗೆ ಶಿಫ್ಟ್ ಆಗಿದೆ.
ಮೈಸೂರಿನಲ್ಲಿ ಅಲ್ಲ.. ಬೆಂಗಳೂರಿನಲ್ಲಿಯೇ ಫಿಲ್ಮ್ ಸಿಟಿ ನಿರ್ಮಾಣ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆಯಂತೆ. ಈ ವಿಷಯವನ್ನು ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ನಿನ್ನೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದ ಡಾ.ವಿ. ಸರೋಜದೇವಿ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಫಿಲ್ಮ್ ಸಿಟಿ ವಿಷಯ ಹಂಚಿಕೊಂಡಿದ್ದಾರೆ.
ಬಿಜಿಪಿ ಸರ್ಕಾರ ರಾಜ್ಯದಲ್ಲಿ ಬಂದ ದಿನವೇ ಮುಖ್ಯಮಂತ್ರಿ ಯಡಿಯೂರಪ್ಪ ಫಿಲ್ಮ್ ಸಿಟಿ ನಿರ್ಮಾಣದ ಬಗ್ಗೆ ಚಿಂತನೆ ನಡೆಸಿದ್ದು, ಈ ಜವಾಬ್ದಾರಿಯನ್ನು ಅಶ್ವತ್ಥ್ ನಾರಾಯಣ್ ರಿಗೆ ನೀಡಿದ್ದಾರಂತೆ. ಹೀಗಾಗಿ, ತಮ್ಮ ಸರ್ಕಾರದಿಂದ ಫಿಲ್ಮ್ ಸಿಟಿ ನಿರ್ಮಾಣ ಆಗುವುದು ಖಚಿತ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ದ್ವೇಷ ರಾಜಕಾರಣಕ್ಕೆ ಬಲಿಯಾಗುತ್ತಿದ್ಯಾ ಫಿಲಂಸಿಟಿ ಕನಸು?
ಫಿಲ್ಮ್ ಸಿಟಿಗಾಗಿ ಬೆಂಗಳೂರಿನಲ್ಲಿ ಈಗಾಗಲೇ ಒಂದು ಜಾಗ ನೋಡಲಾಗಿತಂತೆ. ಆದರೆ, ಕಾರಣಾಂತರಗಳಿಂದ ಆ ಜಾಗದಲ್ಲಿ ನಿರ್ಮಾಣ ಕಾರ್ಯ ಮಾಡಲು ಆಗುತ್ತಿಲ್ಲ. ಹೀಗಾಗಿ ಇನ್ನೊಂದು ಜಾಗವನ್ನು ಗುರುತಿಸಬೇಕಿದೆಯಂತೆ. ಆದಷ್ಟು ಬೇಗ ಈ ಕೆಲಸಗಳು ನಡೆಯಲಿದ್ದು, ಅಂತಾರಾಷ್ಟ್ರೀಯ ಮಟ್ಟದ ದೊಡ್ಡ ಸಂಸ್ಥೆಗಳು ನಿರ್ಮಾಣ ಕಾರ್ಯದಲ್ಲಿ ಜೊತೆಯಾಗಲಿವೆಯಂತೆ.
ನಮ್ಮ ಸರ್ಕಾರ ಚಿತ್ರರಂಗದ ಅಭಿವೃದ್ದಿಗೆ ಪೂರ್ಣ ಸಹಕಾರ ನೀಡುತ್ತಿದ್ದು, ಆದಷ್ಟು ಬೇಗ ಫಿಲ್ಮ್ ಸಿಟಿ ನಿರ್ಮಾಣ ಆಗುತ್ತದೆ ಎಂದು ಅಶ್ವತ್ಥ್ ನಾರಾಯಣ್ ಭರವಸೆ ನೀಡಿದ್ದಾರೆ.