Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಮೂಲದ ಬಾಲಿವುಡ್ ಛಾಯಾಗ್ರಾಹಕ ಈಶ್ವರ ಬಿದರಿ ನಿಧನ
ಬಾಲಿವುಡ್ನ ಖ್ಯಾತ ಸಿನಿಮಾ ಛಾಯಾಗ್ರಾಹಕ ಈಶ್ವರ್ ಬಿದರಿ ಭಾನುವಾರ ಬೆಳಗ್ಗೆ ಕರ್ನಾಟಕದ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 87 ವರ್ಷ ಬಿದರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಸಂಬಂಧಿಯೊಬ್ಬರ ಮದುವೆ ಹಿನ್ನೆಲೆ ಕಳೆದ ವಾರ ಮುಂಬೈನಿಂದ ಬೆಳಗಾವಿಗೆ ಹೋಗಿದ್ದರು. ಬೆಳಗಾವಿಯಲ್ಲಿ ಹೃದಯಾಘಾತ ಸಂಭವಿಸಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಭಾನುವಾರ ಬೆಳಗ್ಗೆ 9.55ಕ್ಕೆ ನಿಧನರಾದರು ಎಂದು ಅವರ ಮಗ ಸಂಜೀವ್ ಬಿದರಿ ಪಿಟಿಐಗೆ ತಿಳಿಸಿದ್ದಾರೆ. (ಇಂಡಿಯಾ ಟು ಡೇ ವರದಿ ಮಾಡಿದೆ)
ಯುವ ನಿರ್ದೇಶಕ ಭರತ್ ಸಾವಿಗೆ ಮರುಗಿದ ಚಿತ್ರ ಸಾಹಿತಿ ಕವಿರಾಜ್
ಕನ್ನಡ ಮೂಲದ ಬಾಲಿವುಡ್ ಛಾಯಾಗ್ರಾಹಕ ಈಶ್ವರ ಬಿದರಿ ಬೆಂಗಳೂರಿನ ಎಸ್ಜೆ ಪಾಲಿಟೆಕ್ನಿಕ್ನಲ್ಲಿ ಸಿನಿಮಾಟೋಗ್ರಫಿ ಕಲಿತಿದ್ದರು. ನಂತರ ಮುಂಬೈಗೆ ತೆರಳಿ ಕನ್ನಡಿಗರೇ ಆದ ವಿ.ಕೆ.ಮೂರ್ತಿಯವರ ಬಳಿ ಸಹಾಯಕರಾಗಿ ಕೆಲಸ ಮಾಡಿದರು.
ವಿ.ಕೆ.ಮೂರ್ತಿ ಛಾಯಾಗ್ರಹಣ ಮಾಡಿರುವ 'ಪ್ಯಾಸಾ', 'ಕಾಗಝ್ ಕೆ ಫೂಲ್' ಸೇರಿದಂತೆ ಹಲವು ಹಿಂದಿ ಚಿತ್ರಗಳಿಗೆ ಬಿದರಿಯವರು ಸಹಾಯಕ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದರು.
ನಂತರ ಸ್ವತಂತ್ರ ಛಾಯಾಗ್ರಾಹಕರಾಗಿ ಬಾರ್ಡರ್, ಘಾತಕ್, ಅಂದಾಜ್, ಢಾಯಿ ಅಕ್ಷರ್ ಪ್ರೇಮ್ ಕೆ, ಅಂದಾಜ್ ಅಪ್ನಾ ಅಪ್ನಾ, ದಾಮಿನಿ, ಬಟ್ವಾರಾ, ಘುಲಾಮಿ, ಹತ್ಯಾರ್, ಯತೀಮ್ ಸೇರಿದಂತೆ ಹಲವು ಹಿಂದಿ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ.
ಚಿತ್ರೀಕರಣ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ನಟ!
Recommended Video
ಈಶ್ವರ ಬಿದರಿಯವರು ಮಾಜಿ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರ ಸೋದರ ಸಂಬಂಧಿ.